Home namma chikmagalur chikamagalur ರೈತರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮಾರಾಮಾರಿ
chikamagalurHomeLatest Newsnamma chikmagalur

ರೈತರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮಾರಾಮಾರಿ

Share
Share

ಚಿಕ್ಕಮಗಳೂರು: ಶಾಂತಿಯುತವಾಗಿ ನಡೆಯಬೇಕಿದ್ದ ರೈತರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯೊಂದು ನೋಡನೋಡುತ್ತಿದ್ದಂತೆ ಜಿದ್ದಾಜಿದ್ದಿನ ಅಖಾಡವಾಗಿ ಮಾರ್ಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಹಂಗರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿದೆ. ಸಭೆಯಲ್ಲಿ ಅಧ್ಯಕ್ಷರು ಹಾಗೂ ನಿರ್ದೇಶಕರ ನಡುವೆ ಮಾತಿಗೆ ಮಾತು ಬೆಳೆದು, ಕೊನೆಗೆ ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿ ತೀವು ಗದ್ದಲ ಸೃಷ್ಟಿಯಾಗಿದೆ.

ಕಣತಿ ಸಮೀಪವಿರುವ ಸರ್ಕಾರಿ ಜಾಗದ ಬಳಕೆಯ ವಿಚಾರವೇ ಈ ಗಲಾಟೆಗೆ ಕಿಡಿ ಹೊತ್ತಿಸಿದೆ. ಸದರಿ ಜಾಗವನ್ನು ಸರ್ಕಾರದಿಂದ ಸಂಘದ ಹೆಸರಿಗೆ ಮಂಜೂರು ಮಾಡಿಸಿಕೊಂಡು, ಅಲ್ಲಿ ವಾಣಿಜ್ಯ ಮಳಿಗೆಗಳು ಹಾಗೂ ಪೆಟ್ರೋಲ್ ಬಂಕ್ ನಿರ್ಮಿಸಲು ಸಂಘದ ಅಧ್ಯಕ್ಷ ಅರುಣ್ ಹಾಗೂ ನಿರ್ದೇಶಕ ದಿಲೀಪ್ ಮುಂದಾಗಿದ್ದರು ಎನ್ನಲಾಗಿದೆ.

ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಮತ್ತೋರ್ವ ನಿರ್ದೇಶಕ ಬೈಗೂರು ನಾಗೇಶ್, ಆ ಜಾಗದಲ್ಲಿ ಬಡ ಜನರಿಗೆ ನಿವೇಶನಗಳನ್ನು ಹಂಚಿಕೆ ಮಾಡಬೇಕು ಎಂದು ಕಡಾಖಂಡಿತವಾಗಿ ಪಟ್ಟು ಹಿಡಿದಿದ್ದಾರೆ.
ಈ ಹಿಂದೆ ಈ ಜಾಗವನ್ನು ಬಡವರ ಅನುಕೂಲಕ್ಕಾಗಿ ಬಳಸಿಕೊಳ್ಳಬೇಕೆಂದು ಗ್ರಾಮ ಪಂಚಾಯಿತಿ ಸಭೆಯಲ್ಲಿ ತೀರ್ಮಾನಿಸಲಾಗಿತ್ತು ಎನ್ನಲಾಗಿದ್ದು

ವಾರ್ಷಿಕ ಮಹಾಸಭೆಯಲ್ಲಿ ಈ ಜಾಗದ ಪ್ರಸ್ತಾಪ ಮುನ್ನೆಲೆಗೆ ಬರುತ್ತಿದ್ದಂತೆ ಎರಡೂ ಬಣಗಳ ನಡುವೆ ಏಕಾಏಕಿ ಮಾತಿನ ಚಕಮಕಿ ಶುರುವಾಗಿದೆ. ಪರಸ್ಪರ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿ ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದ್ದಂತೆ, ನೂಕಾಟ-ತಳ್ಳಾಟ ಹಾಗೂ ಮಾರಾಮಾರಿ ನಡೆದಿದೆ.

ಸಭಾಂಗಣದಲ್ಲೇ ಆಡಳಿತ ಮಂಡಳಿ ಮುಖಂಡರು ರಂಪಾಟಕ್ಕಿಳಿದಿದ್ದು ಸಭೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

Clash at the Farmers’ Cooperative Society’s annual general meeting.

Share

Leave a comment

Leave a Reply

Your email address will not be published. Required fields are marked *

Don't Miss

ಕೆಎಸ್‌ಆರ್‌ಟಿಸಿ ಬಸ್‌ಗಾಗಿ ರಸ್ತೆಗಿಳಿದ ವಿದ್ಯಾರ್ಥಿಗಳು-ಗ್ರಾಮಸ್ಥರು

ಕಡೂರು: ಗ್ರಾಮೀಣ ಭಾಗದ ಕುಗ್ರಾಮಗಳಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಗ್ರಾಮಸ್ಥರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ ಘಟನೆ ಕಡೂರು ತಾಲೂಕಿನ ಕಬ್ಬಳ್ಳಿ ಗೇಟ್ ಬಳಿ...

ವಿಶೇಷ ಅಧಿವೇಶನದಲ್ಲಿ ಪಕ್ಷಭೇದ ಮರೆತು ಮಲೆನಾಡಿನ ಸಮಸ್ಯೆ ಚರ್ಚಿಸಲು ಒತ್ತಾಯ

ಚಿಕ್ಕಮಗಳೂರು: ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ಸೆ.21, 22 ಮತ್ತು 23ರಂದು ಮೂರು ದಿನಗಳ ವಿಶೇಷ ಅಧಿವೇಶನ ಕರೆದಿರುವುದನ್ನು ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ ಸ್ವಾಗತಿಸಿದೆ....

Related Articles

ಪೌರ ಕಾರ್ಮಿಕರಿಗೆ ಸವಲತ್ತು ಕಲ್ಪಿಸಿ

ಚಿಕ್ಕಮಗಳೂರು:  ಪೌರಕಾರ್ಮಿಕರಿಗೆ ವಸತಿ ಸೌಲಭ್ಯ, ರಜೆ, ಮಕ್ಕಳ ಶಿಕ್ಷಣ ಸೇರಿದಂತೆ ಅವರ ಕಲ್ಯಾಣಕ್ಕೆ ಅಗತ್ಯ ಸೌಕರ್ಯಗಳನ್ನು...

ಗ್ರೌಂಡ್ ಸರ್ವೇ ಅಗತ್ಯ-’ಕಾರ್ಬನ್ ಕ್ರೆಡಿಟ್ ನಿಗಮ’ ಸ್ಥಾಪನೆಗೆ ಪ್ರಸ್ತಾಪ

ಚಿಕ್ಕಮಗಳೂರು:  ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯಕ್ಕೆ  ಸಂಬಂಧಿಸಿದಂತೆ ಉಪಗ್ರಹ ಆಧಾರಿತ ಚಿತ್ರಣವನ್ನು...

ಮಾಂಸ ಮಾರಾಟ- ಮೂವರ ಬಂಧನ

ಎನ್.ಆ‌ರ್. ಪುರ: ಕಾಡಿನಲ್ಲಿ ಮೇಯುತ್ತಿದ್ದ ಜಾನುವಾರನ್ನು ಹಿಡಿದು ತಂದು ಎಸ್ಟೇಟ್‌ ನ ಕೂಲಿಲೈನ್ ಬಳಿ ಬರ್ಬರವಾಗಿ...

ನಕಲಿ ಬೀಗದ ಕೈ ಬಳಸಿ ಮನೆಯಲ್ಲಿದ್ದ ನಗ-ನಗದು ಕಳವು

ಚಿಕ್ಕಮಗಳೂರು: ಮನೆಯ ಯಜಮಾನರು ಹಬ್ಬದ ಸಂಭ್ರಮಕ್ಕೆಂದು ಊರಿಗೆ ತೆರಳಿದ್ದ ಸಮಯವನ್ನೇ ಹೊಂಚು ಹಾಕಿ ಕಾದು, ನಕಲಿ...