Home Crime News ಹೊಸ ವರ್ಷದಂದೆ ಹೊಡೆದಾಡಿಕೊಂಡ ಪುಂಡರು : ಬಿಡಿಸಲು ಹೋದ ಆಂಬುಲೆನ್ಸ್ ಡ್ರೈವರ್ ಗೂ ಹಲ್ಲೆ
Crime News

ಹೊಸ ವರ್ಷದಂದೆ ಹೊಡೆದಾಡಿಕೊಂಡ ಪುಂಡರು : ಬಿಡಿಸಲು ಹೋದ ಆಂಬುಲೆನ್ಸ್ ಡ್ರೈವರ್ ಗೂ ಹಲ್ಲೆ

Share
Share

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ನ್ಯೂ ಇಯರ್ ಪಾರ್ಟಿ ಮುಗಿಸಿ ಕಳೆದ ರಾತ್ರಿ ಕುಡಿದ ಮತ್ತಿನಲ್ಲಿ ನಗರದ ಕೆಂಪನಹಳ್ಳಿ ಹಾಗೂ ಅರವಿಂದ ನಗರದ ಯುವಕರು ಕ್ಷುಲ್ಲಕ ಕಾರಣಕ್ಕೆ ಬಡಿದಾಡಿಕೊಂಡಿದ್ದಾರೆ. ಈ ವೇಳೆ ಗಾಯಗೊಂಡವರನ್ನು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಬಂದಾಗ ಮತ್ತೆ ಆಸ್ಪತ್ರೆ ಆವರಣದಲ್ಲಿಯೇ ಯುವಕರು ಬಡಿದಾಡಿಕೊಂಡು ಎದ್ದು, ಬಿದ್ದು ಬೈಕ್ ಗಳನ್ನು ಬೀಳಿಸಿಕೊಂಡು ಮೈ ಮೇಲೆ ಪ್ರಜ್ಞೆ ಇಲ್ಲದಂತೆ ಹೊಡೆದಾಡಿದ್ದಾರೆ.

ಈ ವೇಳೆ ಅಲ್ಲಿಯೇ ಸ್ಥಳದಲ್ಲಿ ವಾಹನ ನಿಲ್ಲಿಸಿಕೊಂಡು ಜಗಳ ಬಿಡಿಸಲು ಹೋದ ಆಂಬುಲೆನ್ಸ್ ಚಾಲಕ ಮೇಲೂ ಪುಂಡ ಯುವಕರು ಹಲ್ಲೆ ನಡೆಸಿರುವ ಆರೋಪ ಕೂಡಾ ಕೇಳಿ ಬಂದಿದೆ. ಸದ್ಯ ಪರಸ್ಪರ ಬಡಿದಾಡಿಕೊಂಡಿದ್ದ ನಾಲ್ವರು ಪುಂಡ ಯುವಕರು ಜಿಲ್ಲಾಸ್ಪತ್ರೆಯಲ್ಲಿ ಕಳೆದ ರಾತ್ರಿಯೇ ಚಿಕಿತ್ಸೆ ಪಡೆದು ಇಂದು ಬೆಳಿಗ್ಗೆ ಡಿಸ್ಚಾರ್ಜ್ ಆಗಿದ್ದು, ಪ್ರಕರಣ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು ಅದರೆ ಹೊಡೆದಾಟ ಘಟನೆಯ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಕುಡಿದ ಮತ್ತಿನಲ್ಲಿ ಮಾತಿಗೆ ಮಾತು ಬೆಳಿದು ಎರಡು ಏರಿಯಾ ಹುಡುಗರು ಕಿತ್ತಾಡಿಕೊಂಡಿದ್ದಾರೆ, ಆದರೆ ಬಿಡಿಸಲು ಹೋದ ಆಂಬುಲೆನ್ಸ್ ಡ್ರೈವರ್ ಮೇಲೆ ನಡೆಸಿದ ಹಲ್ಲೆ ಬಗ್ಗೆ ಮಾತ್ರ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...