Home namma chikmagalur ಮೋದಿ ಅವಧಿಯಲ್ಲಿ ಭ್ರಷ್ಟಾಚಾರ ರಹಿತ ಆಡಳಿತ
namma chikmagalurchikamagalurHomeLatest News

ಮೋದಿ ಅವಧಿಯಲ್ಲಿ ಭ್ರಷ್ಟಾಚಾರ ರಹಿತ ಆಡಳಿತ

Share
Share

ಚಿಕ್ಕಮಗಳೂರು: ದೇಶದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಬೆಳಗ್ಗೆ ಎದ್ದರೆ ಸಾಕು ಕೇವಲ ಭ್ರಷ್ಟಾಚಾರದ ಸುದ್ದಿಗಳನ್ನೇ ಓದಿ ದಿನ ಆರಂಭಿಸಬೇಕಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ಅವಧಿಯಲ್ಲಿ ಒಂದೇ ಒಂದು ಭ್ರಷ್ಟಾಚಾರವನ್ನು ಕಾಣಲು ಸಾಧ್ಯವಿಲ್ಲ. ಆ ಮಟ್ಟಿಗಿನ ಒಳ್ಳೆಯ ಆಡಳಿತವನ್ನು ನರೇಂದ್ರ ಮೋದಿ ನೀಡಿದ್ದಾರೆ ಎಂದು ಬಿಜೆಪಿ ರಾಷ್ಟಿçÃಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ತಿಳಿಸಿದರು.

ನಗರದ ಎಐಟಿ ಕಾಲೇಜು ಸಭಾಂಗಣದಲ್ಲಿ ಯೂಥ್ ಫಾರ್ ನೇಷನ್ ಸಂಘಟನೆಯಿAದ ಶನಿವಾರ ಆಯೋಜಿಸಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ೧೧ ವರ್ಷದ ಸರ್ಕಾರದ ಸಂಕಲ್ಪ-ಸಾಧನೆಗಳ ಕುರಿತ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಹಾಗೂ ಸಂವಾದದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕೆಟ್ಟ ಆಡಳಿತ ಎಂದರೆ ಏನು ಎಂಬುದನ್ನು ಕಳೆದ ೧೧ ವರ್ಷದ ಅವಧಿಯಲ್ಲಿ ನೋಡಲು ಸಾಧ್ಯವೇ ಇಲ್ಲ ಎಂದರು.

ದೇಶದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿರುವಾಗ ಹಗರಣಗಳು, ಭ್ರಷ್ಟಾಚಾರ ಸಾಮಾನ್ಯ ಎನ್ನುವಂಥ ಪರಿಸ್ಥಿತಿ ಇತ್ತು. ಕಲ್ಲಿದ್ದಲು, ಅಗಸ್ತಾ ವೆಸ್ಟ್ಲ್ಯಾಂಡ್, ಕಾಮನ್ವೆಲ್ತ್ ಹೀಗೆ ಒಂದರ ಹಿಂದೊAದರAತೆ ಹಗರಣಗಳು ನಡೆಯುತ್ತಲೇ ಇದ್ದವು. ಆದರೆ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ದೇಶದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಜನರಿಗೆ ಕೇಂದ್ರ ಸರ್ಕಾರದ ಮೇಲೆ ನಂಬಿಕೆ ಬಂದಿದೆ ಎಂದು ಹೇಳಿದರು.

ನಾವು ನೀಡುವ ಆಡಳಿತದಲ್ಲಿ ಜನರಿಗೆ ನಂಬಿಕೆ ಬರಬೇಕು ಎಂದರೆ ಅದು ನಾವು ನೀಡುವ ಒಳ್ಳೆಯ ಆಡಳಿತದಿಂದ ಮಾತ್ರ ಸಾಧ್ಯವಾಗುತ್ತದೆ. ಕಳೆದ ೧೧ ವರ್ಷದ ಅವಧಿಯಲ್ಲಿ ದೇಶದಲ್ಲಾಗಿರುವ ಬದಲಾವಣೆಗಳನ್ನು ನಾವು ಪಿಪಿಟಿ ಮೂಲಕ ಹೇಳುವ ಅಗತ್ಯವಿಲ್ಲ. ಪರಿಜ್ಞಾನ ಇರುವವರು, ಕಾಂಗ್ರೆಸ್ ಸೇರದಿರುವ ಪ್ರತಿಯೊಬ್ಬರೂ ದೇಶದಲ್ಲಿ ಉತ್ತಮ ಬದಲಾವಣೆಯಾಗಿದೆ ಎನ್ನುತ್ತಿದ್ದಾರೆ. ದಿನ ನಿತ್ಯದ ಜೀವನದಲ್ಲಿ ನಮಗೆ ಗೊತ್ತಿಲ್ಲದೆ ಬದಲಾವಣೆ ಅನುಭವಕ್ಕೆ ಬರುತ್ತಿದೆ ಎಂದು ಹೇಳಿದರು.

ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದ ಉತ್ತೇಜನಕ್ಕೆ ೧೧ ವರ್ಷಗಳಲ್ಲಿ ಹೆಚ್ಚಿನ ಮಹತ್ವ ನೀಡಲಾಗಿದೆ. ಈ ಕ್ಷೇತ್ರಗಳಲ್ಲಿ ಸಂಶೋಧನೆಗೆAದು ಹತ್ತಾರು ಖಾಸಗಿ ಕಂಪನಿಗಳಿಗೆ ಅನುದಾನ ಮತ್ತು ಸವಲತ್ತುಗಳನ್ನು ನೀಡಿ ಈ ಕ್ಷೇತ್ರದಲ್ಲಿ ಭಾರತವನ್ನು ಜಗತ್ತಿನ ನಾಯಕನನ್ನಾಗಿಸಲು ಮುಂದಡಿ ಇಡಲಾಗಿದೆ ಎಂದು ತಿಳಿಸಿದರು.

ಎಐ ಸೇರಿದಂತೆ ಇನ್ನಿತರೆ ಆಳ ತಂತ್ರಜ್ಞಾನದಲ್ಲಿ ಸಂಶೋಧನೆ ಹಾಗೂ ಆವಿಷ್ಕಾರಕ್ಕೆ ೫೦ ಸಾವಿರ ಕೋಟಿ ರೂ. ಅನುದಾನ ನೀಡಲಾಗುತ್ತಿದೆ. ಇದೇ ವೇಳೆ ಬೀದಿ ಬದಿ ವ್ಯಾಪಾರಿಗಳ ಆರ್ಥಿಕ ಸ್ವಾವಲಂಬನೆ ದೃಷ್ಠಿಯಲ್ಲಿಟ್ಟುಕೊಂಡು ಪಿಎಂ ಸ್ವನಿಧಿ ಯೋಜನೆಯಡಿ ೧೦ ಸಾವಿರದಿಂದ ೧ ಲಕ್ಷ ರೂ. ವರೆಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ. ಜಾಹಿರಾತು ನೀಡಿದರೆ ಜನರು ಮತ ಹಾಕುತ್ತಾರೆ ಎನ್ನುವ ಮನಸ್ಥಿತಿಯಿಂದ ಅಭಿವೃದ್ಧಿ, ಒಳ್ಳೆಯ ಆಡಳಿತ ಎನ್ನುವುದು ಜನರ ಅನುಭವಕ್ಕೆ ಬರುವಂತಾಗಿರುವುದು ಕಳೆದ ೧೧ ವರ್ಷದ ಅವಧಿಯಲ್ಲಿ ಎಂದರು.

