Home namma chikmagalur ಮಕ್ಕಳ ಆರೈಕೆ-ಶಾಲಾ ಪೂರ್ವ ಚಟುವಟಿಕೆಗೆ ಅಂಗನವಾಡಿ ಕೇಂದ್ರ ಸಹಕಾರಿ
namma chikmagalurHomeLatest News

ಮಕ್ಕಳ ಆರೈಕೆ-ಶಾಲಾ ಪೂರ್ವ ಚಟುವಟಿಕೆಗೆ ಅಂಗನವಾಡಿ ಕೇಂದ್ರ ಸಹಕಾರಿ

Share
Share

ಮೂಡಿಗೆರೆ: ಅಂಗನವಾಡಿ ಕೇಂದ್ರಗಳು ಕೇವಲ ಮಕ್ಕಳ ಆರೈಕೆ, ಶಾಲಾ ಪೂರ್ವ ಚಟುವಟಿಕೆ ಮಾತ್ರವಲ್ಲ, ಗರ್ಭಿಣಿ ಹಾಗೂ ಬಾಂಣಂತಿಯರ ಪೌಷ್ಟಿಕಾಂಶ ಶಿಕ್ಷಣ ಹಾಗೂ ಪೂರಕ ಆಹಾರ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.

ಅವರು ಮಂಗಳವಾರ ಹೆಸಗಲ್ ಗ್ರಾಮದಲ್ಲಿ ೧೦ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಅಂಗನವಾಡಿ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ತನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ೩೦೦ ಅಂಗನವಾಡಿ ಕೇಂದ್ರಗಳಿವೆ. ಕೆಲವೆಡೆ ಸ್ವಂತ ಕಟ್ಟಡವಿದ್ದು, ಕೆಲವೆಡೆ ಬಾಡಿಗೆ ಕಟ್ಟಡ ಹಾಗೂ ಸರಕಾರಿ ಕಟ್ಟಡಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದೆ. ತಾನು ಶಾಸಕರಾದ ಬಳಿಕ ಬಹುತೇಕ ಕಡೆ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದ್ದು, ಇನ್ನು ೩ ವರ್ಷದಲ್ಲಿ ಎಲ್ಲಾ ಕಡೆ ಸ್ವಂತ ಕಟ್ಟಡ ನಿರ್ಮಿಸುವ ಗುರಿ ಹೊಂದಿದ್ದೇನೆ. ಮಕ್ಕಳು ಮುಂದಿನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪಡೆಯಲು ಅಂಗನವಾಡಿ ಕೇಂದ್ರಗಳು ಅತ್ಯಂತ ಸಹಕಾರಿಯಾಗಿದೆ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಹಾಂತೇಶ್ ಭಜಂತ್ರಿ ಮಾತನಾಡಿ, ಅಂಗನವಾಡಿಗಳಲ್ಲಿ ಮಕ್ಕಳಿಗೆ ಮೊದಲ ಹಂತದ ಶಿಕ್ಷಣ ಮತ್ತು ಸಾಂಸ್ಕೃತಿಕ ಚಟುವಟಿಕೆ ಹಾಗೂ ಪೌಷ್ಠಿಕ ಆಹಾರ ಒದಗಿಸಲಾಗುತ್ತದೆ ಎಂದ ಅವರು, ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಸದವರು ಇನ್ನೂ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ಜೋಗಣ್ಣಕೆರೆ, ಹಾಲೂರು, ಜಿ.ಹೊಸಳ್ಳಿ, ಗುತ್ತಿಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡವನ್ನು ಶಾಸಕಿ ನಯನಾ ಮೋಟಮ್ಮ ಉದ್ಘಾಟಿಸಿದರು. ಬಳಿಕ ಮೂಲರಹಳ್ಳಿ ರಸ್ತೆಯಲ್ಲಿ ಭೂ ಕುಸಿತ ಉಂಟಾಗಿ ರಸ್ತೆ ಹಾನಿಯಾಗಿದ್ದ ಸ್ಥಳಕ್ಕೆ ಭೇಟಿ ನೀಡಿ ಕೂಡಲೇ ರಸ್ತೆ ದುರಸ್ತಿಪಡಿಸಲು ಪಂಚಾಯತ್ ರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಜಿ.ಸುರೇಂದ್ರ, ಕಾರ್ಯದರ್ಶಿ ಸಂಪತ್, ಬಿಳಗುಳ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಚಂದ್ರು ಒಡೆಯರ್, ಸುಧಾ ಮಂಜುನಾಥ್, ಪ್ರಜಾವತಿ, ಸಿ.ಎಚ್.ಅಹಮದ್ ಬಾವ, ಸಂಪತ್, ಮೋಯ್ದಿನ್ ಸೇಟ್, ಸುರೇಂದ್ರ ಉಗ್ಗೆಹಳ್ಳಿ, ತಾಪಂ ಸಹಾಯಕ ನಿರ್ದೇಶಕ ನವೀನ್, ಸಿಡಿಪಿಒ ಶೋಭಾ, ಹೆಸಗಲ್ ಗ್ರಾ.ಪಂ. ಪಿಡಿಒ ಸೌಮ್ಯಾ ಮತ್ತಿತರರಿದ್ದರು.

Child Care-Preschool Activity Anganwadi Center Cooperative

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...