Home namma chikmagalur chikamagalur ಶೃಂಗೇರಿ ಕ್ಷೇತ್ರದ ನೂತನ ಶಾಸಕರಾಗಿ ಡಿ.ಎನ್. ಜೀವರಾಜ್ ಆಯ್ಕೆ
chikamagalurHomeLatest Newsnamma chikmagalur

ಶೃಂಗೇರಿ ಕ್ಷೇತ್ರದ ನೂತನ ಶಾಸಕರಾಗಿ ಡಿ.ಎನ್. ಜೀವರಾಜ್ ಆಯ್ಕೆ

Share
Share

ಚಿಕ್ಕಮಗಳೂರು: ಚುನಾವಣಾ ಆಯೋಗದ ಅಧಿಕೃತ ಘೋಷಣೆಯೊಂದಿಗೆ ಡಿ.ಎನ್. ಜೀವರಾಜ್ ಅವರ ಗೆಲುವು ಖಚಿತಗೊಂಡಿದ್ದು, ಅವರು ಶೃಂಗೇರಿ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಹೈಕೋರ್ಟ್ ಆದೇಶದ ಮೇರೆಗೆ ಮೇ 2ರಂದು ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಇದೀಗ ಅಂತಿಮ ಘಟ್ಟ ತಲುಪಿದ್ದು, ಚುನಾವಣಾ ಆಯೋಗ ಇಂದು ಅಧಿಕೃತ ಫಲಿತಾಂಶವನ್ನು ಪ್ರಕಟಿಸಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಡಿ.ಎನ್. ಜೀವರಾಜ್ ಅವರು ಮರು ಎಣಿಕೆಯಲ್ಲಿ ಮುನ್ನಡೆ ಸಾಧಿಸಿ, ಹಾಲಿ ಶಾಸಕ ಟಿ.ಡಿ. ರಾಜೇಗೌಡ ಅವರನ್ನು ಹಿಂದಿಕ್ಕಿ ಗೆಲುವು ದಾಖಲಿಸಿದ್ದಾರೆ.

ಮೇ 2ರಂದು ನಡೆದ ಮರು ಎಣಿಕೆಯಲ್ಲಿ ಅಂಚೆ ಮತಗಳ ಪರಿಶೀಲನೆ ಪೂರ್ಣಗೊಂಡಿದ್ದರೂ ಫಲಿತಾಂಶವನ್ನು ತಕ್ಷಣ ಘೋಷಿಸಲಾಗಿರಲಿಲ್ಲ. ಈ ಬೆಳವಣಿಗೆ ಕ್ಷೇತ್ರದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು.

ಮರು ಎಣಿಕೆಯು ರೋಚಕ ಹಣಾಹಣಿಗೆ ಸಾಕ್ಷಿಯಾಗಿದ್ದು, ಕೊನೆ ಹಂತದಲ್ಲಿ ಜೀವರಾಜ್ ಮುನ್ನಡೆ ಕಾಯ್ದುಕೊಂಡಿದ್ದರು.

ಈ ಫಲಿತಾಂಶ ಶೃಂಗೇರಿ ಕ್ಷೇತ್ರದ ರಾಜಕೀಯದಲ್ಲಿ ಮಹತ್ವದ ತಿರುವು ತಂದಿದ್ದು, ಬೆಂಬಲಿಗರಲ್ಲಿ ಸಂಭ್ರಮ ಮನೆಮಾಡಿದೆ.

D.N. Jeevaraj elected as new MLA of Sringeri constituency

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...