Home namma chikmagalur chikamagalur ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ವಿಜೇತರಿಗೆ ಅಭಿನಂದನೆ
chikamagalurHomeLatest Newsnamma chikmagalur

ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ವಿಜೇತರಿಗೆ ಅಭಿನಂದನೆ

Share
Share

ಚಿಕ್ಕಮಗಳೂರು: ರಾಜ್ಯಮಟ್ಟದ ೪೪ನೇ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಫಿಯನ್ ಶಿಪ್ -೨೦೨೫ ಸ್ಪರ್ಧೆಯಲ್ಲಿ ಜಿಲ್ಲೆಯ ಹಿರಿಯ ಹಾಗೂ ಕಿರಿಯ ಕ್ರೀಡಾಪಟುಗಳಾದ ಬಿ.ಎನ್. ಹೇಮಲತಾ, ಹೆಚ್. ಡಿ.ವಿನಯ್, ಎನ್.ಲೋಕೇಶ್, ಡಿ.ಶ್ರೀಧರ್, ನಿಂಗಪ್ಪ, ಹೆಚ್.ಐ.ಬಸವರಾಜ್ ಅವರುಗಳು ಸ್ಪರ್ಧಿಸಿ ವಿಜೇತ ರಾದ ಹಿನ್ನೆಲೆ ಮಂಗಳವಾರ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲೆಯ ಹಿರಿಯ ಕ್ರೀಡಾಪಟು, ತರಬೇತುದಾರ ರಾದ ಯಶೋಧ ಚಂಗಪ್ಪ ತಂಡದಿಂದ ಅಭಿನಂದನೆ ಸಲ್ಲಿಸಲಾಯಿತು.

ನಿಂಗಪ್ಪ ಅವರು ೭೦ರ ವಯಸ್ಸಿನ ಸ್ಪರ್ಧೆಯಲ್ಲಿ ಭಾಗವಹಿಸಿ ಗುಂಡು ಎಸೆತ ಪ್ರಥಮ, ಬಿ.ಎನ್. ಹೇ ಮಾಲತ ೩೫ರ ವಯಸ್ಸಿನಲ್ಲಿ ೪೦೦ ಮೀಟರ್ ಓಟ ಪ್ರಥಮ, ೮೦೦ ಮೀಟರ್ ಪ್ರಥಮ ಹಾ ಗೂ ೫೦೦೦ ಮೀಟರ್ ದ್ವಿತೀಯ ಸ್ಥಾನ, ಹೆಚ್.ಐ.ಬಸವರಾಜ್ ೬೫ರ ವಯಸ್ಸಿನ ಸ್ಪರ್ಧೆಯಲ್ಲಿ ಶಾಟ್‌ಪುಟ್‌ನಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಹೆಚ್.ಡಿ.ವಿನಯ್ ೩೦ರ ವಯಸ್ಸಿನ ಸ್ಪರ್ಧೆಯಲ್ಲಿ ೪೦೦ ಮೀಟರ್ ಓಟ ಪ್ರಥಮ, ೮೦೦ ಮೀಟರ್ ದ್ವೀ ತೀಯ ಹಾಗೂ ೧೫೦೦ ಮೀಟರ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಡಿ.ಶ್ರೀಧರ್ ಅವರು ೫೫ರ ವಯಸ್ಸಿನ ಸ್ಪಧೆ ಯಲ್ಲಿ ೧೦೦ ಮೀಟರ್ ಓದ ತೃತೀಯ, ೨೦೦ ಮೀಟರ್ ತೃತೀಯ ಸ್ಥಾನ ಪಡೆದುಕೊಂಡು ತಿರುವನಂತ ಪುರದಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಕ್ರೀಡಾಪಟುಗಳಾದ ಸುನಂದ ರಘುನಾಥ್, ಹೆಚ್.ಸಿ.ಸಂತೋಷ್ ಹಿರಿಯಪಟುಗಳಾದ ಸಿ.ಜೆ.ಮಂಜುನಾಥ್, ಶಂಕರಣ್ಣ, ಶ್ರೀನಿವಾಸ್, ಅರಸ್ ಮತ್ತಿತರರಿದ್ದರು.

Congratulations to the winners of the State Athletics Championship

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...