Home namma chikmagalur ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ
namma chikmagalurchikamagalurHomeLatest News

ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ

Share
Share

ಕೊಪ್ಪ : ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಒಂದು ಚೀಲ ಗೊಬ್ಬರ ಬೇಕು ಅಂತ ಹೋದ್ರೆ ನಾಲ್ಕೈದು ಗಂಟೆ ಕಾಯಿಸುತ್ತಾರೆ. ರಾಜ್ಯದ ಕೃಷಿ ಸಚಿವರು ಕುಂಭಕರ್ಣ ನಿದ್ರೆಗೆ ಜಾರಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಶೃಂಗೇರಿಯ ಹರಂದೂರು ದ್ಯಾವೇಗೌಡ ಮೆಮೋರಿಯಲ್ ನಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ  ರಾಜ್ಯ ಕೃಷಿ ಸಚಿವರಿಗೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಒಂದು ಟಿ ಸಿ ಕನೆಕ್ಷನ್ ಪಡೀಬೇಕಾದ್ರೆ ಕುಮಾರಣ್ಣನ ಆಡಳಿತದಲ್ಲಿ 25ಸಾವಿರ ಇತ್ತು, ಈಗ ಎರಡೂವರೆ ಲಕ್ಷ ಆಗಿದೆ. ನೀವು ಏನ್ ಸರ್ಕಾರ ಮಾಡ್ತಿದ್ದೀರಾ ಅಂತ ರೈತರು ಪ್ರಶ್ನೆ ಮಾಡ್ತಿದ್ದಾರೆ ಎಂದು ಹೇಳಿದರು.

ರಾಜ್ಯದ ಅರಣ್ಯ ಪ್ರದೇಶದೊಳಗೆ ಜಾನುವಾರು ಮೇಯಿಸುವುದಕ್ಕೆ ನಿಷೇಧ ಸಚಿವ ಈಶ್ವರ್ ಖಂಡ್ರೆ ಆದೇಶಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದರು.

ಈ ರೀತಿಯ ಬೇಜವಾಬ್ದಾರಿ ಹೇಳಿಕೆಗಳಿಂದ ಸರ್ಕಾರ ಆಡಳಿತ ಕುಸಿಯುತ್ತಿದೆ ಎಂದು ನೋಡಬಹುದು.ಶೃಂಗೇರಿ ಕ್ಷೇತ್ರದಲ್ಲಿ ಎಲ್ಲಾ ಕಡೆ ರಸ್ತೆಗಳು ಗುಂಡಿ ಬಿದ್ದಿದೆ. ಇದನ್ನ ಮುಚ್ಚುವುದಕ್ಕೂ ಈ ಸರ್ಕಾರದ ಬಳಿ ಹಣವಿಲ್ಲ ಎಂದು ವ್ಯಂಗ್ಯವಾಡಿದರು.

ಇಲ್ಲಿ ಸಾಕಷ್ಟು ಜನ ಮನೆಗಳನ್ನ ನಿರ್ಮಿಸಿಕೊಂಡಿದ್ದಾರೆ ಅವರಿಗೆ ಹಕ್ಕು ಪತ್ರ ನೀಡಿಲ್ಲ, ಯಾವುದೇ ರೀತಿಯಲ್ಲೂ ಕ್ಷೇತ್ರದ ಜನತೆಯ ಅಭಿವೃದ್ಧಿಗೆ ಇಲ್ಲಿಯವರೆಗೂ ಕಾಂಗ್ರೆಸ್ ಶಾಸಕರು ಕ್ಷೇತ್ರದ ಜನತೆ ಮೇಲೆ ಅಸಹಾಯಕಥೆ ತೋರಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇತ್ತೀಚಿಗೆ ಮೊರಾರ್ಜಿ ಶಾಲೆಯಲ್ಲಿ 9ನೇ ತರಗತಿಯ ಶಮಿತಾ ಎನ್ನುವ ವಿದ್ಯಾರ್ಥಿನಿ ಸೂಸೈಡ್ ಮಾಡಿಕೊಂಡಿದ್ದಾರೆ ಎಂದು ತಪ್ಪಾಗಿ ಮಾಹಿತಿ ನೀಡಿದ್ದಾರೆ. ಇದರ ಬಗ್ಗೆ ಪಾರದರ್ಶಕವಾಗಿ ತನಿಖೆಗೆ ನಾವು ಒತ್ತಾಯಿಸುತ್ತವೆ. ಇದನ್ನ ಕುಮಾರಣ್ಣನ ಗಮನಕ್ಕೆ ತಂದು ಗಂಭೀರವಾಗಿ ಪ್ರಕರಣವನ್ನ ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ಹೇಳಿದರು.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಮಾಡಿ ಎಂದು ಕೋರ್ಟ್ ಸೂಚನೆ ನೀಡಿದೆ.ಆದ್ರೆ ಚುನಾವಣೆ ಮಾಡಲು ಸರ್ಕಾರಕ್ಕೆ ಆತ್ಮವಿಶ್ವಾಸವಿಲ್ಲ. ಮೂರು ವರ್ಷ ಎಷ್ಟು ಆಗುತ್ತೋ ಅಷ್ಟು ದುಡ್ಡು ಮಾಡಿಕೊಳ್ಳಲು ಕಾಂಗ್ರೆಸ್ ಸಿದ್ದರಾಗಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ ಸಾಧನ ಸಮಾವೇಶ ಮಾಡಿದ್ರು, ರಾಜ್ಯದಲ್ಲಿ ಏನು ಸಾಧನೆ ಆಗಿದೆ ಅಂತ ಕಾಂಗ್ರೇಸ್ಸಿಗರೇ ಉತ್ತರ ಕೊಡಬೇಕು.ಈ ಸರ್ಕಾರಕ್ಕೆ ರಾಜ್ಯದ ಅಭಿವೃದ್ಧಿಕ್ಕಿಂತ ಕುರ್ಚಿ ಕಿತ್ತಾಟವೇ ಮುಖ್ಯವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಈ ಸಂದರ್ಭದಲ್ಲಿ ಹೆಚ್.ಕೆ ಕುಮಾರಸ್ವಾಮಿ,ಸುಧಾಕರ್ ಶೆಟ್ಟಿ, ಹೆಚ್.ವಿ. ವೆಂಕಟೇಶ್, ರಂಜನ್ ಅಜೀತ್ ಕುಮಾರ್, ಶ್ರೀಮತಿ ರಶ್ಮಿ ರಾಮೇಗೌಡ, ಶ್ರೀಮತಿ ಕನ್ಯಾಕುಮಾರಿ, ಶ್ರೀಮತಿ ಪೂರ್ಣಿಮಾ, ಮುಖಂಡರಾದ ಶ ದಿವಾಕರ್ ಭಟ್, ರಾಮಸ್ವಾಮಿ ಖಗ್ಗ ಸೇರಿದಂತೆ ಸ್ಥಳೀಯ ಮುಖಂಡರು, ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Congress government is unable to provide fertilizer to farmers

