Home namma chikmagalur chikamagalur ಮಕ್ಕಳ ರಕ್ಷಣೆಗಾಗಿ ಮಕ್ಕಳ ರಕ್ಷಣಾ ಸಿಬ್ಬಂದಿಗಳ ಮನವಿ
chikamagalurHomeLatest Newsnamma chikmagalur

ಮಕ್ಕಳ ರಕ್ಷಣೆಗಾಗಿ ಮಕ್ಕಳ ರಕ್ಷಣಾ ಸಿಬ್ಬಂದಿಗಳ ಮನವಿ

Share
Share

ಚಿಕ್ಕಮಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲೆಯ ಮಕ್ಕಳ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಕ್ಕಳ ರಕ್ಷಣಾ ಸಿಬ್ಬಂದಿಗಳು ಇಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಮಕ್ಕಳ ರಕ್ಷಣಾ ಕಾರ್ಯಕ್ರಮಗಳು ಖಾಯಂ ಸ್ವರೂಪದ್ದಾಗಿದ್ದು, ಮಿಷನ್ ವಾತ್ಸಲ್ಯ ಯೋಜನೆಯನ್ನು ಖಾಯಂಗೊಳಿಸಿ ವೇತನ ಹೆಚ್ಚಳ ಮಾಡಬೇಕು. ಪಶ್ಚಚಿಮ ಬಂಗಾಳ ಮಿಷನ್ ವಾತ್ಸಲ್ಯ ಮಾದರಿಯಲ್ಲಿ ರಜೆ ಸೌಲಭ್ಯ, ೬೦ ವರ್ಷಗಳ ಬರಗೆ ಉದ್ಯೋಗ ಭದ್ರತೆ, ಸಕಾಲದಲ್ಲಿ ವೇತನ ಪಾವತಿ ಮಾಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

೧೪ ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳನ್ನು ಖಾಯಮಾತಿಗೊಳಿಸಲು ಸೇವಾನಿಯಮಾವಳಿಗಳ ರಚನೆ ಮಾಡುವುದು, ನ್ಯಾಯಾಲಯದ ತೀರ್ಪಿನಂತೆ ಸಮಾನ ಕೆಲಸಕ್ಕೆ ಸಮಾನ ವೇತನ, ೧೫ ದಿನಗಳ ಅನಾರೋಗ್ಯ/ ಗಳಿಕೆ ರಜೆ, ಚೈಲ್ಡ್ ಲೈನ್ ಸಿಬ್ಬಂದಿಗಳಿಗೆ ಮತ್ತು ಮಕ್ಕಳ ರಕ್ಷಣಾ ಘಟಕದ ಆಪ್ತ ಸಮಾಲೊಚಕರಿಗೆ, ಡಿ. ಗ್ರೂಪ್ ನೌಕರರಿಗೆ ಕನಿಷ್ಟ ವೇತನ ಜಾರಿಗೊಳಿಸಬೇಕೆಂದು ಕೋರಿದ್ದಾರೆ.

ವೇತನದಲ್ಲಿ ಕಡಿಮೆ ಮಾಡಿದ ಜಿಎಸ್ ಟಿ ಸೇವಾ ತೆರಿಗೆಯನ್ನು ಹಿಂದಿರುಗಿಸುವುದು, ಮಹಿಳಾ ಸಿಬ್ಬಂದಿಗೆ ವೇತನ ಸಹಿತ ಹೆರಿಗೆ ರಜೆ, ಮುಟ್ಟಿನ ರಜೆ ನೀಡುವುದು, ಮಕ್ಕಳ ರಕ್ಷಣಾ ನಿರ್ದೇಶನಾಲಯದಡಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗೆ ೧೦ ಲಕ್ಷ ಅಪಘಾತ ಚಿಕಿತ್ಸೆ ವೆಚ್ಚ ಮತ್ತು ವಿಮೆ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಮಂಜುನಾಥ್,  ಲೋಕೇಶ್, ಚೆಲುವರಾಜು, ರೇವಣಸಿದ್ದಪ್ಪ, ರೇಣುಕ, ಅಮಿತ, ದಾಕ್ಷಾಯಿಣಿ, ಧರ್ಮಾವತಿ ಸೇರಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು, ಬಾಲಕ ಬಾಲಕಿಯರ ಬಾನ ಮಂದಿರದ ಸಿಬ್ಬಂದಿ, ಸಹಾಯವಾಣಿ ಸಿಬ್ಬಂದಿ ಹಾಗೂ ದತ್ತು ಕೇಂದ್ರದ ಸಿಬ್ಬಂದಿಗಳು ಹಾಜರಿದ್ದರು.

Child protection workers appeal for child protection

 

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...