Home namma chikmagalur chikamagalur ಮಕ್ಕಳ ರಕ್ಷಣೆಗಾಗಿ ಮಕ್ಕಳ ರಕ್ಷಣಾ ಸಿಬ್ಬಂದಿಗಳ ಮನವಿ
chikamagalurHomeLatest Newsnamma chikmagalur

ಮಕ್ಕಳ ರಕ್ಷಣೆಗಾಗಿ ಮಕ್ಕಳ ರಕ್ಷಣಾ ಸಿಬ್ಬಂದಿಗಳ ಮನವಿ

Share
Share

ಚಿಕ್ಕಮಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲೆಯ ಮಕ್ಕಳ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಕ್ಕಳ ರಕ್ಷಣಾ ಸಿಬ್ಬಂದಿಗಳು ಇಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಮಕ್ಕಳ ರಕ್ಷಣಾ ಕಾರ್ಯಕ್ರಮಗಳು ಖಾಯಂ ಸ್ವರೂಪದ್ದಾಗಿದ್ದು, ಮಿಷನ್ ವಾತ್ಸಲ್ಯ ಯೋಜನೆಯನ್ನು ಖಾಯಂಗೊಳಿಸಿ ವೇತನ ಹೆಚ್ಚಳ ಮಾಡಬೇಕು. ಪಶ್ಚಚಿಮ ಬಂಗಾಳ ಮಿಷನ್ ವಾತ್ಸಲ್ಯ ಮಾದರಿಯಲ್ಲಿ ರಜೆ ಸೌಲಭ್ಯ, ೬೦ ವರ್ಷಗಳ ಬರಗೆ ಉದ್ಯೋಗ ಭದ್ರತೆ, ಸಕಾಲದಲ್ಲಿ ವೇತನ ಪಾವತಿ ಮಾಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

೧೪ ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳನ್ನು ಖಾಯಮಾತಿಗೊಳಿಸಲು ಸೇವಾನಿಯಮಾವಳಿಗಳ ರಚನೆ ಮಾಡುವುದು, ನ್ಯಾಯಾಲಯದ ತೀರ್ಪಿನಂತೆ ಸಮಾನ ಕೆಲಸಕ್ಕೆ ಸಮಾನ ವೇತನ, ೧೫ ದಿನಗಳ ಅನಾರೋಗ್ಯ/ ಗಳಿಕೆ ರಜೆ, ಚೈಲ್ಡ್ ಲೈನ್ ಸಿಬ್ಬಂದಿಗಳಿಗೆ ಮತ್ತು ಮಕ್ಕಳ ರಕ್ಷಣಾ ಘಟಕದ ಆಪ್ತ ಸಮಾಲೊಚಕರಿಗೆ, ಡಿ. ಗ್ರೂಪ್ ನೌಕರರಿಗೆ ಕನಿಷ್ಟ ವೇತನ ಜಾರಿಗೊಳಿಸಬೇಕೆಂದು ಕೋರಿದ್ದಾರೆ.

ವೇತನದಲ್ಲಿ ಕಡಿಮೆ ಮಾಡಿದ ಜಿಎಸ್ ಟಿ ಸೇವಾ ತೆರಿಗೆಯನ್ನು ಹಿಂದಿರುಗಿಸುವುದು, ಮಹಿಳಾ ಸಿಬ್ಬಂದಿಗೆ ವೇತನ ಸಹಿತ ಹೆರಿಗೆ ರಜೆ, ಮುಟ್ಟಿನ ರಜೆ ನೀಡುವುದು, ಮಕ್ಕಳ ರಕ್ಷಣಾ ನಿರ್ದೇಶನಾಲಯದಡಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗೆ ೧೦ ಲಕ್ಷ ಅಪಘಾತ ಚಿಕಿತ್ಸೆ ವೆಚ್ಚ ಮತ್ತು ವಿಮೆ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಮಂಜುನಾಥ್,  ಲೋಕೇಶ್, ಚೆಲುವರಾಜು, ರೇವಣಸಿದ್ದಪ್ಪ, ರೇಣುಕ, ಅಮಿತ, ದಾಕ್ಷಾಯಿಣಿ, ಧರ್ಮಾವತಿ ಸೇರಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು, ಬಾಲಕ ಬಾಲಕಿಯರ ಬಾನ ಮಂದಿರದ ಸಿಬ್ಬಂದಿ, ಸಹಾಯವಾಣಿ ಸಿಬ್ಬಂದಿ ಹಾಗೂ ದತ್ತು ಕೇಂದ್ರದ ಸಿಬ್ಬಂದಿಗಳು ಹಾಜರಿದ್ದರು.

