Home Latest News ದತ್ತಮಾಲೆ ಧರಿಸಿದ ಸಿ.ಟಿ ರವಿ : ಇಂದಿನಿಂದ ದತ್ತಮಾಲಾ ಅಭಿಯಾನ ಆರಂಭ
Latest News

ದತ್ತಮಾಲೆ ಧರಿಸಿದ ಸಿ.ಟಿ ರವಿ : ಇಂದಿನಿಂದ ದತ್ತಮಾಲಾ ಅಭಿಯಾನ ಆರಂಭ

Share
Share

ಚಿಕ್ಕಮಗಳೂರು : ಕಾಫಿನಾಡಲ್ಲಿ ಇಂದಿನಿಂದ ದತ್ತಮಾಲಾ ಅಭಿಮಾನದ ಸಂಭ್ರಮ ಕಳೆ ಕಟ್ಟಲಿದೆ, ದತ್ತಜಯಂತಿ ಹಿನ್ನೆಲೆ ದತ್ತಭಕ್ತರಿಂದ ಇಂದು ಮಾಲಾಧಾರಣೆ ನಡೆಯಿತು. ಚಿಕ್ಕಮಗಳೂರು ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ನೂರಾರು ಭಕ್ತರು ಮಾಲಾಧಾರಣೆ ಮಾಡಿದರು

ಮಾಜಿ ಸಚಿವ ಸಿ.ಟಿ.ರವಿ ಕೂಡಾ ಮಾಲೆ ಧರಿಸಿದರು, ಸಿ.ಟಿ.ರವಿ ಜೊತೆ ಭಜರಂಗದಳ ಮುಖಂಡ ರಘು ಸಖಲೇಶಪುರ ಸಹಾ ಮಾಲಾಧಾರಣೆ ಮಾಡಿದರು,
100ಕ್ಕೂ ಹೆಚ್ಚು ದತ್ತಭಕ್ತರು ಇಂದಿನಿಂದ ಧಾರ್ಮಿಕ ವಿಧಿ ವಿಧಾನಗಳಲ್ಲಿ ತೊಡಗಲಿದ್ದಾರೆ, ಚಿಕ್ಕಮಗಳೂರು ಅಲ್ಲದೇ ರಾಜ್ಯದ ವಿವಿಧ ಜಿಲ್ಲೆಯಲ್ಲೂ ಸಾವಿರಾರು ದತ್ತಭಕ್ತರಿಂದ ಇಂದೇ ಮಾಲಾಧಾರಣೆ ನಡೆಯಲಿದೆ, ಇಂದಿನಿಂದ 9 ದಿನಗಳ ಕಾಲ ವೃತ ಆಚರಿಸಲಿರುವ ದತ್ತಭಕ್ತರು ಭಜನೆ ಕೀರ್ತನೆಯಲ್ಲಿ ತೊಡಗಲಿದ್ದಾರೆ.

ಇದೇ ಡಿಸೆಂಬರ್ 14 ರಂದು ದತ್ತಪೀಠದಲ್ಲಿ ಭಕ್ತರು ದತ್ತಪಾದುಕೆ‌ ದರ್ಶನ ಮಾಡಲಿದ್ದಾರೆ. ಡಿಸೆಂಬರ್ 12 ರಂದು ಅನಸೂಯ ಜಯಂತಿ ಹಾಗೂ 13 ರಂದು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಈ ಬಾರಿಯ ದತ್ತ ಜಯಂತಿಯಲ್ಲಿ 25 ಸಾವಿರಕ್ಕೂ ಅಧಿಕ ಭಕ್ತರಿಂದ ದತ್ತಪೀಠದಲ್ಲಿ ಪಾದುಕೆ ದರ್ಶನ ಪಡೆಯುವ ನಿರೀಕ್ಷೆ ಇದೆ. ಈ ನಡುವೆ ಇಂದಿನಿಂದ 9 ದಿನಗಳ ಕಾಲ ಕಾಫಿನಾಡು ಬೂದಿ ಮುಚ್ಚಿದ ಕೆಂಡವಾಗಲಿರಲಿದೆ. ಆದ್ದರಿಂದ 9 ದಿನಗಳ ಕಾಲ ಜಿಲ್ಲಾದ್ಯಂತ ಖಾಕಿ ಹೈ ಅಲರ್ಟ್ ಆಗಿದೆ. ಚಿಕ್ಕಮಗಳೂರು ತಾಲೂಕಿನ ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸುತ್ತಮುತ್ತ ವ್ಯಾಪಕ ಬಂದೋಬಸ್ತ್ ಕಲ್ಪಿಸಲಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...