Home namma chikmagalur ಕ್ರೇನ್–ಸ್ಕೂಟರ್ ಡಿಕ್ಕಿ; ಅಂಗನವಾಡಿ ಶಿಕ್ಷಕಿ ಸಾವು
namma chikmagalurchikamagalurCrime NewsHomeLatest News

ಕ್ರೇನ್–ಸ್ಕೂಟರ್ ಡಿಕ್ಕಿ; ಅಂಗನವಾಡಿ ಶಿಕ್ಷಕಿ ಸಾವು

Share
Share

ಮೂಡಿಗೆರೆ: ಚಾಲಕನ ನಿಯಂ ತ್ರಣ ತಪ್ಪಿದ ಕ್ರೇನ್ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನ ಪ್ಪಿದ್ದ ಘಟನೆ ಬುಧವಾರ ಬೆಳಿಗ್ಗೆ  ಪಟ್ಟಣದ ಕಾಲೇಜು ರಸ್ತೆಯಲ್ಲಿ ನಡೆದಿದೆ.

ತಾಲ್ಲೂಕಿನ ಹಳ್ಳದಗಂಡಿ ಗ್ರಾಮದ ಅಂಗನವಾಡಿ ಶಿಕ್ಷಕಿ ಸಂಪ್ರೀತ (21) ಮೃತಪಟ್ಟವರು. ಹೆಸ್ಗಲ್ ಗ್ರಾಮದ ಕಡೆಮಾಡ್ಕಲ್ ಅಂಗನವಾಡಿ ಶಿಕ್ಷಕಿ ಸುಜಾತ (28) ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೆಸ್ಗಲ್ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ತಯಾರಿ ನಡೆಸಿ, ಬಳಿಕ ಕಾರ್ಯಕ್ರಮಕ್ಕೆ ಕಾಲೇಜು ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಚಾಲಕನ‌ ನಿಯಂತ್ರಣ ತಪ್ಪಿದ ಕ್ರೇನ್, ಸ್ಕೂಟರ್ ಮೇಲೇರಿದ್ದು ಸ್ಕೂಟರ್‌ನಲ್ಲಿದ್ದ ಸಂಪ್ರೀತ ಕ್ರೇನ್ ಅಡಿಗೆ‌ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಮೃತದೇಹವನ್ನು ಹೊರ ತೆಗೆಯಲು ಹರಸಾಹಸ ಪಡುವಂತಾಯಿತು. ಸ್ಕೂಟರ್ ನಜ್ಜುಗುಜ್ಜಾಗಿದ್ದು, ಗಾಯಗೊಂಡಿರುವ ಸುಜಾತ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟ ಸಂಪ್ರೀತ ಅವರು, ಕೆಲವು ದಿನಗಳ ಹಿಂದೆ ಮನೆ‌ ನಿರ್ಮಿಸಿ ಗೃಹ ಪ್ರವೇಶ ನಡೆಸಿದ್ದರು. ಸುಜಾತ ಹೆಸ್ಗಲ್ ಗ್ರಾ.ಪಂ. ಕರವಸೂಲಿಗಾರ ರವಿ ಅವರ ಪತ್ನಿಯಾಗಿದ್ದು, ಒಂಬತ್ತು ತಿಂಗಳ ಮಗುವಿದೆ. ಆಸ್ಪತ್ರೆ ಆವರಣದಲ್ಲಿ ಸಂಬಂ ಧಿಕರ ಆಕ್ರಂದನ‌ ಮುಗಿಲು ಮುಟ್ಟಿತ್ತು.

Crane-scooter collision; Anganwadi teacher dies

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...