Home namma chikmagalur chikamagalur ಹೊಸ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಜಿಲ್ಲೆಯಲ್ಲಿ ಪೈಪೋಟಿ
chikamagalurHomeLatest Newsnamma chikmagalur

ಹೊಸ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಜಿಲ್ಲೆಯಲ್ಲಿ ಪೈಪೋಟಿ

Share
Share

ಚಿಕ್ಕಮಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ, ಹೊಸ ಮುಖ್ಯಮಂತ್ರಿ ಬರಲಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ. ಹೊಸ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಈಗ ಪೈಪೋಟಿ ಶುರುವಾಗಿದೆ. ಈ ನಡುವೆ ಮೂರು ವರ್ಷಗಳಿಂದ ಹೊರಗಿನ ಜಿಲ್ಲಾ ಉಸ್ತುವಾರಿ ಸಚಿವರನ್ನು ಕಂಡಿರುವ ಜಿಲ್ಲೆಯ ಜನ, ಈ ಬಾರಿ ಸ್ಥಳೀಯ ಶಾಸಕರಿಗೆ ಅವಕಾಶ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ.

ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಶಾಸಕರಾಗಿದ್ದಾರೆ. ಮೂಡಿಗೆರೆ ಮೀಸಲು ಕ್ಷೇತ್ರ, ಚಿಕ್ಕಮಗಳೂರು ಮತ್ತು ಕಡೂರು ಕ್ಷೇತ್ರಗಳನ್ನು ಮೊದಲ ಬಾರಿಗೆ ಶಾಸಕರಾದವರು ಪ್ರತಿನಿಧಿಸುತ್ತಿದ್ದರೆ, ಶೃಂಗೇರಿ ಮತ್ತು ತರೀಕೆರೆ ಕ್ಷೇತ್ರಗಳನ್ನು ಎರಡನೇ ಅವಧಿಗೆ ಶಾಸಕರಾದ ಹಿರಿಯರು ಪ್ರತಿನಿಧಿಸುತ್ತಿದ್ದಾರೆ.

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹೊರ ಜಿಲ್ಲೆಯ ಉಸ್ತುವಾರಿ ಸಚಿವರನ್ನೇ ಜಿಲ್ಲೆ ಕಂಡಿದೆ. ಎಲ್ಲವೂ ಕೂಡಿ ಬಂದು ಚಿಕ್ಕಮಗಳೂರು ಜಿಲ್ಲೆಯ ಸ್ಥಳೀಯರಿಗೆ ಅವಕಾಶ ನೀಡುವ ಸಂದರ್ಭ ಬಂದರೆ ಹಲವು ವಿಷಯಗಳು ಚರ್ಚೆಗೆ ಬರಲಿವೆ. ಹಿರಿತನದ ಲೆಕ್ಕಾಚಾರದಲ್ಲಿ ಅವಕಾಶ ಸಿಗುವುದಾದರೆ ಸತತ ಎರಡನೇ ಬಾರಿಗೆ ಶಾಸಕರಾಗಿರುವ ಟಿ.ಡಿ. ರಾಜೇಗೌಡ ಹೆಸರು ಮುನ್ನೆಲೆಗೆ ಬರಲಿದೆ(ಅವರ ಶಾಸಕತ್ವದ ವಿಷಯ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿ ಇದೆ). ಒಕ್ಕಲಿಗರಿಗೆ ಅವಕಾಶ ನೀಡಬೇಕು ಎಂಬ ಸಂದರ್ಭ ಬಂದರೆ ರಾಜೇಗೌಡ ಒಬ್ಬರೇ ಜಿಲ್ಲೆಯ ಒಕ್ಕಲಿಗ ಶಾಸಕ.

ಇನ್ನು ತರೀಕೆರೆ ಶಾಸಕ ಜಿ.ಎಚ್. ಶ್ರೀನಿವಾಸ್ ಅವರು ಕೂಡ ಎರಡು ಬಾರಿ ಗೆದ್ದಿರುವ ಶಾಸಕ. ಮೊದಲಿಗೆ ಕಾಂಗ್ರೆಸ್‌ನಿಂದ ಗೆದ್ದು ಶಾಸಕರಾಗಿದ್ದರು. 2018ರಲ್ಲಿ ಕಾಂಗ್ರೆಸ್ ಟಿಕೆಟ್ ದೊರೆಯದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. 2023ರಲ್ಲಿ ಕಾಂಗ್ರೆಸ್ ಟಿಕೆಟ್ ಪಡೆದು ಗೆದ್ದಿದ್ದಾರೆ. ಕುರುಬ ಸಮುದಾಯಕ್ಕೆ ಅವಕಾಶ ನೀಡುವ ಸಂದರ್ಭಬಂದರೆ ಹಿರಿತನದಲ್ಲಿ ಶ್ರೀನಿವಾಸ್ ಇದ್ದಾರೆ. ಕಡೂರು ಕ್ಷೇತ್ರ ಕೆ.ಎಸ್. ಆನಂದ್ ಅವರು ಅದೇ ಸಮುದಾಯಕ್ಕೆ ಸೇರಿದವರು. ಇವರು ಡಿ.ಕೆ. ಶಿವಕುಮಾರ್ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ ಎನ್ನುವ ಮಾತುಗಳಿವೆ.

ಲಿಂಗಾಯತ ಸಮುದಾಯಕ್ಕೆ ಪ್ರಾತಿನಿಧ್ಯ ದೊರಕುವ ಅವಕಾಶ ಬಂದರೆ ಚಿಕ್ಕಮಗಳೂರು ಕ್ಷೇತ್ರದ ಎಚ್.ಡಿ. ತಮ್ಮಯ್ಯ ಹೆಸರು ಮುನ್ನೆಲೆಗೆ ಬರಲಿದೆ. ಇವರು ಕೂಡ ಡಿ.ಕೆ. ಶಿವಕುಮಾರ್ ಅವರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಜಿಲ್ಲೆಗೆ ಸಚಿವ ಸ್ಥಾನ ಈ ಬಾರಿಯಾದರೂ ದೊರಕಬೇಕು. ಎರಡು ಬಾರಿ ಗೆದ್ದಿರುವ ಹಿರಿಯರಿಗೆ ಅವಕಾಶ ಸಿಗಲಿ ಎಂದು ಅವರೇ ಬುಧವಾರ ಹೇಳಿಕೆ ನೀಡಿದ್ದಾರೆ.

ಮತ್ತೊಂದೆಡೆ ದಲಿತ ಸಮುದಾಯ ಮತ್ತು ಮಹಿಳಾ ಕೋಟಾ ಎರಡರ ಮೂಲಕ ಅವಕಾಶ ಸಿಗುವುದಾರೆ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರ ಮುನ್ನೆಲೆಗೆ ಬರಲಿದೆ.

ಮೋಟಮ್ಮ ಅವರು ಕಾಂಗ್ರೆಸ್ ಹಿರಿಯ ನಾಯಕಿ. ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಸಚಿವರಾಗಿ ಕೆಲಸ ಮಾಡಿದವರು. ಎಸ್.ಎಂ. ಕೃಷ್ಣ ಅವರ ಶಿಷ್ಯರಾಗಿರುವ ಡಿ.ಕೆ. ಶಿವಕುಮಾ‌ರ್ ಅವರೊಂದಿಗೆ ಸಂಪರ್ಕ ಚೆನ್ನಾಗಿದೆ. ಶಾಸಕಿ ನಯನಾ ಅವರು ಡಿ.ಕೆ. ಶಿವಕುಮಾರ್ ಬಣದಲ್ಲೇ ಹೆಚ್ಚಾಗಿ ಕಾಣಿಕೊಂಡಿದ್ದರು. ಅವರಿಗೆ ಅವಕಾಶ ಸಿಗುವ ಸಾಧ್ಯತೆಯೂ ಇದೆ ಎಂಬುದು ಕ್ಷೇತ್ರ ಜನರ ನಿರೀಕ್ಷೆ.

Competition in the district for a place in the new cabinet

Share

Leave a comment

Leave a Reply

Your email address will not be published. Required fields are marked *

Don't Miss

ಬಿಡದಿ ರೈತರ ಹೋರಾಟ ಬೆಂಬಲಿಸಿ ಆ.25ರಂದು ವಿಧಾನಸೌಧ ಚಲೋ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಾಗೂ ರೈತರ ಭೂಮಿ ರಕ್ಷಣೆಗೆ ಆಗ್ರಹಿಸಿ ಆ.25ರಂದು ಬೆಂಗಳೂರಿನಲ್ಲಿ ಬೃಹತ್ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು...

ಮುಂಗಾರು ಋತುವಿನಲ್ಲಿ ಜಿಲ್ಲೆಯಲ್ಲಿ ಶೇ.35 ಮಳೆ ಕೊರತೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಋತುವಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದೆ ಶೇ.೩೫ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...

Related Articles

ಕುದುರೆಮುಖ ಭಾಗದಲ್ಲಿ ವಾಸಿಗರ ವಿಶೇಷ ಗಮನ ಸೆಳೆದ ನೀಲಕುರಿಂಜಿ

ಚಿಕ್ಕಮಗಳೂರು:  ಪಶ್ಚಿಮ ಘಟ್ಟಗಳ ನೈಸರ್ಗಿಕ ಸೌಂದರ್ಯಕ್ಕೆ ಮತ್ತೊಂದು ವಿಶೇಷ ಮೆರುಗು ನೀಡುವಂತೆ ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ...

‘ರಾಷ್ಟ್ರದ ಸುರಕ್ಷತೆಗಾಗಿ ಎಲ್ಲರೂ ಒಂದಾಗಬೇಕು’

ಚಿಕ್ಕಮಗಳೂರು: ರಾಷ್ಟ್ರದ ಸುರಕ್ಷತೆ ಹಾಗೂ ದೇಶದ ಹಿತಾಸಕ್ತಿಗಾಗಿ ವೈಯಕ್ತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲರೂ...

ಆರೋಪಿಯಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ ಚಿನ್ನಾಭರಣ ವಶ

ಎನ್.ಆ‌ರ್. ಪುರ: ಮನೆಯ ಹಂಚು ತೆಗೆದು ಒಳನುಗ್ಗಿ, ಮಲಗಿದ್ದ ಮಹಿಳೆಯ ಕೊರಳಿನಿಂದ ಮಾಂಗಲ್ಯ ಸರ ಎಗರಿಸಿದ್ದ...

ಅಜ್ಜಂಪುರ ಸುತ್ತಮುತ್ತ ಕರಡಿ ಹಾವಳಿ

ಅಜ್ಜಂಪುರ: ಅಜ್ಜಂಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕರಡಿ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಗಲು-ರಾತ್ರಿ...