Home namma chikmagalur ಕಂದಾಯ ಇಲಾಖೆಯ 11 ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಪ್ರಕರಣ
namma chikmagalurchikamagalurHomeLatest News

ಕಂದಾಯ ಇಲಾಖೆಯ 11 ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಪ್ರಕರಣ

Share
Share

ಚಿಕ್ಕಮಗಳೂರು: ಮಧ್ಯ ವಯಸ್ಸಿನವರಿಗೂ ವೃದ್ಧಾಪ್ಯ ವೇತನ ಮಂಜೂರು ಮಾಡಿರುವ ಆರೋಪದಲ್ಲಿ ಕಂದಾಯ ಇಲಾಖೆಯ 11 ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

ಕಡೂರು ತಾಲ್ಲೂಕು ಕಚೇರಿ ಸಾಮಾಜಿಕ ಭದ್ರತೆ ವಿಭಾಗದ ಹಿಂದಿನ ಶಿರಸ್ತೇದಾರ್ ಆಗಿದ್ದ ಬಿ.ಸಿ. ಕಲ್ಮರುಡಪ್ಪ, ವಿಷಯ ನಿರ್ವಾಹಕ ಗಿರೀಶ್, ಕಂದಾಯ ಅಧಿಕಾರಿ ರವಿಕುಮಾರ್, ಗ್ರಾಮ ಆಡಳಿತಾಧಿಕಾರಿಗಳಾದ ಹನುಮಂತಪ್ಪ, ಕಾವ್ಯಾ ಟಿ.ಎಂ., ಕುಮಾರ್ ಜಿ.ಎಂ., ಲಿಂಗರಾಜು ಕೆ., ರವಿ ಕೆ.ಆರ್., ಎಸ್.ಎಂ.ಚನ್ನಬಸವಯ್ಯ, ನಿರ್ಮಲಾ ಟಿ.ಎಸ್., ರವಿಚಂದ್ರ ಎಸ್.ಗೊಗಿ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸರ್ಕಾರಕ್ಕೆ ವಂಚನೆ, ನಕಲಿ ದಾಖಲೆ ಸೃಷ್ಟಿ, ವಂಚಿಸುವ ಉದ್ದೇಶದಿಂದಲೇ ದಾಖಲೆಗಳ ಸೃಷ್ಟಿ, ಕರ್ತವ್ಯ ಲೋಪ ಸೇರಿ ಹಲವು ಕಲಂಗಳ ಅಡಿ ಪ್ರಕರಣ ದಾಖಲಿಸಲಾಗಿದೆ.

‘ಸಂಧ್ಯಾ ಸುರಕ್ಷಾ ಯೋಜನೆಯಡಿ ವೃದ್ಧಾಪ್ಯ ವೇತನವನ್ನು 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿನವರು ಮಾತ್ರ ಈ ಯೋಜನೆಗೆ ಅರ್ಹರು. ಆದರೆ, ಸಾಮಾಜಿಕ ಭದ್ರತಾ ವಿಭಾಗದ ಶಿರಸ್ತೇದಾರ್ (ಉಪ ತಹಶೀಲ್ದಾರ್) ಬಿ.ಸಿ.ಕಲ್ಮರುಡಪ್ಪ ಅವರು ಲಾಗಿನ್ ದುರ್ಬಳಕೆ ಮಾಡಿಕೊಂಡು 35–40 ವಯಸ್ಸಿನವರಿಗೂ ವೇತನ ಮಂಜೂರು ಮಾಡಿದ್ದಾರೆ’ ಎಂಬ ದೂರುಗಳು ಜಿಲ್ಲಾಧಿಕಾರಿಗೆ ಸಲ್ಲಿಕೆಯಾಗಿದ್ದವು.

ಅಂದಿನ ಉಪವಿಭಾಗಾಧಿಕಾರಿ ಅವರಿಂದ ಪ್ರಾಥಮಿಕ ತನಿಖೆ ಮಾಡಿಸಿದ್ದ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಕಲ್ಮರುಡಪ್ಪ ಅವರನ್ನು ಅಮಾನತು ಮಾಡಿದ್ದರು. ತಹಶೀಲ್ದಾರ್‌ ಸರ್ಕಾರಕ್ಕೆ ವಿಚಾರಣಾ ವರದಿ ಸಲ್ಲಿಸಿದ್ದರು. ಅಕ್ರಮವಾಗಿ 64 ಜನರಿಗೆ ಪಿಂಚಣಿ ಮಂಜೂರು ಮಾಡಿ ಸರ್ಕಾರಕ್ಕೆ ₹9.03 ಲಕ್ಷ ನಷ್ಟ ಮಾಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದು, ಅಷ್ಟೂ ಜನರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕಂದಾಯ ಇಲಾಖೆ ಸೂಚನೆ ನೀಡಿತ್ತು. ಜಿಲ್ಲಾಧಿಕಾರಿ ಆದೇಶದ ಮೇರೆಗೆ ಕಡೂರು ತಹಶೀಲ್ದಾರ್ ಪೊಲೀಸರಿಗೆ ದೂರು ನೀಡಿದ್ದರು.

Criminal case against 11 revenue department staff

Share

Leave a comment

Leave a Reply

Your email address will not be published. Required fields are marked *

Don't Miss

ನೋಟರಿ ವಿ.ಕೆ.ರಘುಯಿಂದ ನೀರಿನ ಮೇಲೆ ತೇಲುತ್ತಾ ಯೋಗ ಭಂಗಿ ಪ್ರದರ್ಶನ

ಚಿಕ್ಕಮಗಳೂರು: ಯೋಗ ಸಾಧಕ ನಗರದ ವಕೀಲ ಹಾಗೂ ನೋಟರಿ ವಿ.ಕೆ.ರಘು ಅವರು  ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೀರಿನ ಮೇಲೆ ತೇಲುತ್ತಾ ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿದರು. ಬೈಪಾಸ್ ರಸ್ತೆಯ ನರ್ಚರ್...

ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

ಕಡೂರು: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಲ್ಲೂರು ಗ್ರಾಮದ 20 ವರ್ಷದ ಚಂದನ್ ಮೃತಪಟ್ಟ ದುರ್ದೈವಿ. ಇತ್ತೀಚೆಗೆ...

Related Articles

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ

ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ. ಈ ಹಿಂದೆ ಒಬ್ಬರಿಗೆ ಮಾತ್ರ ಗುತ್ತಿಗೆ...

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು...