Home namma chikmagalur ಕಂದಾಯ ಇಲಾಖೆಯ 11 ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಪ್ರಕರಣ
namma chikmagalurchikamagalurHomeLatest News

ಕಂದಾಯ ಇಲಾಖೆಯ 11 ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಪ್ರಕರಣ

Share
Share

ಚಿಕ್ಕಮಗಳೂರು: ಮಧ್ಯ ವಯಸ್ಸಿನವರಿಗೂ ವೃದ್ಧಾಪ್ಯ ವೇತನ ಮಂಜೂರು ಮಾಡಿರುವ ಆರೋಪದಲ್ಲಿ ಕಂದಾಯ ಇಲಾಖೆಯ 11 ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

ಕಡೂರು ತಾಲ್ಲೂಕು ಕಚೇರಿ ಸಾಮಾಜಿಕ ಭದ್ರತೆ ವಿಭಾಗದ ಹಿಂದಿನ ಶಿರಸ್ತೇದಾರ್ ಆಗಿದ್ದ ಬಿ.ಸಿ. ಕಲ್ಮರುಡಪ್ಪ, ವಿಷಯ ನಿರ್ವಾಹಕ ಗಿರೀಶ್, ಕಂದಾಯ ಅಧಿಕಾರಿ ರವಿಕುಮಾರ್, ಗ್ರಾಮ ಆಡಳಿತಾಧಿಕಾರಿಗಳಾದ ಹನುಮಂತಪ್ಪ, ಕಾವ್ಯಾ ಟಿ.ಎಂ., ಕುಮಾರ್ ಜಿ.ಎಂ., ಲಿಂಗರಾಜು ಕೆ., ರವಿ ಕೆ.ಆರ್., ಎಸ್.ಎಂ.ಚನ್ನಬಸವಯ್ಯ, ನಿರ್ಮಲಾ ಟಿ.ಎಸ್., ರವಿಚಂದ್ರ ಎಸ್.ಗೊಗಿ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸರ್ಕಾರಕ್ಕೆ ವಂಚನೆ, ನಕಲಿ ದಾಖಲೆ ಸೃಷ್ಟಿ, ವಂಚಿಸುವ ಉದ್ದೇಶದಿಂದಲೇ ದಾಖಲೆಗಳ ಸೃಷ್ಟಿ, ಕರ್ತವ್ಯ ಲೋಪ ಸೇರಿ ಹಲವು ಕಲಂಗಳ ಅಡಿ ಪ್ರಕರಣ ದಾಖಲಿಸಲಾಗಿದೆ.

‘ಸಂಧ್ಯಾ ಸುರಕ್ಷಾ ಯೋಜನೆಯಡಿ ವೃದ್ಧಾಪ್ಯ ವೇತನವನ್ನು 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿನವರು ಮಾತ್ರ ಈ ಯೋಜನೆಗೆ ಅರ್ಹರು. ಆದರೆ, ಸಾಮಾಜಿಕ ಭದ್ರತಾ ವಿಭಾಗದ ಶಿರಸ್ತೇದಾರ್ (ಉಪ ತಹಶೀಲ್ದಾರ್) ಬಿ.ಸಿ.ಕಲ್ಮರುಡಪ್ಪ ಅವರು ಲಾಗಿನ್ ದುರ್ಬಳಕೆ ಮಾಡಿಕೊಂಡು 35–40 ವಯಸ್ಸಿನವರಿಗೂ ವೇತನ ಮಂಜೂರು ಮಾಡಿದ್ದಾರೆ’ ಎಂಬ ದೂರುಗಳು ಜಿಲ್ಲಾಧಿಕಾರಿಗೆ ಸಲ್ಲಿಕೆಯಾಗಿದ್ದವು.

ಅಂದಿನ ಉಪವಿಭಾಗಾಧಿಕಾರಿ ಅವರಿಂದ ಪ್ರಾಥಮಿಕ ತನಿಖೆ ಮಾಡಿಸಿದ್ದ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಕಲ್ಮರುಡಪ್ಪ ಅವರನ್ನು ಅಮಾನತು ಮಾಡಿದ್ದರು. ತಹಶೀಲ್ದಾರ್‌ ಸರ್ಕಾರಕ್ಕೆ ವಿಚಾರಣಾ ವರದಿ ಸಲ್ಲಿಸಿದ್ದರು. ಅಕ್ರಮವಾಗಿ 64 ಜನರಿಗೆ ಪಿಂಚಣಿ ಮಂಜೂರು ಮಾಡಿ ಸರ್ಕಾರಕ್ಕೆ ₹9.03 ಲಕ್ಷ ನಷ್ಟ ಮಾಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದು, ಅಷ್ಟೂ ಜನರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕಂದಾಯ ಇಲಾಖೆ ಸೂಚನೆ ನೀಡಿತ್ತು. ಜಿಲ್ಲಾಧಿಕಾರಿ ಆದೇಶದ ಮೇರೆಗೆ ಕಡೂರು ತಹಶೀಲ್ದಾರ್ ಪೊಲೀಸರಿಗೆ ದೂರು ನೀಡಿದ್ದರು.

Criminal case against 11 revenue department staff

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...