Home namma chikmagalur ಜೂ.9ರ ರೈತ ಚಳವಳಿಗೆ ಕಾಂಗ್ರೆಸ್ ಬೆಂಬಲ
namma chikmagalurchikamagalurHomeLatest News

ಜೂ.9ರ ರೈತ ಚಳವಳಿಗೆ ಕಾಂಗ್ರೆಸ್ ಬೆಂಬಲ

Share
Share

ಚಿಕ್ಕಮಗಳೂರು: ಜಿಲ್ಲೆಯಲ್ಲಿರುವ ಕಂದಾಯ ಮತ್ತು ಅರಣ್ಯ ಭೂಮಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ವಿವಿಧ ರೈತ ಪರ ಸಂಘಟನೆಗಳು ಜೂ.೯ ರಂದು ಹಮ್ಮಿಕೊಂಡಿರುವ ಜನಾಂದೋಲನ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ತಿಳಿಸಿದರು.

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಜಿಲ್ಲೆಯಲ್ಲಿ ಜನಾಂದೋಲನ ಆರಂಭವಾಗಿದೆ. ಜೂ.೯ ರಂದು ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಜನಪರ ಚಳವಳಿ ಆಗಿರುವುದರಿಂದ ಕಾಂಗ್ರೆಸ್ ನೈತಿಕ ಮತ್ತು ಬಾಹ್ಯ ಬೆಂಬಲ ನೀಡಲಿದೆ ಎಂದರು.

ಈ ಚಳವಳಿಗೆ ಜಿಲ್ಲೆಯ ಎಲ್ಲ ಶಾಸಕರು, ಎಂಎಲ್ಸಿಗಳು, ಸಂಸದರು ಭಾಗವಹಿಸುವುದರಿಂದ ಜಿಲ್ಲೆಯಲ್ಲಿ ಕಳೆದ ೩೦ ವರ್ಷದಿಂದ ಇರುವ ಡೀಮ್ಡ್, ೪(೧), ಒತ್ತುವರಿ ಸಮಸ್ಯೆಗಳಿಗೆ ಚುನಾಯಿತ ಪ್ರತಿನಿಗಳು ಚಳವಳಿ ಸ್ಥಳದಲ್ಲೇ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಆಗ್ರಹಿಸುತ್ತೇನೆ. ಕೇಂದ್ರದ ಮೇಲೆ ರಾಜ್ಯ, ರಾಜ್ಯ ಸರಕಾರದ ಮೇಲೆ ಕೇಂದ್ರದ ಆರೋಪ ಪ್ರತ್ಯಾರೋಪಗಳನ್ನು ಬಿಟ್ಟು ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ರೈತ ಬೆಳೆಗಾರರ ಸಮಸ್ಯೆಗಳಿಗೆ ಅಧಿಕಾರಿಗಳೆ ಮೂಲಕಾರಣವಾಗಿದ್ದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೆಂದರ್‌ಕುಮಾರ್ ಕಟಾರಿಯಾ ಅವರನ್ನು ಜಿಲ್ಲೆಯಿಂದ ಬದಲಾಯಿಸಬೇಕು ಎಂದರು. ಸರಕಾರ ಶೂನ್ಯ ಬಡ್ಡಿದರದಲ್ಲಿ ರೈತರಿಗೆ ಸಾಲ ನೀಡಲು ಆದೇಶಿಸಿದೆ. ಆದರೆ, ಇಲ್ಲಿನ ಡಿಸಿಸಿ ಬ್ಯಾಂಕ್ ನಬಾರ್ಡ್ ನೆಪ ಹೇಳಿಕೊಂಡು ರೈತರಿಗೆ ಸಾಲ ನೀಡುತ್ತಿಲ್ಲ. ಇದೇ ರೀತಿ ಮುಂದುವರಿದರೆ ಡಿಸಿಸಿ ಬ್ಯಾಂಕಿನ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕೆಪಿಸಿಸಿ ಮತ್ತೋರ್ವ ವಕ್ತಾರ ರವೀಶ್‌ಬಸಪ್ಪ ಮಾತನಾಡಿ, ಸಂಘಟಿತ ಹೋರಾಟದ ಮೂಲಕ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ವಿವಿಧ ರೈತ ಸಂಘಟನೆಗಳು ಹಮ್ಮಿಕೊಂಡಿರುವ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದರು.

ಅರಣ್ಯ ಅಧಿಕಾರಿಗಳು ಕೂಡ ಮಾನವೀಯ ಮೌಲ್ಯಗಳನ್ನು ಇಟ್ಟುಕೊಂಡು ಕಾರ್ಯನಿರ್ವಹಿಸಬೇಕು. ಜನಸಾಮಾನ್ಯರ ಬದುಕನ್ನು ಕಸಿದುಕೊಂಡು ಅಧಿಕಾರ ಮಾಡುವುದು ಸರಿಯಲ್ಲ. ಈ ಬಗ್ಗೆ ಅವರು ಗಡಿರೇಖೆ ಹಾಕಿಕೊಳ್ಳಲಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಹಿರೇಮಗಳೂರು ರಾಮಚಂದ್ರ, ತನೂಜ್ ನಾಯ್ಡು, ಇಂದಾವರ ಲೋಕೇಶ್, ಶಾಂತಕುಮಾರ್ ಉಪಸ್ಥಿತರಿದ್ದರು.

Congress supports farmers’ movement on June 9

Share

Leave a comment

Leave a Reply

Your email address will not be published. Required fields are marked *

Don't Miss

ನೋಟರಿ ವಿ.ಕೆ.ರಘುಯಿಂದ ನೀರಿನ ಮೇಲೆ ತೇಲುತ್ತಾ ಯೋಗ ಭಂಗಿ ಪ್ರದರ್ಶನ

ಚಿಕ್ಕಮಗಳೂರು: ಯೋಗ ಸಾಧಕ ನಗರದ ವಕೀಲ ಹಾಗೂ ನೋಟರಿ ವಿ.ಕೆ.ರಘು ಅವರು  ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೀರಿನ ಮೇಲೆ ತೇಲುತ್ತಾ ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿದರು. ಬೈಪಾಸ್ ರಸ್ತೆಯ ನರ್ಚರ್...

ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

ಕಡೂರು: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಲ್ಲೂರು ಗ್ರಾಮದ 20 ವರ್ಷದ ಚಂದನ್ ಮೃತಪಟ್ಟ ದುರ್ದೈವಿ. ಇತ್ತೀಚೆಗೆ...

Related Articles

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ

ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ. ಈ ಹಿಂದೆ ಒಬ್ಬರಿಗೆ ಮಾತ್ರ ಗುತ್ತಿಗೆ...

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು...