Home namma chikmagalur ಕಂದಾಯ ಇಲಾಖೆಯ 11 ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಪ್ರಕರಣ
namma chikmagalurchikamagalurHomeLatest News

ಕಂದಾಯ ಇಲಾಖೆಯ 11 ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಪ್ರಕರಣ

Share
Share

ಚಿಕ್ಕಮಗಳೂರು: ಮಧ್ಯ ವಯಸ್ಸಿನವರಿಗೂ ವೃದ್ಧಾಪ್ಯ ವೇತನ ಮಂಜೂರು ಮಾಡಿರುವ ಆರೋಪದಲ್ಲಿ ಕಂದಾಯ ಇಲಾಖೆಯ 11 ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

ಕಡೂರು ತಾಲ್ಲೂಕು ಕಚೇರಿ ಸಾಮಾಜಿಕ ಭದ್ರತೆ ವಿಭಾಗದ ಹಿಂದಿನ ಶಿರಸ್ತೇದಾರ್ ಆಗಿದ್ದ ಬಿ.ಸಿ. ಕಲ್ಮರುಡಪ್ಪ, ವಿಷಯ ನಿರ್ವಾಹಕ ಗಿರೀಶ್, ಕಂದಾಯ ಅಧಿಕಾರಿ ರವಿಕುಮಾರ್, ಗ್ರಾಮ ಆಡಳಿತಾಧಿಕಾರಿಗಳಾದ ಹನುಮಂತಪ್ಪ, ಕಾವ್ಯಾ ಟಿ.ಎಂ., ಕುಮಾರ್ ಜಿ.ಎಂ., ಲಿಂಗರಾಜು ಕೆ., ರವಿ ಕೆ.ಆರ್., ಎಸ್.ಎಂ.ಚನ್ನಬಸವಯ್ಯ, ನಿರ್ಮಲಾ ಟಿ.ಎಸ್., ರವಿಚಂದ್ರ ಎಸ್.ಗೊಗಿ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸರ್ಕಾರಕ್ಕೆ ವಂಚನೆ, ನಕಲಿ ದಾಖಲೆ ಸೃಷ್ಟಿ, ವಂಚಿಸುವ ಉದ್ದೇಶದಿಂದಲೇ ದಾಖಲೆಗಳ ಸೃಷ್ಟಿ, ಕರ್ತವ್ಯ ಲೋಪ ಸೇರಿ ಹಲವು ಕಲಂಗಳ ಅಡಿ ಪ್ರಕರಣ ದಾಖಲಿಸಲಾಗಿದೆ.

‘ಸಂಧ್ಯಾ ಸುರಕ್ಷಾ ಯೋಜನೆಯಡಿ ವೃದ್ಧಾಪ್ಯ ವೇತನವನ್ನು 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿನವರು ಮಾತ್ರ ಈ ಯೋಜನೆಗೆ ಅರ್ಹರು. ಆದರೆ, ಸಾಮಾಜಿಕ ಭದ್ರತಾ ವಿಭಾಗದ ಶಿರಸ್ತೇದಾರ್ (ಉಪ ತಹಶೀಲ್ದಾರ್) ಬಿ.ಸಿ.ಕಲ್ಮರುಡಪ್ಪ ಅವರು ಲಾಗಿನ್ ದುರ್ಬಳಕೆ ಮಾಡಿಕೊಂಡು 35–40 ವಯಸ್ಸಿನವರಿಗೂ ವೇತನ ಮಂಜೂರು ಮಾಡಿದ್ದಾರೆ’ ಎಂಬ ದೂರುಗಳು ಜಿಲ್ಲಾಧಿಕಾರಿಗೆ ಸಲ್ಲಿಕೆಯಾಗಿದ್ದವು.

