Home namma chikmagalur chikamagalur ಅಂಬೇಡ್ಕರ್ ಜಯಂತಿಗೆ ಅಡ್ಡಿ ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ
chikamagalurHomeLatest Newsnamma chikmagalur

ಅಂಬೇಡ್ಕರ್ ಜಯಂತಿಗೆ ಅಡ್ಡಿ ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

Share
Share

ಚಿಕ್ಕಮಗಳೂರು: ಮರ್ಲೆಹೊಸಕೋಟೆಯಲ್ಲಿ ಕಂದಾಯ ಜಾಗದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲು ಮುಂದಾಗಿದ್ದಾಗ ಧ್ವಜಗಳನ್ನು ತೆರವುಗೊಳಿಸಿದ ಗ್ರಾಮಲೆಕ್ಕಿಗರು ಮತ್ತು ರಾಜಸ್ವನಿರೀಕ್ಷರನ್ನು ಅಮಾನತುಪಡಿಸಬೇಕು. ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಸವರ್ಣೀಯರ ಮೇಲೆ ದೌರ್ಜನ್ಯಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ದಲಿತ ಸಂಘರ್ಷ ಸಮಿತಿ ಮುಖಂಡ ಮರ್ಲೆ ಅಣ್ಣಯ್ಯ ಒತ್ತಾಯಿಸಿದರು.

ಸುದ್ದಿಗೋಷ್ಟಿಯಲ್ಲಿ ಬುಧವಾರ ಮಾತನಾಡಿ, ಏ ೧೪ರಂದು ಬೆಳಿಗ್ಗೆ ಪರಿಶಿಷ್ಟರು ಅಂಬೇಡ್ಕರ್ ಜಯಂತಿ ಆಚರಿಸಲು ಕಂದಾಯ ಇಲಾಖೆಗೆ ಸೇರಿದ ಖಾಲಿಜಾಗದಲ್ಲಿ ಮುಂದಾದಾಗ ಸವರ್ಣೀಯರು ಮಹಿಳೆಯರನ್ನು ಮುಂದೆ ಬಿಟ್ಟು ಜಯಂತಿ ಆಚರಿಸಲು ಅಡ್ಡಿಪಡಿಸಿದ್ದಾರೆಂದು ದೂರಿದರು.

ಕೆಲವು ಸವರ್ಣಿಯರು ಅಂಬೇಡ್ಕರ್ ಭಾವಚಿತ್ರಕ್ಕೆ ಬೆಂಕಿ ಹಚ್ಚಲು ಪ್ರಚೋದಿಸಿದ್ದಾರೆ. ಪರಿಶಿಷ್ಟರಿಗೆ ಬಹಿಷ್ಕಾರ ಹಾಕಬೇಕು. ಊರಿನಿಂದ ಹೊರಹಾಕಬೇಕೆಂದು ನಿಂದಿಸಿದ್ದಾರೆ. ಅಂಬೇಡ್ಕರ್ ಭಾವಚಿತ್ರಕ್ಕೆ ಹಾನಿಪಡಿಸಿದ್ದಾರೆ, ನೀಲಿಬಾವುಟವನ್ನು ಕಿತ್ತುಹಾಕಿದ್ದಾರೆ. ದೀಪದ ಕಂಬವನ್ನು ಬಿಸಾಕಿದ್ದಾರೆಂದು ಆರೋಪಿಸಿದರು.

ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿಗಳು ತಹಸೀಲ್ದಾರ್ ಅವರನ್ನು ಸ್ಥಳಕ್ಕೆ ಕಳುಹಿಸಿ ಜಯಂತಿ ಆಚರಿಸಲು ಅವಕಾಶ ನೀಡಲು ಸೂಚಿಸಿದ್ದಾರೆ. ಅಧಿಕಾರಿ ಸ್ಥಳಕ್ಕೆ ಬಂದಾಗ, ಪೊಲೀಸರು ಇದ್ದರು ಜಯಂತಿ ಆಚರಿಸಲು ಸರ್ವರ್ಣಿಯ ಕೆಲವರು ಅಡ್ಡಿಪಡಿಸಿದ್ದಾರೆ. ಬಳಿಕ ಪೊಲೀಸರು ಜನರನ್ನು ಚದುರಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಹಾರಹಾಕಿ ದೀಪಬೆಳಗಿಸಿದ್ದಾರೆಂದು ತಿಳಿಸಿದರು.

ಗ್ರಾಮದ ವಿದ್ಯಾವಂತ ಯುವಕರನ್ನು ಠಾಣೆಗೆ ಬರುವಂತೆ ದೂರವಾಣಿಯಲ್ಲಿ ಒತ್ತಾಯಿಸುತ್ತಿದ್ದು, ಠಾಣೆ ಮೆಟ್ಟಿಲು ತುಳಿದರೆ ಮುಂದಿನ ವಿದ್ಯಾಭ್ಯಾಸಕ್ಕೆ ಎಲ್ಲಿ ತೊಂದರೆಯಾಗುತ್ತದೆ ಎಂದು ಹೆದರುತ್ತಿದ್ದಾರೆ. ಗ್ರಾಮದಲ್ಲಿ ಶಾಂತಿ ನೆಲಸಲು ಪೊಲೀಸ್ ರಕ್ಷಣೆ ನೀಡಬೇಕೆಂದು ಕೋರಿದರು.

ಮುಖಂಡರಾದ ಟಿ.ಎಲ್.ಗಣೇಶ್, ಭೀಮಯ್ಯ, ರೇವಣ್ಣ,ಗ್ರಾಮಸ್ಥರಾದ ಸಿದ್ದಯ್ಯ,. ಆನಂದ್, ಕುಮಾರ್ ಇದ್ದರು.

Dalit Sangharsh Samiti demands action to disrupt Ambedkar Jayanti

Share

Leave a comment

Leave a Reply

Your email address will not be published. Required fields are marked *

Don't Miss

ಕನ್ನಡದ ಸಂಯೋಜಕ ಪ್ರತಿಭೆ ತೇಜಸ್ವಿ

ಕೊಟ್ಟಿಗೆಹಾರ: ಪೋಟೋಗ್ರಾಫಿ, ಫಿಶಿಂಗ್, ಪೈಂಟಿಂಗ್, ಸಾಹಿತ್ಯ ಹೀಗೆ ನಾನಾ ಬಗೆಯ ಆಸಕ್ತಿ ಕುತೂಹಲಗಳಿದ್ದ ತೇಜಸ್ವಿ ಅವರು ಕನ್ನಡದ ಸಂಯೋಜಕ ಪ್ರತಿಭೆ ಎಂದು ವಿಮರ್ಶಕ, ಲೇಖಕ ಡಾ.ಎಚ್.ಎಸ್.ಸತ್ಯನಾರಾಯಣ ಹೇಳಿದರು. ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ...

ಜಿಲ್ಲೆಯಲ್ಲಿ ಮುಖ್ಯಮಂತ್ರಿ ಕಾರ್ಯಕ್ರಮ ಯಶಸ್ಸಿಗೆ ಸೂಚನೆ

ಚಿಕ್ಕಮಗಳೂರು: ಮುಖ್ಯಮಂತ್ರಿಗಳು ಏಪ್ರಿಲ್ ೧೩ ರಂದು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಸವಲತ್ತುಗಳ ವಿತರಣೆ ಮಾಡಲಿದ್ದಾರೆ ಎಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ...

Related Articles

ಜಮೀನಿನ ನಕಲಿ ದಾಖಲೆ ಸೃಷ್ಟಿಸಿ ವಂಚನೆ

ಚಿಕ್ಕಮಗಳೂರು: ಕಡೂರು ತಾಲೂಕು ಪಂಚನಹಳ್ಳಿ ಹೋಬಳಿ ಡಿ.ಹೊಸಹಳ್ಳಿ ಗ್ರಾಮದ ತಮ್ಮ ಪಿತ್ರಾರ್ಜಿತ ಆಸ್ತಿಗೆ ನಕಲಿ ದಾಖಲೆಯನ್ನು...

ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ 80 ರೈತರಿಗೆ ವಂಚನೆ

ಕಡೂರು : ಸರಕಾರದ ವಿವಿಧ ಇಲಾಖೆಗಳಡಿ ದೊರೆಯುವ ಸಬ್ಸಿಡಿ ಸವಲತ್ತುಗಳನ್ನು ಕೊಡಿಸುವುದಾಗಿ ನಂಬಿಸಿ ೮೦ ಜನ...

ಸರ್ಫೇಸಿ ಕಾಯ್ದೆ ವಿರೋಧಿಸಿ ಏ. 22ರಂದು ಪ್ರತಿಭಟನೆ

ಚಿಕ್ಕಮಗಳೂರು: ಸರ್ಫೇಸಿ ಕಾಯ್ದೆ ವಿರೋಧಿಸಿ ಏ. 22ರಂದು ಬೆಳಿಗ್ಗೆ 11ಗಂಟೆಗೆ ನಗರದ ಸಂಸತ್ ಸದಸ್ಯರ ಕಚೇರಿ...

ನರ್ಸ್‌ನಿಂದ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ರೀಲ್ಸ್ ವೀಕ್ಷಣೆ

ಎನ್.ಆರ್.ಪುರ : ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರವೀಗ ರೀಲ್ಸ್ ಅಡ್ಡವಾಗಿ...