Home namma chikmagalur chikamagalur ಅಂಬೇಡ್ಕರ್ ಜಯಂತಿಗೆ ಅಡ್ಡಿ ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ
chikamagalurHomeLatest Newsnamma chikmagalur

ಅಂಬೇಡ್ಕರ್ ಜಯಂತಿಗೆ ಅಡ್ಡಿ ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

Share
Share

ಚಿಕ್ಕಮಗಳೂರು: ಮರ್ಲೆಹೊಸಕೋಟೆಯಲ್ಲಿ ಕಂದಾಯ ಜಾಗದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲು ಮುಂದಾಗಿದ್ದಾಗ ಧ್ವಜಗಳನ್ನು ತೆರವುಗೊಳಿಸಿದ ಗ್ರಾಮಲೆಕ್ಕಿಗರು ಮತ್ತು ರಾಜಸ್ವನಿರೀಕ್ಷರನ್ನು ಅಮಾನತುಪಡಿಸಬೇಕು. ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಸವರ್ಣೀಯರ ಮೇಲೆ ದೌರ್ಜನ್ಯಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ದಲಿತ ಸಂಘರ್ಷ ಸಮಿತಿ ಮುಖಂಡ ಮರ್ಲೆ ಅಣ್ಣಯ್ಯ ಒತ್ತಾಯಿಸಿದರು.

ಸುದ್ದಿಗೋಷ್ಟಿಯಲ್ಲಿ ಬುಧವಾರ ಮಾತನಾಡಿ, ಏ ೧೪ರಂದು ಬೆಳಿಗ್ಗೆ ಪರಿಶಿಷ್ಟರು ಅಂಬೇಡ್ಕರ್ ಜಯಂತಿ ಆಚರಿಸಲು ಕಂದಾಯ ಇಲಾಖೆಗೆ ಸೇರಿದ ಖಾಲಿಜಾಗದಲ್ಲಿ ಮುಂದಾದಾಗ ಸವರ್ಣೀಯರು ಮಹಿಳೆಯರನ್ನು ಮುಂದೆ ಬಿಟ್ಟು ಜಯಂತಿ ಆಚರಿಸಲು ಅಡ್ಡಿಪಡಿಸಿದ್ದಾರೆಂದು ದೂರಿದರು.

ಕೆಲವು ಸವರ್ಣಿಯರು ಅಂಬೇಡ್ಕರ್ ಭಾವಚಿತ್ರಕ್ಕೆ ಬೆಂಕಿ ಹಚ್ಚಲು ಪ್ರಚೋದಿಸಿದ್ದಾರೆ. ಪರಿಶಿಷ್ಟರಿಗೆ ಬಹಿಷ್ಕಾರ ಹಾಕಬೇಕು. ಊರಿನಿಂದ ಹೊರಹಾಕಬೇಕೆಂದು ನಿಂದಿಸಿದ್ದಾರೆ. ಅಂಬೇಡ್ಕರ್ ಭಾವಚಿತ್ರಕ್ಕೆ ಹಾನಿಪಡಿಸಿದ್ದಾರೆ, ನೀಲಿಬಾವುಟವನ್ನು ಕಿತ್ತುಹಾಕಿದ್ದಾರೆ. ದೀಪದ ಕಂಬವನ್ನು ಬಿಸಾಕಿದ್ದಾರೆಂದು ಆರೋಪಿಸಿದರು.

ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿಗಳು ತಹಸೀಲ್ದಾರ್ ಅವರನ್ನು ಸ್ಥಳಕ್ಕೆ ಕಳುಹಿಸಿ ಜಯಂತಿ ಆಚರಿಸಲು ಅವಕಾಶ ನೀಡಲು ಸೂಚಿಸಿದ್ದಾರೆ. ಅಧಿಕಾರಿ ಸ್ಥಳಕ್ಕೆ ಬಂದಾಗ, ಪೊಲೀಸರು ಇದ್ದರು ಜಯಂತಿ ಆಚರಿಸಲು ಸರ್ವರ್ಣಿಯ ಕೆಲವರು ಅಡ್ಡಿಪಡಿಸಿದ್ದಾರೆ. ಬಳಿಕ ಪೊಲೀಸರು ಜನರನ್ನು ಚದುರಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಹಾರಹಾಕಿ ದೀಪಬೆಳಗಿಸಿದ್ದಾರೆಂದು ತಿಳಿಸಿದರು.

ಗ್ರಾಮದ ವಿದ್ಯಾವಂತ ಯುವಕರನ್ನು ಠಾಣೆಗೆ ಬರುವಂತೆ ದೂರವಾಣಿಯಲ್ಲಿ ಒತ್ತಾಯಿಸುತ್ತಿದ್ದು, ಠಾಣೆ ಮೆಟ್ಟಿಲು ತುಳಿದರೆ ಮುಂದಿನ ವಿದ್ಯಾಭ್ಯಾಸಕ್ಕೆ ಎಲ್ಲಿ ತೊಂದರೆಯಾಗುತ್ತದೆ ಎಂದು ಹೆದರುತ್ತಿದ್ದಾರೆ. ಗ್ರಾಮದಲ್ಲಿ ಶಾಂತಿ ನೆಲಸಲು ಪೊಲೀಸ್ ರಕ್ಷಣೆ ನೀಡಬೇಕೆಂದು ಕೋರಿದರು.

ಮುಖಂಡರಾದ ಟಿ.ಎಲ್.ಗಣೇಶ್, ಭೀಮಯ್ಯ, ರೇವಣ್ಣ,ಗ್ರಾಮಸ್ಥರಾದ ಸಿದ್ದಯ್ಯ,. ಆನಂದ್, ಕುಮಾರ್ ಇದ್ದರು.

Dalit Sangharsh Samiti demands action to disrupt Ambedkar Jayanti

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...