Home namma chikmagalur chikamagalur 5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ
chikamagalurHomeLatest Newsnamma chikmagalur

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

Share
Share

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರು ಪ್ರವೇಶ ಮಾಡಿ ಹೊಸ ಇತಿಹಾಸ ನಿರ್ಮಾಣಕ್ಕೆ ನಾಂದಿ ಹಾಡಿದ್ದಕ್ಕೆ ತಾಲೂಕು ಆಡಳಿತ ಸಾಕ್ಷಿಯಾಯಿತು.

ಈ ಸಂಬಂಧ ಮಂಗಳವಾರ ನಿಡಘಟ್ಟ ಸೇರಿದಂತೆ ಹತ್ತಾರು ಹಳ್ಳಿಗಳಲ್ಲಿ ನೂರಾರು ದಲಿತ ಕುಟುಂಬಗಳು ಇವೆ. ಆದರೆ ಶತಮಾನ ಸಂದಿದ್ದರೂ ಕೂಡ ದಲಿತರಿಗೆ ದೇವಾಲಯ ಪ್ರವೇಶಿಸುವ ಅವಕಾಶ ನೀಡಿಕೆ ಕನಸಾಗಿತ್ತು. ಆದರೆ ಸಮುದಾಯಕ್ಕೆ ಇದ್ದ ನೋವು ಶ್ರೀ ಆಂಜನೇಯಸ್ವಾಮಿ ದೇವಾಲಯ ಪ್ರವೇಶಿಸುವ ಮೂಲಕ ನಿವಾರಣೆ ಆಗುವ ಮೂಲಕ ಕಟ್ಟಳೆ ಮುರಿದು ದೇವಾಲಯ ಪ್ರವೇಶಿಸಿದ ದಲಿತರ ಶತಮಾನದ ಕನಸು ನನಸಾದಂತಾಗಿದೆ.

ನೂರಾರು ದಲಿತರು ತಮ್ಮ ಮುಖಂಡರೊಂದಿಗೆ ನಿಢಘಟ್ಟದ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಮುಂದೆ ಜಮಾಯಿಸಿದ್ದರು. ಕಳೆದ ಒಂದು ತಿಂಗಳ ಹಿಂದೆ ನಿಡಘಟ್ಟ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿರುವ ನೂರಾರು ದಲಿತರಿಗೆ ಪ್ರವೇಶ ನಿರಾಕರಿಸಲಾಗಿತ್ತು. ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಾಲಯಕ್ಕೆ ಪ್ರವೇಶಕ್ಕೆ ಅವಕಾಶ ನೀಡುವಂತೆ ಕೆಲ ದಿನಗಳ ಹಿಂದೆ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು ಎನ್ನಲಾಗಿದೆ.

ಈ ನಿಟ್ಟಲ್ಲಿ ತರೀಕೆರೆ ಡಿವೈಎಸ್ಪಿ. ತಾಲೂಕು ಆಡಳಿತದಿಂದ ತಹಸೀಲ್ದಾರ್ ಸಿ.ಎಸ್. ಪೂರ್ಣಿಮಾ, ತಾಪಂ ಇಒ ಸಿ.ಆರ್.ಪ್ರವೀಣ್, ಕಂದಾಯ ಇಲಾಖೆಯ ಅಧಿಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.

ವೃತ್ತ ನಿರೀಕ್ಷಕ ಎಂ.ರಫೀಕ್, ಸಖರಾಯಪಟ್ಟಣದ ಪಿಎಸೈ ಪವನ್, ಸೇರಿದಂತೆ ಗಲಾಟೆಗೆ ಆಸ್ಪದ ನೀಡದಂತೆ ನೂರಾರು ಪೋಲೀಸರ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿತ್ತು. ಮಂಗಳವಾರ ಬೆಳಿಗ್ಗೆ ತಾಲೂಕು ಆಡಳಿತ ಮತ್ತು ಮೇಲ್ವರ್ಗದ ಸಮುದಾಯಗಳ ಸಮ್ಮುಖದಲ್ಲಿ ನೂರಾರು ದಲಿತರು ದೇವಾಲಯ ಪ್ರವೇಶಿಸಿ ಶ್ರೀ ಸ್ವಾಮಿಯವರಿಗೆ ಪೂಜೆ ಸಲ್ಲಿಸಿ ಸಂತಸ ವ್ಯಕ್ತಪಡಿಸಿದರು.

ದಲಿತ ಮುಖಂಡರಾದ ವೈ.ಟಿ ಗೋವಿಂದಪ್ಪ ರಾಘವೇಂದ್ರ, ಬಾಣೂರು ಸುರೇಶ್, ಕಡೂರಿನ ಪ್ರಮೋದ, ಭಾಣೂರು ನಾಗಣ್ಣ, ವೈಮಲ್ಲಾಪುರದ ತಮ್ಮಯ್ಯ, ಬಾಸೂರು ಪ್ರಸನ್ನ, ಗೋಪಾಲ್, ಜಯಣ್ಣ, ಕೆದಿಗೆರೆ ಚಂದ್ರಪ್ಪ ಮತ್ತಿತರು ಇದ್ದರು.

ಕಳೆದ 20 ದಿನಗಳ ಹಿಂದೆ ದಲಿತ ಮುಖಂಡರು ನಿಡಘಟ್ಟದ ಶ್ರೀ ಆಂಜನೇಯ ಸ್ವಾಮಿ ದೇವಾಲಯ ಪ್ರವೇಶಕ್ಕೆೆ ತಾಲೂಕು ಆಡಳಿತಕ್ಕೆ ಮನವಿ ನೀಡಿದ್ದರು. ಈ ಬಗ್ಗೆ ನಾವು ಪೂರ್ವಬಾವಿ ಸಭೆ ಮಾಡಿಕೊಂಡಿದ್ದೆವು, ಇದಕ್ಕೆ ಮೇಲ್ವರ್ಗದ ಯಾರೂ ಹಸ್ತಕ್ಷೇಪ ಮಾಡಲಿಲ್ಲ. ನೀವುಗಳೇ ಬಂದು ಪ್ರವೇಶಕ್ಕೆ ಅನುವು ಮಾಡಿಕೊಡುವಂತೆ ಕೋರಿದ್ದರು. ಅದರಂತೆ ತಾವು ಹೋಗಿದ್ದು ಸಂವಿಧಾನ ಬದ್ದವಾಗಿ ಎಲ್ಲ ವರ್ಗಗಳು ಸೌಹಾರ್ಧತೆಯಿಂದ ನಡೆದುಕೊಂಡು ಹೋಗುವಂತೆ ತಿಳಿಸಲಾಗಿದೆ.

ಅನೇಕ ವರ್ಷಗಳ ಹೋರಾಟದ ಬಳಿಕ ದಲಿತರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ಸಿಕ್ಕಿದೆ. ನೀವು ಯಾವುದೇ ಗೊಂದಲಕ್ಕೆ ಆಸ್ಪದ ನೀಡದಂತೆ ಪೂಜೆ ಸಲ್ಲಿಸಬಹುದು. ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶವು ನನಸಾಗಿದೆ. ಎಲ್ಲ ವರ್ಗಗಳೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ.

Dalits enter Nidaghatta Anjaneyaswamy Temple after 5 decades

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...