Home namma chikmagalur chikamagalur ಕಾಂಗ್ರೆಸ್ ನಗರಸಭಾ ಸದಸ್ಯನಿಂದ ಸ್ಥಳೀಯ ನಿವಾಸಿ ಮೇಲೆ ಹಲ್ಲೆ
chikamagalurCrime NewsHomeLatest Newsnamma chikmagalur

ಕಾಂಗ್ರೆಸ್ ನಗರಸಭಾ ಸದಸ್ಯನಿಂದ ಸ್ಥಳೀಯ ನಿವಾಸಿ ಮೇಲೆ ಹಲ್ಲೆ

Share
Share

ಚಿಕ್ಕಮಗಳೂರು : ಕಾಫಿನಾಡಿನ ಕಾಂಗ್ರೆಸ್ ನಗರಸಭಾ ಸದಸ್ಯ ಸಾರ್ವಜನಿಕವಾಗಿ ದರ್ಪ ಮೆರೆದ ಘಟನೆ ವರದಿಯಾಗಿದೆ. ನಗರಸಭೆಯ 34ನೇ ವಾರ್ಡಿನ ಸದಸ್ಯ ಲಕ್ಷ್ಮಣ್ ಸ್ಥಳೀಯ ನಿವಾಸಿ ಚಂದ್ರಶೇಖರ್ ಎಂಬುವವರ ಮೇಲೆ ಬಡಿಗೆಯಿಂದ ಹಲ್ಲೆ ನಡೆಸಿದ್ದಾರೆ ಎಂದು ಗಂಭೀರವಾಗಿ ಆರೋಪಿಸಲಾಗಿದೆ. ಸೈಟ್ ವಿಚಾರಕ್ಕೆ ಸಂಬಂಧಿಸಿದ ಭಿನ್ನಾಭಿಪ್ರಾಯ ಈ ಸಂಘರ್ಷಕ್ಕೆ ಕಾರಣ ಎನ್ನಲಾಗುತ್ತಿದ್ದು,

ವಿಶೇಷವೆಂದರೆ ಈ ಹಲ್ಲೆಯಲ್ಲಿ ಚಂದ್ರಶೇಖರ್ ಪತ್ನಿಯೂ ಲಕ್ಷ್ಮಣ್ ಅವರಿಗೆ ಸಾಥ್ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನಡು ರಸ್ತೆಯಲ್ಲೇ ರೌಡಿಗಳಂತೆ ವರ್ತಿಸಿದ ಕೌನ್ಸಿಲರ್, ಚಂದ್ರಶೇಖರ್ ಮೇಲೆ ಕಾರು ಹತ್ತಿಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ದೂರು ಕೇಳಿ ಬಂದಿದೆ..

ಘಟನೆಯಿಂದ ಗಾಯಗೊಂಡ ಚಂದ್ರಶೇಖರ್ ಸದ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದೃಶ್ಯಗಳನ್ನು ಕಂಡ ಸ್ಥಳೀಯರು, “ನಾವು ಓಟು ಹಾಕಿ ಗೆಲ್ಲಿಸಿದ್ದು ಇವರಿಂದ ಪೆಟ್ಟು ತಿನ್ನಲಕ್ಕಾ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Congress municipal council member assaults local resident

Share

Leave a comment

Leave a Reply

Your email address will not be published. Required fields are marked *

Don't Miss

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

Related Articles

ಜು.5ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಿಕ್ಕಮಗಳೂರು: ಮಲೆನಾಡಿನ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ತಲುಪಿಸುವ ಉದ್ದೇಶದಿಂದ ಆರ್‌ವಿಆರ್ ಹೆಲ್ತ್‌ಕೇರ್ ವತಿಯಿಂದ ಉಚಿತ...

ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ವಿರುದ್ಧ ಆಯೋಗದ ತೀರ್ಪು

ಚಿಕ್ಕಮಗಳೂರು: ಸಕಾಲದಲ್ಲಿ ಆಹಾರ ಪದಾರ್ಥವನ್ನು ತಲುಪಿಸದೆ ಆಹಾರ ಸಾಮಗ್ರಿಗಳು ಹಾಳಾಗಲು ಕಾರಣವಾದ ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್...

ಮುತ್ತೋಡಿ ಅರಣ್ಯದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಚಿರತೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ದ ಮುತ್ತೋಡಿ ಅರಣ್ಯ ವಲಯದಲ್ಲಿ ಪ್ರವಾಸಿಗರಿಗೆ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ದೃಶ್ಯವೊಂದು...

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ...