Home namma chikmagalur chikamagalur ಭದ್ರಾ ಅಭಯಾರಣ್ಯದಲ್ಲಿ ಭ್ರಷ್ಟಾಚಾರ
chikamagalurHomeLatest Newsnamma chikmagalur

ಭದ್ರಾ ಅಭಯಾರಣ್ಯದಲ್ಲಿ ಭ್ರಷ್ಟಾಚಾರ

Share
Oplus_153223168
Share

ಚಿಕ್ಕಮಗಳೂರು:ಭದ್ರಾ ಅಭಯಾರಣ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಮೌನವಹಿಸಿದ್ದಾರೆಂದು ದಲಿತ ಸಂಘರ್ಷಸಮಿತಿ ರಾಜ್ಯ ಸಂಘಟನಾ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ ಆರೋಪಿಸಿದರು.

ಸುದ್ದಿಗೋಷ್ಟಿಯಲ್ಲಿ ಮಂಗಳವಾರ ಮಾತನಾಡಿ,ಜಿಲ್ಲೆಯಲ್ಲಿ ಕಳೆದ ೨೬ ವರ್ಷಗಳಿಂದ ಭದ್ರಾಅಭಯಾರಣ್ಯ ಘೋಷಣೆಯಾಗಿರುವುದು ಸರಿಯಷ್ಟೆ ಈ ಯೋಜನೆಯಿಂದ ದಟ್ಟವಾದ ಅರಣ್ಯ, ಜೀವಸಂಕುಲ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಯೊಂದಿಗೆ ಜಿಲ್ಲೆ ಹೆಸರುವಾಸಿಯಾಗುತ್ತದೆ ಎಂಬುದು ಸ್ಥಳೀಯರ ಕನಸಾಗಿತ್ತು. ದುರಂತವೆಂದರೆ ಅಭಿವೃದ್ಧಿಯ ಬದಲಾಗಿದೆ. ಅಭಯಾರಣ್ಯ ಪ್ರತಿನಿತ್ಯ ಭ್ರಷ್ಟಾಚಾರದ ಕೂಡಾಗುತ್ತಿದೆ ಎಂದು ದೂರಿದರು.

ಈ ಕುರಿತು ಭದ್ರಾಹುಲಿ ಸಂರಕ್ಷಿತ ಕಚೇರಿಯ ಉಪಅರಣ್ಯ ಸಂರಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮತ್ತು ಅರಣ್ಯ ಸಚಿವರಿಗೆ ಮನವಿ ಪತ್ರವನ್ನು ಕಳುಹಿಸಿಕೊಡಲಾಗಿದೆ. ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿ ಮತ್ತು ನೌಕರರನ್ನು ಅಮಾನತುಪಡಿಸಬೇಕೆಂದು ಒತ್ತಾಯಿಸಲಾಗಿದೆ ಎಂದರು.

ಮತ್ತೋಡಿ ಅಭಯಾರಣ್ಯದಲ್ಲಿ ನಡೆಯುತ್ತಿರುವ ಸಫಾರಿಗೆ ನಗದು ಪಡೆದುಕೊಳ್ಳಲಾಗುತ್ತಿದ್ದು, ನಿಗದಿತ ಅವಧಿಗೂ ಮೀರಿಸಫಾರಿ ನಡೆಯುತ್ತಿದ್ದು, ಸಫಾರಿಗೆ ಬರುವ ಪ್ರವಾಸಿಗರಿಂದ ಖಾಸಗಿ ವ್ಯಕ್ತಿಯ ಮೊಬೈಲ್ ಸ್ಕ್ಯಾನರ್‌ಗೆ ಹಣಹೋಗುತ್ತಿದ್ದು, ಸರ್ಕಾರಕ್ಕೆ ಹಣವನ್ನು ಜಮೆಮಾಡದೆ ವಂಚಿಸಲಾಗುತ್ತಿದೆ.ಸರ್ಕಾರದ ನಿಯಮವನ್ನು ಗಾಳಿಗೆ ತೂರಿ ನಗದು ಪಡೆದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ಪ್ರವಾಸಿಗರನ್ನು ಸಫಾರಿಗೆ ಕರೆದುಕೊಂಡು ಹೋಗಲು ಕೆಲವು ವಾಹನದಲ್ಲಿ ಬಳಸಿಕೊಳ್ಳಲಾಗುತ್ತಿದೆ.ಈ ವಾಹನವನ್ನು ೪ ಕಿ.ಮೀ. ದೂರದಲ್ಲಿರುವ ಸಿರವಾಸೆಗೆ ತೆಗೆದುಕೊಂಡುಹೋಗಿ ಮದ್ಯವನ್ನು ಖರೀದಿಸಿ ತರಲಾಗುತ್ತಿದೆ. ಈ ಕುರಿತು ಪ್ರಶ್ನಿಸಿದರೆ ಉತ್ತರಿಸಿದೆ ವಾಹನದಲ್ಲಿ ತೆರಳುತ್ತಾರೆಂದು ದೂರಿದರು.

ಸಫಾರಿ ವಾಹನಗಳನ್ನು ಕೆಲವರು ಮನೆಗೆ ತೆಗೆದುಕೊಂಡುಹೋಗುತ್ತಾರೆ. ಈ ಕುರಿತು ಅಧಿಕಾರಿಗಳನ್ನು ಕೇಳಿದರೆ ಮೇಲಾಧಿಕಾರಿಗಳಿಗೆ ಹೇಳಿದ್ದಾರೆನ್ನುತ್ತಾರೆ.ವಾರಕ್ಕೊಮ್ಮೆ ಪೋನ್‌ಪೇ, ಗೂಗಲ್‌ಪೇ ಮೂಲಕ ಬಂದ ಸಫಾರಿ ಹಣವನ್ನು ಚಾಲಕರು ಮತ್ತು ನೌಕರರು ಹಂಚಿಕೊಳ್ಳುತ್ತಿದ್ದಾರೆಂದು ಗಂಭೀರ ಆರೋಪ ಮಾಡಿದರು.

ಯಾವುದೇ ಯಂತ್ರೋಪಕರಣಗಳನ್ನು ಅಭಯಾರಣ್ಯದೊಳಗೆ ಬಳಸುವಂತಿಲ್ಲ ಆದರೆ ಅರಣ್ಯದೊಳಗೆ ಕುರುಚಲು ಗಿಡಗಳನ್ನು ಕತ್ತರಿಸಲು ೧೫ಕ್ಕೂ ಹೆಚ್ಚು ಪೆಟ್ರೋಲ್ ವೈಡ್‌ಕಟಿಂಗ್ ಯಂತ್ರಗಳನ್ನು ಬಳಸಲಾಗುತ್ತಿದೆ. ರಸ್ತೆ ನಿರ್ಮಿಸಲು ಜೆಸಿಬಿಗಳನ್ನು ಬಳಸಲಾಗುತ್ತಿದೆ.ಯಂತ್ರಗಳ ಶಬ್ದಕ್ಕೆ ಬೆದರುವ ಪ್ರಾಣಿಗಳು ಕಾಡುತೊರೆದು ನಾಡಿಗೆ ಬರಲು ಕಾರಣವಾಗಿದೆ ಎಂದು ತಿಳಿಸಿದರು.

ಪ್ರತಿವರ್ಷ ಬೆಂಕಿಯನ್ನು ನಂದಿಸಲು ತಂಡವನ್ನು ರಚಿಸಿಕೊಂಡು ಫೈರ್‌ಲೈನ್ ಮಾಡಲಾಗುತ್ತದೆ ಆದರೆ ಮಾರ್ಚ್ ತಿಂಗಳು ಕಳೆದರೂ ಅಂದಾಜು ಪಟ್ಟಿಯಲ್ಲಿರುವಂತೆ ಫೈರ್‌ಲೈನ್‌ಗಳ ಕಾರ್ಯಮುಕ್ತಾಯಗೊಂಡಿಲ್ಲ ಎಂದು ಹೇಳಿದ ಅವರು, ಈ ದೂರುಗಳನ್ನು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು. ಸರ್ಕಾರಕ್ಕೆ ವಂಚಿಸಿರುವ ಹಣವನ್ನು ಸರ್ಕಾರಕ್ಕೆ ಹಿಂದಿರುಗಿಸಲು ಅಧಿಕಾರಿಗಳು ಮುಂದಾಗಬೇಕೆಂದು ಒತ್ತಾಯಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಪುಟ್ಟಸ್ವಾಮಿ, ವೆಂಕಟೇಶ್ ಇದ್ದರು.

Corruption in Bhadra Sanctuary

Share

Leave a comment

Leave a Reply

Your email address will not be published. Required fields are marked *

Don't Miss

ನಕಲಿ “ಐ.ಎ.ಎಸ್” ಮಿಥುನ್ ಬಂಧನ

ಬೆಂಗಳೂರು: ಚಿಕ್ಕಮಗಳೂರು ಮೂಲದ ಮಿಥುನ್ ಎಂಬತಾ ಐ.ಎ.ಎಸ್.ನ ನಕಲಿ ದಾಖಲೆ ಸೃಷ್ಟಿ ಮಾಡಿ ಹಲವರಿಗೆ ವಂಚನೆ ಮಾಡಿದ್ದು ಬೆಂಗಳೂರಿನ ಅಮೃತಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅರೋಗ್ಯ ಇಲಾಖೆಯ ಎನ್.ಹೆಚ್.ಎಮ್.ನ ಉಸ್ತುವಾರಿ ಎಂದು...

ನಗರದಲ್ಲಿ ಹಾಡುಹಗಲೇ ಶಿಕ್ಷಕಿಯ ಮಾಂಗಲ್ಯ ಸರ ಅಪಹರಣ

ಚಿಕ್ಕಮಗಳೂರು: ಹಾಡುಹಗಲೇ ಶಿಕ್ಷಕಿಯ ಕೊರಳಿಗೆ ಕೈ ಹಾಕಿ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋದ ಘಟನೆ ಸೋಮವಾರ ಸಂಜೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಈ ಕುರಿತು ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ...

Related Articles

ಪ್ರಯಾಣಿಕರೇ ಬಸ್ ತಳ್ಳುವ ಕೆಎಸ್‌ಆರ್‌ಟಿಸಿ ಬಸ್‌

ಚಿಕ್ಕಮಗಳೂರು: ಸರ್ಕಾರದ ಉಚಿತ ಯೋಜನೆಗಳ ಆರ್ಭಟದ ನಡುವೆ ಸಾರಿಗೆ ಬಸ್‌ಗಳ ನಿರ್ವಹಣೆ ಅಧೋಗತಿಗೆ ತಲುಪಿದೆಯೇ? ಇಂತಹದೊಂದು ಪ್ರಶ್ನೆ...

ಏ.23ಕ್ಕೆ ಕರಾಳಕೃತ್ಯ ಖಂಡಿಸಿ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆಯದ ಅಪಚಾರ ಏಪ್ರಿಲ್ ೨೩ ರಂದು ಪಶ್ಚಿಮಬಂಗಾಳದಲ್ಲಿ ನಡೆಯುತ್ತಿದೆ. ಇದನ್ನು ವಿರೋಧಿಸಿ...

ಜನತೆ ಬಿಸಿಲಿನ ಬೇಗೆಗೆ ತತ್ತರಿಸಿ ಹೋದ ಕಾಫಿನಾಡಿನ ಜನತೆ

ಚಿಕ್ಕಮಗಳೂರು: ಮಲೆನಾಡಿನ ಮಡಿಲು, ತಂಪಾದ ಹವಾಮಾನಕ್ಕೆ ಹೆಸರಾದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಈ ಬಾರಿ ಸೂರ್ಯನ ಪ್ರಖರತೆ...

ಅಯ್ಯನಕೆರೆಯಲ್ಲಿ ಈಜಲು ಹೋಗಿದ್ದ ಬಾಲಕ ಸಾವು

ಕಡೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಐತಿಹಾಸಿಕ ಅಯ್ಯನಕೆರೆಯಲ್ಲಿ ಈಜಲು ಹೋಗಿದ್ದ 13 ವರ್ಷದ ಬಾಲಕನೋರ್ವ...