Home namma chikmagalur ಜಿಲ್ಲೆಯಲ್ಲಿ ಚುಕ್ಕಿನಂಜುಂಡಸ್ವಾಮಿ ನೇತೃತ್ವದಲ್ಲಿ ರೈತಸಂಘ ಅಸ್ತಿತ್ವಕ್ಕೆ
namma chikmagalurchikamagalurHomeLatest News

ಜಿಲ್ಲೆಯಲ್ಲಿ ಚುಕ್ಕಿನಂಜುಂಡಸ್ವಾಮಿ ನೇತೃತ್ವದಲ್ಲಿ ರೈತಸಂಘ ಅಸ್ತಿತ್ವಕ್ಕೆ

Share
Share

ಚಿಕ್ಕಮಗಳೂರು:  ಜಿಲ್ಲೆಯ ಬಯಲು ಮತ್ತು ಮಲೆನಾಡು ಭಾಗದಲ್ಲಿ ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರೊ. ನಂಜುಂಡಸ್ವಾಮಿ ಅವರ ಮೂಲ ಸಂಘಟನೆ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕವನ್ನು ಸ್ಥಾಪಿಸಿದ್ದು, ರೈತ ಪರ ಹೋರಾಟ ಮುಂದುವರಿಯಲಿದೆ ಎಂದು ನೂತನ ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಟಿ.ಆನಂದ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾಮೂಹಿಕ ನಾಯಕತ್ವದಡಿಯಲ್ಲಿ ನೂತನ ಸಂಘಟನೆ ಹುಟ್ಟು ಹಾಕಲಾಗಿದೆ. ಈಗಾಗಲೇ ವಿವಿಧ ತಾಲೂಕು ಮತ್ತು ಹೋಬಳಿ ಮಟ್ಟದ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಗೌರವ ಅಧ್ಯಕ್ಷರಾಗಿ ಚನ್ನಬಸಪ್ಪ, ಮಹಿಳಾ ಅಧ್ಯಕ್ಷೆ ಕೆಂಪಮ್ಮ, ಕಡೂರು ಕೃಷ್ಣಮೂರ್ತಿ, ತರೀಕೆರೆ ಚಂದ್ರಶೇಖರ್, ಚಿಕ್ಕಮಗಳೂರು ತಾಲೂಕು ಅಧ್ಯಕ್ಷರಾಗಿ ಸಂಪತ್‌ಕುಮಾರ್, ವಸ್ತಾರೆ ಹೋಬಳಿಗೆ ಜೀವನ್ ನೆರಡಿ, ಕಾರ್ಯದರ್ಶಿಯಾಗಿ ಸಂತೋಷ್, ಲಕ್ಯಾ ಅಧ್ಯಕ್ಷರಾಗಿ ಜಗದೀಶ್, ಕಾರ್ಯದರ್ಶಿ ವಸಂತ್‌ಕುಮಾರ್, ಅಂಬಳೆಗೆ ಮಂಜೇಗೌಡ, ರಂಗೇಗೌಡ ಅವರನ್ನು ಕ್ರಮವಾಗಿ ಅಧ್ಯಕ್ಷ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಹೇಳಿದರು.

ಕಡೂರಿನಲ್ಲಿ ನಕಲಿ ಮರಣ ಪ್ರಮಾಣಪತ್ರ ತೋರಿಸಿ ಪೌತಿಖಾತೆ ಮಾಡಿಕೊಡಲಾಗುತ್ತಿದೆ ಇದಕ್ಕೆ ಕಡಿವಾಣ ಹಾಕಬೇಕು. ನೆರಡಿ ಗ್ರಾಮದಲ್ಲಿ ಸ್ಮಶಾನಕ್ಕೆ ದಾರಿಯಿಲ್ಲ. ಈರುಳ್ಳಿ ಬೆಲೆ ಕುಸಿದಿದ್ದು ಬೆಳೆಗಾರ ಸಂಕಷ್ಟದಲ್ಲಿದ್ದಾನೆ ಈ ಸಂದರ್ಭ ಸರಕಾರ ನೆರವಿಗೆ ಬರಬೇಕು. ಕಡೂರು ತಾಲೂಕಿನ ನೀರಾವರಿ ಯೋಜನೆಗಳನ್ನು ಸಮರ್ಪವಾಗಿ ನಿರ್ವಹಿಸುವುದು ಸೇರಿದಂತೆ ಮತ್ತಿತರೆ ಸಮಸ್ಯೆ ಮುಂದಿಟ್ಟುಕೊಂಡು ಮುಂದಿನ ದಿನದಲ್ಲಿ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನೂತನ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Chukki Nanjundaswamy Farmers’ Association comes into existence

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...