ಸAಸದ ಕೋಟ ಶ್ರೀನಿವಾಸ್ ಪೂಜಾರಿ ಮಾತನಾಡಿ, ಸಮರ್ಥ, ಸಮೃದ್ಧ ಭಾರತ ನಿರ್ಮಾಣ ಮಾಡಬೇಕು ಎಂದು ನಮ್ಮ ಹಿರಿಯರು ಬಿಜೆಪಿ ಹುಟ್ಟುಹಾಕಿದ್ದಾರೆ. ಅಧಿಕಾರದ ಹಿಡಿಯಬೇಕು ಎಂಬ ಉz್ದೆÃಶದಿಂದ ಪಕ್ಷ ಹುಟ್ಟುಹಾಕಿಲ್ಲ. ಆದರೆ ಅಧಿಕಾರದ ಜವಾಬ್ದಾರಿ ಬಂದರೆ ಮಾತ್ರ ದೇಶ ಕಟ್ಟಲು ಸಾಧ್ಯ ಎಂಬ ಕಾರಣಕ್ಕೆ ಅಧಿಕಾರಕ್ಕೇರಿz್ದÉÃವೆ. ಇದೇ ಕಾರಣದಿಂದಲೇ ಕಳೆದ ೧೧ ವರ್ಷದಿಂದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶವನ್ನು ಕಟ್ಟಿತೋರಿಸಿz್ದÉÃವೆ ಎಂದು ಹೇಳಿದರು.

ನರೇಂದ್ರ ಮೋದಿ ಅವರು ಪ್ರಧಾನಿ ಆಗಿದ್ದರಿಂದಲೇ ನಮ್ಮ ಕಾಲದಲ್ಲೇ ಆರ್ಟಿಕಲ್ ೩೭೦ ರದ್ದು ಮಾಡಿದ್ದು ನೋಡಿz್ದÉÃವೆ. ಪೌರತ್ವ ಕಾಯ್ದೆಗೆ ತಿದ್ದುಪಡಿ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಿz್ದÉÃವೆ. ಇಂದು ಭಾರತ ಸ್ವಾಭಿಮಾನಿ, ಶಕ್ತಿಶಾಲಿ ದೇಶವಾಗಿ ಜಗತ್ತಿನ ಎದುರು ತಲೆ ಎತ್ತಿ ನಿಂತಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ಭಾರತ ವಿಶ್ವಗುರು ಆಗಬೇಕಾದರೆ ವಿಕಸಿತ ಭಾರತವಾಗಬೇಕು. ಹೀಗಾಗಿಯೇ ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತದ ಸಂಕಲ್ಪ ಭಾರತದ ಸಂಕಲ್ಪವಾಗಬೇಕು ಎಂದು ಕರೆನೀಡಿದ್ದರು. ಆತ್ಮನಿರ್ಭರ ಭಾರತ ಎಂಬುದು ಕೆಲವೊಬ್ಬರಿಗೆ ಮಾತ್ರವಲ್ಲ. ಬದಲಿಗೆ ಈ ದೇಶದ ಪ್ರತಿಯೊಬ್ಬರೂ ಈ ಸಂಕಲ್ಪ ತೊಟ್ಟರೆ ಅವರ ಬದುಕಿನಲ್ಲಿ ಬದಲಾವಣೆ ಬರುತ್ತದೆ. ಆಗ ಭಾರತ ಒಂದು ಹೆಜ್ಜೆ ಮುಂದೆ ಹೋಗುತ್ತದೆ. ಹೀಗಾಗದರೆ ಭಾರತ ವಿಶ್ವಗುರು, ವಿಶ್ವ ಮಿತ್ರವಾಗಲು ತುಂಬಾ ವರ್ಷಗಳು ಬೇಕಾಗುವುದಿಲ್ಲ ಎಂದು ಹೇಳಿದರು.

ಯೂಥ್ ಫಾರ್ ನೇಷನ್ ಸಂಚಾಲಕ ಸಂತೋಷ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಡಿ.ಎನ್.ಜೀವರಾಜ್, ಮಾಜಿ ಶಾಸಕ ಡಿ.ಎಸ್.ಸುರೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ ಶೆಟ್ಟಿ ಮತ್ತಿತರರಿದ್ದರು.

Corruption-free governance during Modi era

 

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...