Home Latest News ವಿಧಾನಸೌಧದ ಮೆಟ್ಟಿಲಿಗೆ ಸೀಮಿತವಾದ ಸಿಎಂ ಸಿದ್ದರಾಮಯ್ಯ… ?
Latest NewschikamagalurHome

ವಿಧಾನಸೌಧದ ಮೆಟ್ಟಿಲಿಗೆ ಸೀಮಿತವಾದ ಸಿಎಂ ಸಿದ್ದರಾಮಯ್ಯ… ?

Share
Share

ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ಇಡೀ ಕರ್ನಾಟಕಕ್ಕೆ ಸಿಎಂ ಎಂದು ನಾನು ತಿಳಿದಿದ್ದೆ. ಆದರೆ ಸಿದ್ದರಾಮಯ್ಯ ನಾನು ವಿಧಾನ ಸೌಧದ ಮೆಟ್ಟಿಲಿಗೆ ಮಾತ್ರ ಸಿಎಂ ಎಂದು ಭಾವಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವ್ಯಂಗ್ಯವಾಡಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಜವಾಬ್ದಾರಿ ಮೇರೆಗೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ಆಯೋಜಿಸಿದ್ದು ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ರಾಜ್ಯದ ಬೇರೆ ಕಡೆ ಜನ ಸಾವನ್ನಪ್ಪಿದರೆ ಸಿಎಂ ಹಾಗೂ ಕಾಂಗ್ರೆಸ್ಸಿಗೆ ಜವಾಬ್ದಾರಿ ಇರುವುದಿಲ್ಲವೇ ಎಂದು ಪ್ರಶ್ನಿಸಿದರು.

ಸರ್ಕಾರ ಎರಡು ಕಡೆ ಕಾರ್ಯಕ್ರಮ ಆಯೋಜಿಸಿದ ಕಾರಣ ಪೊಲೀಸರು ಭದ್ರತೆ ನೀಡಲು ಸಾಧ್ಯವಾಗಲಿಲ್ಲ. ನಿಮ್ಮ ಮಕ್ಕಳು ಹಾಗೂ ಮೊಮ್ಮಕ್ಕಳ ಸುರಕ್ಷತೆ ಬಗ್ಗೆ ಪೊಲೀಸರು ಗಮನಹರಿಸಿದರು. ಇದೆ ವೇಳೆ ಜನಸಾಮಾನ್ಯರು ಸಾವನ್ನಪ್ಪಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನಸಾಮಾನ್ಯರು ಮೃತಪಟ್ಟಿದ್ದಾರೆ ಎಂದು ತಿಳಿದಾಗ ಸಿಎಂ ಆತ್ಮಸಾಕ್ಷಿಗೆ ಚುಚ್ಚಬೇಕಿತ್ತಲ್ಲವೇ ಎಂದು ಹೇಳಿದ ಅವರು, ವಿಧಾನಸೌಧದ ಮೆಟ್ಟಿಲ ಮೇಲಿನ ಕಾರ್ಯಕ್ರಮಕ್ಕೆ ರಾಜ್ಯಪಾಲರನ್ನು ಕರೆಸಿದ್ದು ಯಾರು? ಡಿಪಿಆರ್ ಅವರಿಗೆ ಲೆಟರ್ ಕೊಟ್ಟವರು ಯಾರು ಎಂದು ಪ್ರಶ್ನಿಸಿದರು.

ಬೆಂಗಳೂರು ಕಾಲ್ತುಳಿತ ಪ್ರಕರಣ ನಡೆದ ಬಳಿಕ ನಾಲ್ಕನೇ ತಾರೀಖಿನ ಲೆಟರ್ ಗೆ 5 ನೇ ತಾರೀಖು ಸಹಿ ಹಾಕಿಸಿಕೊಂಡಿದ್ದಾರೆ. ಕಾಲ್ತುಳಿತ ಪ್ರಕರಣ ನಡೆದ ಮೇಲೆ ದಾಖಲೆ ಮಾಡಿಕೊಳ್ಳಲು ಇಲಾಖೆಗಳ ಸೀಲ್ ಹಾಗೂ ಸಹಿ ಹಾಕಿಸಿಕೊಂಡಿದ್ದಾರೆ. ಹೀಗಾಗಿಯೇ ರಾಜ್ಯದ ಉಚ್ಛ ನ್ಯಾಯಾಲಯದ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ ಎಂದು ಒತ್ತಾಯಿಸಿದ್ದೇನೆ ಎಂದರು.