 

Share

Leave a comment

Leave a Reply

Your email address will not be published. Required fields are marked *

Don't Miss

ಮಧ್ಯಸ್ಥಿಕೆದಾರರು ವಿಶೇಷ ಅಭಿಯಾನ ಯಶಸ್ವಿಗೊಳಿಸಲು ಮನವಿ

ಚಿಕ್ಕಮಗಳೂರು:  ಮಧ್ಯಸ್ಥಿಕೆದಾರರು ಹಾಗೂ ವಕೀಲರು ಕಕ್ಷಿದಾರರ ಮನವೊಲಿಸುವ ಮೂಲಕ ಜುಲೈ ಒಂದರಿಂದ ಹಮ್ಮಿಕೊಳ್ಳಲಾಗಿರುವ ೯೦ ದಿನಗಳ ಮಧ್ಯಸ್ಥಿಕೆ ವಿಶೇಷ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಗೌರವಾನ್ವಿತ...

ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಧ್ಯೇಯವಾಕ್ಯ ಅನಾವರಣ

ಚಿಕ್ಕಮಗಳೂರು: ಕಾಫಿ ಮಂಡಳಿಯು ದೇಶಕ್ಕೆ ಸ್ವಾತಂತ್ರ್ಯ ದೊರೆತು ೨೦೪೭ಕ್ಕೆ ೧೦೦ ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ `ಏಳು ಬೀಜಗಳಿಂದ ಏಳು ಲಕ್ಷ ಟನ್‌ಗೆ ಭಾರತದ ಕಾಫಿ ಜಿಗಿತ’ ಎಂಬ ಧ್ಯೇಯವಾಕ್ಯವನ್ನು ಹೊಂದಿದೆ ಎಂದು ಮಂಡಳಿಯ...

Related Articles

ಸಾರ್ವಜನಿಕರ ಸುರಕ್ಷತೆಗಾಗಿ “ಮನೆ-ಮನೆಗೆ ಪೊಲೀಸ್”

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ 368 ಬೀಟ್‌ಗಳಲ್ಲಿ ಏಕಕಾಲದಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು  ಜಿಲ್ಲಾ ಪೊಲೀಸ್...

ಗಿರಿಭಾಗಕ್ಕೆ ಪ್ರವೇಶ ಶುಲ್ಕ-ಪಾಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಮತ್ತು ಐ.ಡಿ.ಪೀಠ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ನಿ ವಾಸಿಗಳಿಗೆ ಪ್ರವೇಶ ಶುಲ್ಕ ಮತ್ತು ಪಾಸ್...

ಭದ್ರಾ ನದಿಯಲ್ಲಿ ಮಗ ಕಣ್ಮರೆ-ಕೆರೆಗೆ ಹಾರಿದ ತಾಯಿ

ಚಿಕ್ಕಮಗಳೂರು: ಯುವಕನೊಬ್ಬ ನಿಯಂತ್ರಣ ತಪ್ಪಿ ಜೀಪ್ ಸಮೇತ ಭದ್ರಾ ನದಿಗೆ ಬಿದ್ದು ಸಾವನ್ನಪ್ಪಿದ್ದು, ಇದರ ವಿಚಾರ...

ಅಮೃತಮಹಲ್ ಕಾವಲ್ ಪ್ರದೇಶದ ಒತ್ತುವರಿ ತೆರವಿಗೆ ಸೂಚನೆ

ಚಿಕ್ಕಮಗಳೂರು: ಜಿಲ್ಲೆಯ ಅಮೃತಮಹಲ್ ಕಾವಲ್‌ನ ಒತ್ತುವರಿ ಪ್ರದೇಶದವನ್ನು ಕೂಡಲೇ ತೆರವುಗೊಳಿಸುವಂತೆ ಸರ್ಕಾರದ ಕಂದಾಯ ಇಲಾಖೆಯ ಪ್ರಧಾನ...