Home namma chikmagalur chikamagalur ಜನಪ್ರತಿನಿಧಿ ನಿರ್ಲಕ್ಷ್ಯಕ್ಕೆ ಬೇಸತ್ತು ದಂಪತಿ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ
chikamagalurLatest Newsnamma chikmagalur

ಜನಪ್ರತಿನಿಧಿ ನಿರ್ಲಕ್ಷ್ಯಕ್ಕೆ ಬೇಸತ್ತು ದಂಪತಿ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ

Share
Share

ಮೂಡಿಗೆರೆ: ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ದಂಪತಿ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕಡಿದಾಳು ಗ್ರಾಮದ ಸುಧಾ ಮತ್ತು ರಘುಪತಿ ದಂಪತಿ ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಂಡಿರುವ ಈ ಕಾರ್ಯಕ್ಕೆ ಈಗ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕಡಿದಾಳು ಗ್ರಾಮದ ಮುಖ್ಯ ರಸ್ತೆಯು ಸುಮಾರು ಎರಡು ಕಿಲೋಮೀಟರ್‌ವರೆಗೂ ಸಂಪೂರ್ಣವಾಗಿ ಗುಂಡಿಬಿದ್ದಿದ್ದು, ವಾಹನ ಸವಾರರು ದಿನನಿತ್ಯ ಪ್ರಾಣದ ಹಂಗು ತೊರೆದು ಸಂಚರಿಸುವಂತಾಗಿದೆ. ಹಲವು ವರ್ಷಗಳಿಂದ ಕಾಡುತ್ತಿರುವ ಈ ಸಮಸ್ಯೆಯ ಕುರಿತು ಸ್ಥಳೀಯರು ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.

ತಮ್ಮ ಮನೆಯ ಮುಂಭಾಗದ ರಸ್ತೆಯ ಗುಂಡಿಗಳಲ್ಲಿ ಬಿದ್ದು ಸಾಕಷ್ಟು ಜನರು ಗಾಯಗೊಂಡಿರುವುದನ್ನು ಕಂಡ ರಘುಪತಿ ಅವರು, ವ್ಯವಸ್ಥೆಯ ವಿರುದ್ಧ ಆಕ್ರೋಶಗೊಂಡು ತಾವೇ ರಸ್ತೆ ಸರಿಪಡಿಸಲು ನಿರ್ಧರಿಸಿದ್ದಾರೆ. ಕಳೆದ ನವೆಂಬರ್ ತಿಂಗಳಿನಲ್ಲಿಯೇ ತಮ್ಮ ವೈಯಕ್ತಿಕ ಹಣದಿಂದ 28 ಲೋಡ್ ಮಣ್ಣು ತಂದು ರಸ್ತೆಯ ಗುಂಡಿಗಳನ್ನು ಮುಚ್ಚಿದ್ದ ರಘುಪತಿ ಅವರಿಗೆ ಈಗ ಮತ್ತೆ ಮಳೆ ಪ್ರಾರಂಭವಾಗಿರುವುದು ಆತಂಕ ತಂದಿದೆ.

ಮಳೆಗೆ ಮಣ್ಣು ಕೊಚ್ಚಿಹೋಗಿ ವಾಹನಗಳು ಜಾರುತ್ತಿರುವುದರಿಂದ, ಪ್ರಸ್ತುತ ಸ್ವಂತ ಖರ್ಚಿನಲ್ಲಿ ಒಂದು ಲಕ್ಷ ರೂಪಾಯಿ ವೆಚ್ಚ ಮಾಡಿ ಜಲ್ಲಿಕಲ್ಲುಗಳನ್ನು ತರಿಸಿ ರಸ್ತೆ ದುರಸ್ತಿ ಮಾಡುತ್ತಿದ್ದಾರೆ. ಈ ರಸ್ತೆಯ ದುಃಸ್ಥಿತಿಯಿಂದಾಗಿ ಶಾಲಾ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

Couple fed up with public representative’s negligence repairs road at their own expense

Share

Leave a comment

Leave a Reply

Your email address will not be published. Required fields are marked *

Don't Miss

ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪುಂಡಾಟ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ವಲಯ ವ್ಯಾಪ್ತಿಯ ಭದ್ರಾ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಯುವಕರ ತಂಡವೊಂದು ಖಾಸಗಿ ಓಪನ್ ಜೀಪಿನಲ್ಲಿ ಅಕ್ರಮವಾಗಿ ಪ್ರವೇಶಿಸಿ ಕಾಡಾನೆಗಳನ್ನು ಕಾಡಿರುವ ಆರೋಪ ಕೇಳಿಬಂದಿದ್ದು,...

ರೈತ ಸಂಘದ ಡಿ.ರಾಮೇಗೌಡ ಕಲ್ಲಹಳ್ಳಿ ಆಯ್ಕೆ ಕ್ರಮಬದ್ಧ

ಚಿಕ್ಕಮಗಳೂರು: ತಾಲ್ಲೂಕು ಅಧ್ಯಕ್ಷರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ತಾಲ್ಲೂಕು ಸಮಿತಿಯ ಸಭೆಯಲ್ಲಿ ಹಾಜರಿದ್ದ ಪದಾಧಿಕಾರಿಗಳ ನಿರ್ಣಯದಂತೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವ ಡಿ.ರಾಮೇಗೌಡ ಕಲ್ಲಹಳ್ಳಿ ಅವರ ಆಯ್ಕೆ ಕ್ರಮಬದ್ಧವಾಗಿದೆ ಎಂದು ಕರ್ನಾಟಕ ರಾಜ್ಯ...

Related Articles

ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ

ಚಿಕ್ಕಮಗಳೂರು: ರಾಜ್ಯದ ಅತ್ಯುನ್ನತ ಶಿಖರವಾದ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಹಾಗೂ...

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಪಲ್ಟಿ

ಚಿಕ್ಕಮಗಳೂರು : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಕಾರೊಂದು ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾದ ಘಟನೆ ಚಿಕ್ಕಮಗಳೂರು...

ಆಲ್ದೂರು ಸಮೀಪ ಅಪರಿಚಿತ ವ್ಯಕ್ತಿ ಶವ ಪತ್ತೆ

ಚಿಕ್ಕಮಗಳೂರು: ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಾಣಿಮಕ್ಕಿ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ...

ಬಿಜೆಪಿ ಮುಖಂಡನಿಂದ ಯುವಕನ ಮೇಲೆ ರಾಡ್‌ನಿಂದ ಹಲ್ಲೆ

ಅಜ್ಜಂಪುರ : ಬೈಕ್ ವೇಗವಾಗಿ ಚಲಾಯಿಸಿದ್ದಾನೆ ಎಂಬ ಕಾರಣಕ್ಕೆ ಯುವಕನ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿ...