Home namma chikmagalur ನೊಂದ ಮಹಿಳೆಯರಿಗೆ ನೆರವಾಗಲು ಸಾಂತ್ವನ ಕೇಂದ್ರ ಸಹಕಾರಿ
namma chikmagalurchikamagalurHomeLatest News

ನೊಂದ ಮಹಿಳೆಯರಿಗೆ ನೆರವಾಗಲು ಸಾಂತ್ವನ ಕೇಂದ್ರ ಸಹಕಾರಿ

Share
Share

ಚಿಕ್ಕಮಗಳೂರು: ನಗರದಲ್ಲಿ ಕಳೆದ ೧೯೬೨ರಲ್ಲಿ ಆರಂಭಗೊಂಡ ತಮ್ಮ ಸಂಸ್ಥೆ ಸಾವಿ ರಾರು ಮಹಿಳೆಯರು, ಮಕ್ಕಳಿಗೆ ಆಶ್ರಯ ನೀಡಿ ತಾತ್ಕಾಲಿಕ ವಸತಿ ಕಲ್ಪಿಸುತ್ತಿದ್ದು, ಆದರೆ ಈಗ ಜಿಲ್ಲಾಧಿ ಕಾರಿಗಳು `ಒನ್ ಸ್ಟಾಪ್ ಸೆಂಟರ್’ ಪ್ರಾರಂಭವಾಗಿರುವುದರಿಂದ ತಮ್ಮ ಸಂಸ್ಥೆಯನ್ನು ಮುಚ್ಚಲು ತಿಳಿಸಿದ್ದಾರೆ. ಆದರೆ ಅದರಿಂದ ತಮ್ಮ ಸಂಸ್ಥೆಯಲ್ಲಿ ದುಡಿಯುತ್ತಿದ್ದ ಸಿಬ್ಬಂದಿಗಳು ಸೇರಿ ದಂತೆ ನೊಂದ ಮಹಿಳೆಯರಿಗೆ ಅನ್ಯಾಯವಾಗುತ್ತದೆ ಎಂದು ನಗರದ ಕಸ್ತೂರಿಬಾ ಸದನದ ಕಾರ್‍ಯದರ್ಶಿ ಮೋಹಿನಿ ಸಿದ್ದೇಗೌಡ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು ನೊಂದು ಬರುವ ಮಹಿಳೆಯರು ಹಾಗು ಹೆಣ್ಣು ಮಕ್ಕಳಿಗೆ ಆಶ್ರಯ ಹಾಗು ರಕ್ಷಣೆ ನೀಡುತ್ತಿದ್ದ ತಮ್ಮ ಸಂಸ್ಥೆಗೆ ಕಳೆದ ೨೦೦೧ರಲ್ಲಿ ಸಾಂತ್ವನ ಕೇಂದ್ರ ಆರಂಭಿ ಸಲು ಸರ್ಕಾರ ಮಂಜೂರಾತಿ ನೀಡಿದ್ದು, ಅಂದಿನಿಂದ ನೊಂದ ಮಹಿಳೆಯರ ಕೌಟುಂಬಿಕ ಸಮಸ್ಯೆ ಬಗೆಹರಿಸುವಲ್ಲಿ ಯಶಸ್ವಿಯಾಗಿ ತಮ್ಮ ಸಂಸ್ಥೆ ಕಾರ್‍ಯನಿರ್ವಹಿಸುತ್ತಿದೆ ಎಂದಿದ್ದಾರೆ.

ನಮ್ಮಲ್ಲಿ ಆಶ್ರಯ ಮತ್ತು ರಕ್ಷಣೆ ದೊರೆಯುತ್ತಿರುವುದರಿಂದ ಬೇರೆ ತಾಲೂಕುಗಳಿಂದ ದೂರುಗಳು ದಾಖಲಾಗಿದ್ದು, ಅದನ್ನು ಸಮರ್ಥ ವಾಗಿ ಇತ್ಯರ್ಥಪಡಿಸಲಾಗುತ್ತಿದೆ. ಹೀಗಾಗಿ ಪ್ರತಿ ತಿಂಗಳು ಹತ್ತರಿಂದ ಹದಿನೈದು ಕೌಟುಂಬಿಕ ಸಮಸ್ಯೆಯ ದೂರುಗಳು ದಾಖಲಾಗುತ್ತಿದೆ ಎಂದ ಅವರು, ಆದರೆ ಇತ್ತೀಚೆಗೆ ತಮ್ಮ ಸಂಸ್ಥೆಯುನಿರ್ವಹಿಸುತ್ತಿರುವ ಹೊಣೆ ಗಾರಿಕೆಯ ಮಾಹಿತಿ ತಿಳಿಯದೆ ಸಂಬಂಧಿಸಿದ ಇಲಾಖೆ ಉಪನಿರ್ದೇ ಶಕರೋರ್ವರುನೀಡಿದ ತಪ್ಪು ಮಾಹಿ ತಿಯಿಂದ ತಮ್ಮ ಸಂಸ್ಥೆ ಮುಚ್ಚುವಂತೆ ಸೂಚನೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ

ಆದರೆ ಆನಂತರ ಖುದ್ದು ಪರಿಶೀ ಲನೆ ಮಾಡಿದ ಅಧಿಕಾರಿ ನಗರದಲ್ಲಿ ಸಾಂತ್ವನ ಕೇಂದ್ರದ ಅಗತ್ಯವಿದೆ ಎಂದು ಸರ್ಕಾರಕ್ಕೆ ಮರು ಪರಿಶೀ ಲನಾ ವರದಿ ನೀಡಿದ್ದಾರೆ. ಈ ಹಿನ್ನೆ ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ನೊಂದ ಮಹಿಳೆಯರಿಗೆ ನೆರವಾಗಲು ಸರ್ಕಾ ರದ ಯೋಜನೆ ಮುಂದುವರೆಸಲು ಆದೇಶ ನೀಡಬೇಕೆಂದು ಮನವಿ ಮಾಡುವುದಾಗಿ ತಿಳಿಸಿದ್ದಾರೆ

Comfort Center Cooperative to help distressed women

Share

Leave a comment

Leave a Reply

Your email address will not be published. Required fields are marked *

Don't Miss

ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಬ್ಬಾಳಿಕೆಯ ಮೂಲಕ ಜಾರಿಗೆ ತರಲು ಮುಂದಾಗಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ ಶೆಟ್ಟಿ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

Related Articles

ಬಯಲ ಬಂಗಾರದ”ಈರುಳ್ಳಿ” ಬಲು ದೂರ,ದೂರ

ಅಜ್ಜಂಪುರ: ಚಿಕ್ಕಮಗಳೂರು ಜಿಲ್ಲೆಯಲ್ಲಿ “ಬಯಲ ಬಂಗಾರದ ಬೆಳೆ ಬೆಳೆಯುವ ಕಪ್ಪು ಮಣ್ಣು ಅಜ್ಜಂಪುರ ಮತ್ತು ಕಡೂರು...

ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂ

ಚಿಕ್ಕಮಗಳೂರು:  ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು...

ಆಸ್ತಿ- ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂಪತ್ತು

ಚಿಕ್ಕಮಗಳೂರು:  ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂ ಪತ್ತು. ಈ ಆರೋಗ್ಯಯುತ ಬದುಕು...

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ...