ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಇಬ್ಬರ ಯುವಕರ ಸ್ಥಿತಿ ಗಂಭೀರವಾಗಿರುವ ಘಟನೆ ನಗರದ ಟೌನ್ ಕ್ಯಾಟೀನ್ ವೃತ್ತದಲ್ಲಿ ಭಾನುವಾರ ತಡ ರಾತ್ರಿ ನಡೆದಿದೆ.
ಮಾರಾಮಾರಿಯಲ್ಲಿ ಅಜಯ್ (೨೩) ಹಾಗೂ ಯತೀಶ್ (೨೩) ಎಂಬುವರ ಸ್ಥಿತಿ ಗಂಭೀರವಾಗಿದೆ. ಅಜಯ್ ತಲೆಗೆ ೭ ರಿಂದ ೮ ಕಡೆ ಹೊಡೆತ ಬಿದಿದ್ದು, ಯತೀಶ್ ಎಡಗೈಗೆ ಗಂಭೀರ ಗಾಯವಾಗಿದೆ.
ಇಬ್ಬರು ಯುವಕರಿಗೆ ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹಾಸನ ಜಿಲ್ಲೆಯ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚಿನ ದಿನಗಳಲ್ಲಿ ೧೭-೧೮ ವರ್ಷ ವಯೋಮಾನದ ಯುವಕರು ಬಡಿದಾಡಿಕೊಳ್ಳುತ್ತಿರುವ ಪ್ರಕರಣಗಳು ಚಿಕ್ಕಮಗಳೂರು ನಗರ ಪ್ರದೇಶದಲ್ಲಿ ಹೆಚ್ಚುತ್ತಿದೆ.
ಇಬ್ಬರು ಯುವಕರ ಪೋಷಕರು ಪ್ರತಿನಿತ್ಯ ಕೂಲಿ ಮಾಡಿ ಜೀವನ ಸಾಗಿಸುವಂತಾಗಿದೆ. ಹೆಚ್ಚಿನ ಯುವಕರು ಗಾಂಜಾ, ಮದ್ಯ ಸೇವಿಸಿ ಹೊಡೆದಾಡಿಕೊಳ್ಳುತ್ತಿದ್ದು, ಪೊಲೀಸ್ ಇಲಾಖೆ ಇಂತಹ ಯುವಕರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು.
ಇಂತಹ ಘಟನೆ ನಡೆಯದಂತೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
Clashes between two groups
Leave a comment