ವಿಸ್ಕಿ ಪ್ರಮೋಟ್ ಮಾಡಲು ತಂಡಕ್ಕೆ ಆರ್‌ಸಿಬಿ ಎಂದು ಹೆಸರಿಟ್ಟೇ ಎಂದು ವಿಜಯ ಮಲ್ಯ ಹೇಳಿದ್ದಾರೆ. ಹೀಗಿರುವಾಗ ಮಲ್ಯ ಅವರ ವಿಸ್ಕಿ ಪ್ರಮೋಟ್ ಮಾಡಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ರೇಸ್ ಗೆ ಬೀಳಬೇಕಿತ್ತಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಘಟನೆ ನಡೆದ ದಿನ ಸುಮಾರು ನಾಲ್ಕು ಗಂಟೆ ಸುಮಾರಿಗೆ ನಾನು ಪಕ್ಷದ ಕಚೇರಿಯಲ್ಲಿದ್ದೆ. ಆಗ ನನಗೆ ಕಾಲ್ ತುಳಿತದಲ್ಲಿ ಮೂರು ಜನ ಸಾವನಪ್ಪಿದ್ದಾರೆ ಎಂಬ ಮಾಹಿತಿ ಬಂತು. ಸಾಮಾನ್ಯ ಎಂಎಲ್ಸಿ ಆದ ನನಗೆ ಮಾಹಿತಿ ಬಂದಿರುವಾಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾಹಿತಿ ಇರಲಿಲ್ಲವೇ?. ಡಿಸಿಎಂ ಕಪ್ ಗೆ ಮುತ್ತಿಡಲು ಹೋಗುತ್ತಾರೆ. ಸಿಎಂ ದೋಸೆ ತಿನ್ನಲು ಹೋಗುತ್ತಾರೆ. ಹೀಗಿರುವಾಗ ಅವರಲ್ಲಿ ಮನುಷ್ಯತ್ವ ಹಾಗೂ ಮಾನವೀಯತೆ ಎಲ್ಲಿದೆ ಎಂದು ಪ್ರಶ್ನಿಸಿದರು.

ಬೆಂಗಳೂರಿನ ಕಾಲ್ತುಳಿತ ಪ್ರಕರಣ ಕ್ರಿಮಿನಲ್ ನೆಗ್ಲಿಜೆನ್ಸಿ. ಪಹಲ್ಗಾಮ್ ನಲ್ಲಿ ನಡೆದಿರುವುದು ಭಯೋತ್ಪಾದಕ ದಾಳಿ. ಉಗ್ರರ ದಾಳಿಗೆ ಪ್ರತಿಕಾರ ತೀರಿಸಿಕೊಂಡಿದ್ದೇವೆ. ಆಪರೇಷನ್ ಸಿಂಧೂರ ಹೆಸರಿನಲ್ಲಿ ನುಗ್ಗಿ ಹೊಡೆದಿದ್ದೇವೆ. ಬೆಂಗಳೂರು ಘಟನೆಗೆ ಸಂಬಂಧಿಸಿದಂತೆ ಜನ ಯಾರಿಗೆ ನುಗ್ಗಿ ಹೊಡೆಯಬೇಕು. ಕಾರ್ಯಕ್ರಮ ಆಯೋಜನೆ ಮಾಡಿದವರಿಗೂ ಅಥವಾ ನಿರ್ಲಕ್ಷ ಮಾಡಿದವರಿಗೂ ಎಂದು  ಪ್ರಶ್ನಿಸಿದರು‌.

ಸರ್ಕಾರವೇ ಹೇಳಬೇಕು ನಮಗೆ ಆಳುವ ಯೋಗ್ಯತೆ ಇಲ್ಲ. ನುಗ್ಗಿ ಹೊಡೆಯಬೇಕು ಎಂದರೆ ಜನ ಅದನ್ನು ಮಾಡುತ್ತಾರೆ ಎಂದು ಹೇಳಿದರು.

CM Siddaramaiah confined to the steps of Vidhana Soudha

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...