ಅಂದಿನ ಉಪವಿಭಾಗಾಧಿಕಾರಿ ಅವರಿಂದ ಪ್ರಾಥಮಿಕ ತನಿಖೆ ಮಾಡಿಸಿದ್ದ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಕಲ್ಮರುಡಪ್ಪ ಅವರನ್ನು ಅಮಾನತು ಮಾಡಿದ್ದರು. ತಹಶೀಲ್ದಾರ್‌ ಸರ್ಕಾರಕ್ಕೆ ವಿಚಾರಣಾ ವರದಿ ಸಲ್ಲಿಸಿದ್ದರು. ಅಕ್ರಮವಾಗಿ 64 ಜನರಿಗೆ ಪಿಂಚಣಿ ಮಂಜೂರು ಮಾಡಿ ಸರ್ಕಾರಕ್ಕೆ ₹9.03 ಲಕ್ಷ ನಷ್ಟ ಮಾಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದು, ಅಷ್ಟೂ ಜನರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕಂದಾಯ ಇಲಾಖೆ ಸೂಚನೆ ನೀಡಿತ್ತು. ಜಿಲ್ಲಾಧಿಕಾರಿ ಆದೇಶದ ಮೇರೆಗೆ ಕಡೂರು ತಹಶೀಲ್ದಾರ್ ಪೊಲೀಸರಿಗೆ ದೂರು ನೀಡಿದ್ದರು.

Criminal case against 11 revenue department staff

Share

Leave a comment

Leave a Reply

Your email address will not be published. Required fields are marked *

Don't Miss

ಹಿರಿಯ ನಾಗರಿಕರಿಗೆ 3.12 ಲಕ್ಷ ರೂ ವಂಚನೆ

ಚಿಕ್ಕಮಗಳೂರು: ಸೈಬರ್ ಕ್ರಿಮಿನಲ್‌ಗಳ ಜಾಲಕ್ಕೆ ಸಿಲುಕಿ ಹಿರಿಯ ನಾಗರಿಕರೊಬ್ಬರು ಬರೋಬ್ಬರಿ 3.12 ಲಕ್ಷ ಕಳೆದುಕೊಂಡಿದ್ದಾರೆ. ನಗರದಲ್ಲಿ ವಾಸವಾಗಿರುವ 62 ವರ್ಷದ ವೆಂಕಟೇಶ್ ಇತ್ತೀಚೆಗೆ ಅವರ ಮೊಬೈಲ್‌ಗೆ ಬಂದಿದ್ದ ಒಂದು ಅಪರಿಚಿತ ಎಪಿಕೆ...

ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಶಿಫಾರಸ್ ಪತ್ರ

ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್, ಭಜರಂಗದಳದ ಮುಖಂಡ ಶ್ಯಾಮ್ ವಿ ಗೌಡ, ಮುಸ್ಲಿಂ ಸಮುದಾಯದ 10 ಮಂದಿ ಸೇರಿ ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಜಿಲ್ಲಾ...

Related Articles

ಎಸ್.ಬಿದರೆಯ ಬೆಂಕಿ ಲಕ್ಷ್ಮೀ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವ

ಕಡೂರು: ತಾಲ್ಲೂಕಿನ ಸಖರಾಯಪಟ್ಟಣ ಹೋಬಳಿ ಎಸ್.ಬಿದರೆಯ ಬೆಂಕಿ ಲಕ್ಷ್ಮೀ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವವು ಮಂಗಳವಾರ ಶ್ರದ್ಧಾ...

ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿದ್ದ ಇಂದಿರಾ ಕ್ಯಾಂಟೀನ್ ಸ್ಥಳಾಂತರ

ಚಿಕ್ಕಮಗಳೂರು : ನಗರದ ಐ.ಜಿ. ರಸ್ತೆಯ ಬಸ್ ನಿಲ್ದಾಣದ ಸಮೀಪವಿರುವ ಇಂದಿರಾ ಕ್ಯಾಂಟೀನ್ ಅನ್ನು ಸ್ಥಳಾಂತರ...

ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳು ಮನೆ ಬಾಗಿಲಿಗೆ

ಚಿಕ್ಕಮಗಳೂರು: ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ...

ಶಾಸಕ ಜಿ.ಹೆಚ್. ಶ್ರೀನಿವಾಸ್ ವಿರುದ್ಧ ಪ್ರತಿಭಟನೆ

ಅಜ್ಜಂಪುರ : ಶಾಸಕ ಜಿ.ಹೆಚ್. ಶ್ರೀನಿವಾಸ್ ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು...