Home ವ್ಯಾಟ್ಸಪ್‌ನಲ್ಲಿ ಲಿಂಕ್‌ ಕ್ಲಿಕ್ – ೧೦.೪೯ ಲಕ್ಷ ರೂ. ಕಳವು
HomeCrime NewsLatest Newsnamma chikmagalur

ವ್ಯಾಟ್ಸಪ್‌ನಲ್ಲಿ ಲಿಂಕ್‌ ಕ್ಲಿಕ್ – ೧೦.೪೯ ಲಕ್ಷ ರೂ. ಕಳವು

Share
Share

ಚಿಕ್ಕಮಗಳೂರು: ವ್ಯಾಟ್ಸಪ್‌ನಲ್ಲಿ ಬಂದ ಲಿಂಕನ್ನು ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿಕೊಂಡ ಬಳಿಕ ಬ್ಯಾಂಕ್ ಖಾತೆಯಲ್ಲಿದ್ದ ೧೦.೪೯ ಲಕ್ಷ ರೂ. ಕಳೆದುಕೊಂಡ ಘಟನೆ ನೆಡೆದಿದ್ದು, ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದಲ್ಲಿ ಮಾ.೨೦ರಂದು ವ್ಯಕ್ತಿಯೊಬ್ಬರಿಗೆ ವ್ಯಾಟ್ಸಪ್ ಗ್ರೂಪ್‌ನಲ್ಲಿ ಪಿ.ಎಂ.ಕಿಸಾನ್ ಯೋಜನಾ. ಎಪಿಕೆ ಎಂಬ ಹೆಸರಿನಲ್ಲಿ ಪೋಸ್ಟ್ ಲಿಂಕ್ ಮಾಡಲಾಗಿದ್ದು, ಲಿಂಕ್ ಡೌನ್ ಲೋಡ್ ಮಾಡಿದ ಕೂಡಲೇ ವ್ಯಕ್ತಿಯ ಗಮನಕ್ಕೆ ಬರುವಷ್ಟರಲ್ಲಿ ಕೆನರಾಬ್ಯಾಂಕ್ ಖಾತೆಯಲ್ಲಿದ್ದ ೧೦.೪೯ಲಕ್ಷ ರೂ. ಕಡಿತಗೊಂಡಿದೆ.

ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಮಾ.೨೨ರಂದು ವಂಚನೆ ಪ್ರಕರಣ ದಾಖಲಾಗಿದೆ. ಸೈಬರ್ ವಂಚನೆ ಪ್ರಕರಣದಲ್ಲಿ ಎಪಿಕೆ( ಆಂಡ್ರಾಯ್ಡ್ ಪ್ಯಾಕೇಜ್ ) ಫೈಲ್ ವಂಚನೆಗಳು ಆಂಡ್ರಾಯ್ಡ್ ಮೊಬೈಲ್ ಬಳಕೆದಾರರನ್ನು ಗುರಿಯಾಗಿಸಿಕೊಂಡು ಮೋಸ ಮಾಡಲಾಗುತ್ತಿದೆ.

ಆದುದರಿಂದ ವಾಟ್ಸಪ್ ಫೇಸ್ ಬುಕ್ ಮೆಸೆಂಜರ್, ಟೆಲಿಗ್ರಾಂ ಸೇರಿ ಸಾಮಾಜಿಕ ಜಾಲತಾಣದಲ್ಲಿ ಬರುವ ಈ ರೀತಿಯ ಎಪಿಕೆ ಫೈಲ್‌ಗಳನ್ನು ಡೌನ್ ಲೋಡ್ ಮಾಡಿಕೊಳ್ಳದಂತೆ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವ ಜನಿಕರಲ್ಲಿ ವಿನಂತಿಸಿದೆ.

Clicking on a link on WhatsApp – Rs. 10.49 lakh stolen

Share

Leave a comment

Leave a Reply

Your email address will not be published. Required fields are marked *

Don't Miss

ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ ಪತ್ತೆ

ಚಿಕ್ಕಮಗಳೂರು:  ಭದ್ರಾ ಹುಲಿ ಸಂರಕ್ಷಿತ ಪ್ರದೇಶದ,ಹೆಬ್ಬೆ ವಲಯದ ಗಂಗೆಗಿರಿ ಸರ್ವೇ ನಂಬರ್ 15 ರ ಶಿರಗುಳ ಮೀಸಲು ಅರಣ್ಯದಲ್ಲಿ ದಿನಾಂಕ 6ನೆ ತಾರೀಕು ಬೆಳಿಗ್ಗೆ ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ...

ಕಾಫಿ ಕಳ್ಳತನ : ಆರೋಪಿಗಳ ಸೆರೆ- 2 ಕಾರು ವಶ

ಮೂಡಿಗೆರೆ: ತಾಲೂಕಿನ ಗೋಣಿಬೀಡು ಸಮೀಪ ರಂಗಸ್ವಾಮಿ ಅವರ ಕಾಫಿ ತೋಟದಲ್ಲಿ ಕಾಫಿ ಕಳ್ಳತನ ಮಾಡಿದ್ದ ೬ ಮಂದಿ ಆರೋಪಿಗಳನ್ನು ಗೋಣಿಬೀಡು ಪೊಲೀಸರು ಬಂಧಿಸಿ, ಸುಮಾರು ೩.೫೦ ಲಕ್ಷ ರೂ ಮೌಲ್ಯದ ಕಾಫಿ...

Related Articles

ವಾಯುಭಾರ ಕುಸಿತದ ಪರಿಣಾಮ ಜಿಲ್ಲೆಯಲ್ಲಿ ಸಾಧಾರಣ ಮಳೆ ಸಾಧ್ಯತೆ

ಚಿಕ್ಕಮಗಳೂರು: ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣವಿದ್ದು, ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ...

ಕಾಫಿನಾಡಿನ ಗಿರಿಭಾಗದಲ್ಲಿ ದಟ್ಟ ಮಂಜು

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸೂರ್ಯನ ದರ್ಶನವೇ ಇಲ್ಲದಂತಾಗಿದ್ದು, ಥಂಡಿ ವಾತಾವರಣ ಉಂಟಾಗಿದ್ದು,...

ಜಿಎಸ್‌ಬಿ ಯಿಂದ ಸಂಕ್ರಾಂತಿ ಸಂಭ್ರಮ

ಚಿಕ್ಕಮಗಳೂರು: ಸಂಕ್ರಾಂತಿ ಹಿನ್ನೆಲೆಯಲ್ಲಿ ಗೌಡಸಾರಸ್ವತ ಬ್ರಾಹ್ಮಣ ಸಮಾಜದಿಂದ ನಡೆಯುವ ಕೇಳ್ ಮೇಳ್ ಸಾಂಸ್ಕೃತಿಕ ಕಾರ್ಯಕ್ರಮ ನಗರದಲ್ಲಿ...

ಗಾಳಿಪಟ ಹಾರಾಟಕ್ಕೆ ಮನಸೋತ ಜನ

ಚಿಕ್ಕಮಗಳೂರು: ಆಕಾಶದಲ್ಲಿ ಹಾರುತ್ತಿದ್ದ ಹುಲಿ, ಜಿಂಕೆ, ಆನೆ, ಸಿಂಹ, ಚಿಟ್ಟೆಗಳು, ಪಕ್ಷಿಗಳು, ಗಿಡಮರಗಳು ಸೇರಿದಂತೆ ವಿವಿಧ...