Home namma chikmagalur ತಾರಕಕ್ಕೇರಿದ ಕಾಂಗ್ರೆಸ್ ಮುಖಂಡರ ಮುಸುಕಿನ ಕಿತ್ತಾಟ ವರಿಷ್ಟರಿಗೆ ಪೀಕಲಾಟ
namma chikmagalurCrime NewsPolitical News

ತಾರಕಕ್ಕೇರಿದ ಕಾಂಗ್ರೆಸ್ ಮುಖಂಡರ ಮುಸುಕಿನ ಕಿತ್ತಾಟ ವರಿಷ್ಟರಿಗೆ ಪೀಕಲಾಟ

Share
Share

ಚಿಕ್ಕಮಗಳೂರು :

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ 2023 ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತಿದ್ದಂತೆ ಇದರ ಕ್ರೆಡಿಟ್ ಪಡೆಯಲು ನಾ ಮುಂದು ತಾ ಮುಂದು ಎಂದು ಎಲ್ಲಾ ಮುಖಂಡರು ಮುಗಿಬಿದ್ದಿದ್ದು ಸುಳ್ಳಲ್ಲ, ಇದರಲ್ಲಿ ಇಬ್ಬರು ಮುಸ್ಲಿಂ ಮುಖಂಡರು ಕೂಡಾ ಇರುವುದು ಸತ್ಯ.

ಈ ವಿಷಯ ಈಗೇಕೆ ಪ್ರಸ್ತಾಪ ಮಾಡ್ತಾ ಇದೀವಿ ಅನ್ನೋದಕ್ಕು ಕಾರಣ ಇದೆ. ಆ ಇಬ್ಬರು ಮುಖಂಡರು ಸದ್ಯ ಕಾಂಗ್ರೆಸ್ ಪಕ್ಷಕ್ಕೆ ನುಂಗಲಾರದ ತುತ್ತಾಗಿದ್ದಾರೆ. ಇತ್ತೀಚೆಗೆ ನಡೆದ ಘಟನೆಯೊಂದು ಇದರ ಮುಂದುವರಿದ ಭಾಗವಾಗಿ ಪೊಲೀಸರಿಗೂ ಕಸಿವಿಸಿ ಉಂಟು ಮಾಡಿದೆ.

ಈದ್ ಮಿಲಾದ್ ಹಿಂದಿನ ದಿನ ನಡೆದ ಗಲಾಟೆಯೊಂದು ಇಬ್ಬರು ಮುಖಂಡರ ಬೆಂಬಲಿಗರ ನಡುವಿನ ಸಂಘರ್ಷ ತಾರಕಕ್ಕೇರುವಂತೆ ಮಾಡಿದೆ. ಮುಖಂಡರ ಕೋಲ್ಡ್ ವಾರ್ ಗೆ ಇದು ಮತ್ತಷ್ಟು ತುಪ್ಪ ಸುರಿದಂತಾಗಿದೆ. ಈ ಮಧ್ಯೆ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಒತ್ತಡಕ್ಕೆ ಒಳಗಾಗಿ ಅನುಸರಿಸಿದ ಇಬ್ಬಗೆಯ ನೀತಿ ಕೂಡ ಸಾಕಷ್ಟು ಚರ್ಚೆಗೆ ಕಾರಣವಾಗಿದೆ . ಅಕ್ಸಾ ಮಸೀದಿ ಬಳಿ ನಡೆದ ಜಗಳದ ನಂತರ ದಾಖಲಾದ ಕೇಸ್ ನಲ್ಲಿ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹಿಲ್ ಪಾಷ ಬಂಧನಕ್ಕೆ ಒತ್ತಾಯಿಸಿ ಗಾಯಾಳು ಜಹೀರ್ ಕುಟುಂಬದ ಮಹಿಳೆಯರು ಹಾಗೂ ಎಸ್.ಡಿಪಿಐ ಪಕ್ಷದ ಕಾರ್ಯಕರ್ತರಿಂದ ಠಾಣೆ ಮುತ್ತಿಗೆ ಯತ್ನ ಕೂಡಾ ನಡೆದಿದೆ. ಇದರಲ್ಲಿ ಇಬ್ಬರೂ ನಾಯಕರ ಪ್ರತಿಷ್ಟೆ ಅಡಗಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ಕಾಂಗ್ರೆಸ್ ಶಾಸಕ ಹಾಗೂ ಜಿಲ್ಲಾ ಕೇಂದ್ರದ ಪಕ್ಷದ ಪ್ರಮುಖರಿಗೆ ಈ ಇಬ್ಬರು ನಾಯಕರ ನಡುವಿನ ಮುಸುಕಿನ ಗುದ್ದಾಟ ತೀವ್ರ ಮುಜುಗರ ತಂದಿರುವುದಂತು ಸತ್ಯ.

ಎರಡೂ ಕಡೆಯವರ ಬೆಂಬಲಿಗರು ಸದ್ಯ ಕೋರ್ಟು ಕೇಸು ಪೊಲೀಸ್ ಸಮಸ್ಯೆ ಎದುರಿಸುತ್ತಿದ್ದು ಇಬ್ಬರ ಪ್ರತಿಷ್ಟೆ ಎಲ್ಲಿಗೆ ಹೋಗಿ ಮುಟ್ಟುತ್ತದೆ ಎಂಬುದಕ್ಕೆ ಕಾಲವೇ ಉತ್ತರ ನೀಡಬೇಕಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....