Child protection workers appeal for child protection

 

Share

Leave a comment

Leave a Reply

Your email address will not be published. Required fields are marked *

Don't Miss

ಬಿಜೆಪಿ ಹೊಸದಾಗಿ ಗಾಂಧೀಜಿ ಬಗ್ಗೆ ಮಾತನಾಡಲು ಹೊರಟಿರುವುದು ಹಾಸ್ಯಾಸ್ಪದ

ಚಿಕ್ಕಮಗಳೂರು: ‘ಗಾಂಧಿ ಹೆಸರಿನಲ್ಲಿ ಕಾಂಗ್ರೆಸ್ಸಿಗರು ನುಂಗಣ್ಣರು’ ಎಂದು ಬಿಜೆಪಿ ನೀಡಿರುವ ಜಾಹೀರಾತು ಮತ್ತು ಟೀಕೆಗಳ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಚಿಕ್ಕಮಗಳೂರಿನಲ್ಲಿ ವಾಗ್ದಾಳಿ ನಡೆಸಿದ್ದಾರೆ. ಮಹಾತ್ಮ ಗಾಂಧೀಜಿಯವರ...

ಸಂತೆ ಸಮಸ್ಯೆ ಬಗೆಹರಿದಿದ್ದಲ್ಲಿ ವ್ಯಾಪಾರ ನಗರಸಭೆ ಆವರಣಕ್ಕೆ

ಚಿಕ್ಕಮಗಳೂರು:  ಸಂತೆ ಮೈದಾನಕ್ಕೆ ಅವಶ್ಯವಿರುವ ಮೂಲ ಸೌಕರ್ಯವನ್ನು ನಗರಸ ಭೆ ಆಡಳಿತ ಪೂರೈಸಬೇಕು. ನಿರ್ಲಕ್ಷಿಸಿದರೆ ಸಂಪೂರ್ಣ ಸಂತೆ ವ್ಯಾಪಾರವನ್ನು ನಗರಸಭಾ ಆವರಣಕ್ಕೆ ಸ್ಥಳಾಂತರಿಸುತ್ತೇವೆ ಎಂದು ಸಮಾಜ ಸೇವಾ ಕಾರ್ಯಕರ್ತರ ವೇದಿಕೆ ರಾಜ್ಯಾಧ್ಯಕ್ಷ...

Related Articles

ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದ ಸರ್ಕಾರಿ ನೌಕರ ಪತ್ತೆ

ಚಿಕ್ಕಮಗಳೂರು: ಕಡೂರು ಶಾಸಕರ ಪಿಎ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿದ್ದ ಸರ್ಕಾರಿ ನೌಕರ ಇಂದು ...

ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರ ಸಾವು

ಚಿಕ್ಕಮಗಳೂರು: ಜಿಲ್ಲೆಯ ಎರಡು ಸಂಭವಿಸಿದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಯರೇಹಳ್ಳಿ ಗ್ರಾಮದಿಂದ ಧರ್ಮಸ್ದಳಕ್ಕೆ...

ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಡಾ.ಎ.ಎಸ್.ಶಂಕರ್ ನಾರಾಯಣ್

ತರೀಕೆರೆ: ತರೀಕೆರೆ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬೆಂಗಳೂರು ಆಕಾಶ ವಾಣಿ ಕಾರ್ಯಕ್ರಮ ನಿರ್ದೇಶಕರಾದ ಡಾ.ಎ.ಎಸ್.ಶಂಕರ್...

ಕಾರ್ಮಿಕ ವಿರೋಧಿ ನಡೆ ಖಂಡಿಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು:  ಕಾರ್ಮಿಕ ವಿರೋಧಿ ನಡೆ ಅನುಸರಿಸುತ್ತಿರುವ ಸರ್ಕಾರಗಳ ವಿರುದ್ಧ ಗುರುವಾರ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಎಐಟಿಯುಸಿ,...