Home namma chikmagalur chikamagalur ಸಿಪಿಐ ಶತಮಾನೋತ್ಸವ ಸಂಭ್ರಮದ ಜೊತೆಗೆ ಸವಾಲಿದೆ
chikamagalurHomeLatest Newsnamma chikmagalur

ಸಿಪಿಐ ಶತಮಾನೋತ್ಸವ ಸಂಭ್ರಮದ ಜೊತೆಗೆ ಸವಾಲಿದೆ

Share
Share

ಚಿಕ್ಕಮಗಳೂರು: ಭಾರತ ಕಮ್ಯುನಿಷ್ಟ್ ಪಕ್ಷದ ಶತಮಾನೋತ್ಸವ ಸಂದರ್ಭದಲ್ಲಿ ಸಂಭ್ರಮದ ಜೊತೆಗೆ ಸವಾಲಿದೆ ಎಂದು ಸಿಪಿಐ ಪಕ್ಷದ ರಾಜ್ಯ ಕಾರ್ಯದರ್ಶಿ ಸಾತಿ ಸಂದ್ರೇಶ್ ತಿಳಿಸಿದರು.

ಅವರು ಗುರುವಾರ ನಗರದ ಅಜಾದ್ ಪಾರ್ಕ್‌ನಲ್ಲಿ ಸಿಪಿಐ ಜಿಲ್ಲಾ ಮಂಡಳಿ ಏರ್ಪಡಿಸಿದ್ದ ಸಮತಾ ರಾಜ್ಯದ ಕನಸುಗಳೊಂದಿಗೆ ಶ್ರಮಶಕ್ತಿಯ ಸಂಘರ್ಷದ ಶತಮಾನದ ಪಯಣ ಶತಮಾನೋತ್ಸವದ ಜಾಥಾ ಹಾಗೂ ಬಹಿರಂಗ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಬಿಜೆಪಿಯ ಸರ್ವಾಧಿಕಾರಿ ಧೋರಣೆಯನ್ನು ಎದುರಿಸಲು ಸಮಾನ ಮನಸ್ಕ ನಾಯಕರು ಕೈಜೋಡಿಸಬೇಕೆಂದು ಮನವಿ ಮಾಡಿದ ಅವರು, ದೇಶದಲ್ಲಿ ಕೋಮುವಾದಿ ಪ್ಯಾಸಿಸ್ಟ್ ನೀತಿಯಿಂದ ಬಂಡವಾಳ ಶಾಹಿಗಳಿಗೆ ಹಾಗೂ ಕಾರ್ಪೋರೇಟ್ ಸಂಸ್ಥೆಗಳಿಗೆ ಮಾರಾಟ ಮಾಡುತ್ತಿದ್ದಾರೆ. ಇದರಿಂದಾಗಿ ದಲಿತರು, ಆದಿವಾಸಿಗಳು, ರೈತರು, ಯುವಜನರು, ಮಹಿಳೆಯರು ಸ್ವಾತಂತ್ರ್ಯ ಕಳೆದುಕೊಳ್ಳುತ್ತಿದ್ದಾರೆಂದು ಹೇಳಿದರು.

ಈ ನಿಟ್ಟಿನಲ್ಲಿ ಸಿಪಿಐ ಪಕ್ಷ ಮತ್ತೊಮ್ಮೆ ಸ್ವಾತಂತ್ರ್ಯ ಸಂಗ್ರಾಮ ಮಾಡುವ ಸಲುವಾಗಿ ದೇಶಪ್ರೇಮಿಗಳು, ಜಾತ್ಯಾತೀತ ಪ್ರಗತಿಪರ ಸಂಘಟನೆಗಳು, ವಿವಿಧ ಪಕ್ಷಗಳು, ಪ್ರಸ್ತುತ ಇರುವ ಸವಾಲುಗಳನ್ನು ಎದುರಿಸಲು ಒಗ್ಗೂಡಬೇಕಾದ ಅನಿವಾರ್ಯತೆ ಇದೆ ಎಂದು ಮನವಿ ಮಾಡಿದರು.

ಆರ್‌ಎಸ್‌ಎಸ್ ಬಿಜೆಪಿಯನ್ನು ಅಧಿಕಾರದಲ್ಲಿ ಮುಂದುವರೆಯಲು ಬಿಡದೆ ಸಿಪಿಐ ಸಮತಾ ಸಮಾಜ ನಿರ್ಮಾಣಕ್ಕಾಗಿ ಹೋರಾಟ ರೂಪಿಸಲಿದೆ. ಜಾತ್ಯಾತೀತ, ಪ್ರಜಾಪ್ರಭುತ್ವವಾದಿ ಎಡಪಕ್ಷಗಳು ಈ ಸಂದರ್ಭದಲ್ಲಿ ಗಂಭೀರವಾದ ಹೋರಾಟಕ್ಕೆ ಪ್ರತಿಜ್ಞೆ ಮಾಡಬೇಕೆಂದು ವಿನಂತಿಸಿದರು.

ಜಿಲ್ಲೆಯಲ್ಲಿ ಭೂಮಿ ಹೋರಾಟ ಮುಂದುವರೆಯಲಿದೆ, ರಾಜ್ಯದಲ್ಲಿ ಸಮತಾ ಕನಸು ನನಸಾಗಬೇಕಾದರೆ ರೋಟಿ, ಕಪಡ, ಮಖಾನ ಈ ಮೂರೂ ಇರಬೇಕು. ರಾಜ್ಯದಲ್ಲಿ ೨೭ ಲಕ್ಷ ಕುಟುಂಬಗಳಿಗೆ ಸ್ವಂತ ಮನೆಯಿಲ್ಲ, ಜಿಲ್ಲೆಯಲ್ಲಿ ಸೂರಿಲ್ಲದವರಿಗೆ ಮನೆ ಕೊಡಿಸುವುದೇ ಸಿಪಿಐ ಶತಮಾನದ ಸಂಭ್ರಮದ ಪ್ರತಿಜ್ಞೆ ಎಂದರು.

ಸಿಪಿಐ ರಾಜ್ಯ ಸಹಕಾರ್ಯದರ್ಶಿ ಪಿ.ವಿ ಲೋಕೇಶ್ ಮಾತನಾಡಿ, ಈ ದೇಶದಲ್ಲಿ ನದಿ ನೀರು ಹರಿದಿದೆ, ಗಾಳಿಯಲ್ಲಿ ಬದಲಾವಣೆ, ಭೂಮಿಯಲ್ಲಿ ಸಾಕಷ್ಟು ಸ್ಥಿತ್ಯಂತ್ರ ಆಗಿದೆ. ರಾಜಕಾರಣದಲ್ಲಿಯೂ ಸಾಕಷ್ಟು ಬದಲಾವಣೆಗಳಾಗಿರುವುದನ್ನು ಕಾಣುತ್ತಿದ್ದೇವೆ ಎಂದರು.

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗದೆ ಬ್ರಿಟೀಷರ ಪರವಾಗಿದ್ದವರು ಇಂದು ಅಧಿಕಾರ ನಡೆಸುತ್ತಿರುವವರ ಬದಲಾವಣೆ ಕಾಣುತ್ತಿದ್ದೇವೆ. ಸಮಾನತೆಗಾಗಿ ಕನಸು ಕಂಡು ಹೋರಾಟ ಮಾಡಿದವರು ಹಿಂದೆ ಸರಿಯುವ ಸನ್ನಿವೇಶ ನಿರ್ಮಾಣವಾಗಿದೆ ಎಂದು ವಿಷಾಧ ವ್ಯಕ್ತಪಡಿಸಿದರು.

ಮೈತ್ರಿ ಹೋರಾಟ, ಐಕ್ಯ ಹೋರಾಟ, ಸಮಾನ ಶತೃ ಇವುಗಳನ್ನು ಗುರ್ತಿಸಬೇಕಿದೆ. ಈ ದೇಶದ ಪ್ರಜಾಪ್ರಭುತ್ವಕ್ಕೆ ಅಪಾಯ ತಂದೊಡ್ಡಿರುವ ಈಗಿನ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸುವವರೆಲ್ಲ ಒಂದೆಡೆ ನಿಲ್ಲಬೇಕಾಗಿದೆ ಎಂದು ಮನವಿ ಮಾಡಿದರು.

ಸಮಾಜದಲ್ಲಿ ಬಿಡಿ ಬಿಡಿ ಹೋರಾಟದಿಂದ ಶತೃವಿನ ಗೆಲುವು ಸುಗಮವಾಗುತ್ತಿದೆ ಎಂಬುದನ್ನು ಮನಗಾಣಬೇಕಿದೆ. ಪರೋಕ್ಷವಾಗಿ ಬ್ರಿಟೀಷ್ ನೀತಿಯಿಂದ ಈ ದೇಶದ ಸಂಪತ್ತನ್ನು ಲೂಟಿ ಹೊಡೆಯಲಾಗುತ್ತಿದೆ ಎಂದು ಆರೋಪಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಪಿಐ ಜಿಲ್ಲಾ ಕಾರ್ಯದರ್ಶಿ ಜಿ.ರಘು ವಹಿಸಿದ್ದರು. ಮುಖಂಡ ವಿಜಯ್‌ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಮಾಜಿ ಜಿಲ್ಲಾ ಕಾರ್ಯದರ್ಶಿ ಹೆಚ್.ಎಂ ರೇಣುಕಾರಾಧ್ಯ, ರಾಧಾಸುಂದರೇಶ್, ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರಾದ ರವೀಶ್‌ಬಸಪ್ಪ, ಮಹೇಶ್, ಅಣ್ಣಯ್ಯ ರಾಜ್ಯ ಸಹಕಾರ್ಯದರ್ಶಿ ಸಂತೋಷ್, ಹೆಚ್.ಕೆ.ಸೋಮೇಗೌಡ, ವಸಂತ್‌ಕುಮಾರ್, ಧರ್ಮರಾಜ್, ರಮೇಶ್,ಮೊದಲಿಗೆ ಕೆರಮಕ್ಕಿ ಮಹೇಶ್ ಸ್ವಾಗತಿಸಿದರು.

CPI centenary celebrations come with challenges

 

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ

ಕೊಟ್ಟಿಗೆಹಾರ : ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ ಹಿನ್ನೆಲೆ ಮತ್ತು ಕಡಿಮೆಯಾದ ದೃಶ್ಯತೆಯಿಂದ ಪ್ರವಾಸಿಗರಿಗೆ ಹೆಚ್ಚಿನ ಅಪಾಯ ಸಾಧ್ಯತೆ ಇರುವ ಕುರಿತು ಆತಂಕ...

ತೀವ್ರಗೊಂಡ ಉದ್ಯಮಿ ಪತ್ನಿಯ ಆತ್ಮಹತ್ಯೆ ಪ್ರಕರಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬೆಚ್ಚಿಬೀಳಿಸುವಂತಹ ಘಟನೆಯೊಂದು ನಡೆದಿದ್ದು ನಗರದ ಉದ್ಯಮಿ ರಾಜೇಶ್ ಅವರ ಪತ್ನಿ ಸುಮ (55) ಆಲೇನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಅವರು...

Related Articles

ಅತ್ಯಾಚಾರ ಆರೋಪಿಗೆ 20 ವರ್ಷ ಕಠಿಣ ಸಜೆ-ದಂಡ

ಚಿಕ್ಕಮಗಳೂರು: ಅಪ್ರಾಪ್ತೆಯೊಬ್ಬಳು ಗರ್ಭಿಣಿಯಾಗಲು ಕಾರಣನಾದ ಆರೋಪಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ಎಫ್.ಟಿ.ಎಸ್.ಈ-೧ರ...

ನರೇಂದ್ರ ಮೋದಿ ಭಾರತದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿ

ಚಿಕ್ಕಮಗಳೂರು : ಸಾರ್ವತ್ರಿಕ ಚುನಾವಣೆಗಳ ಮೂಲಕ ಭಾರತದ ಅತಿ ಹೆಚ್ಚುಕಾಲ ಚುನಾಯಿತ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ...

ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು

  ಚಿಕ್ಕಮಗಳೂರು : ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ.ಹರಿಪ್ರಸಾದ್ ಅವರ ಅಧಿಕಾರ ಸ್ವೀಕಾರ ಸಮಾರಂಭ...

ವಿದ್ಯುತ್ ಕ್ಷೇತ್ರ ಖಾಸಗಿಕರಣಕ್ಕೆ ರೈತ ಸಂಘ ವಿರೋಧ

ಚಿಕ್ಕಮಗಳೂರು : ವಿದ್ಯುತ್ ಕ್ಷೇತ್ರವನ್ನು ಟಾಟಾ ಪವರ್ ಕಂಪನಿಗೆ ನೀಡುವ ಮೂಲಕ ಖಾಸಗಿಕರಣಗೊಳಿಸುವ ನಿರ್ಧಾರವನ್ನು ಖಂಡಿಸುವುದಾಗಿ...