Home namma chikmagalur chikamagalur ಬಡವರಿಗೆ ಆಸರೆಯಾಗಿರುವ ದಂತಭಾಗ್ಯ ಯೋಜನೆ
chikamagalurHomeLatest Newsnamma chikmagalur

ಬಡವರಿಗೆ ಆಸರೆಯಾಗಿರುವ ದಂತಭಾಗ್ಯ ಯೋಜನೆ

Share
Share

ಚಿಕ್ಕಮಗಳೂರು: ಬಡವರಿಗಾಗಿ ೨೦೧೬ ರಲ್ಲಿ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ದಂತಭಾಗ್ಯ ಯೋಜನೆ ಇಂದು ಅನೇಕ ಬಡವರಿಗೆ ಆಸರೆಯಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾಸ್ಪತ್ರೆ, ನಿಟ್ಟೆ ಎ.ಬಿ. ಶೆಟ್ಟಿ ಡೆಂಟಲ್ ಕಾಲೇಜು ಆಶ್ರಯದಲ್ಲಿ ಭಾನುವಾರ ಏರ್ಪಡಿಸಿದ್ದ ಉಚಿತ ದಂತಜೋಡಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ೬೦ ವರ್ಷ ಮೇಲ್ಪಟ್ಟ ವಯೊಮಾನದವರಿಗೆ ೨೦೧೬ ರಲ್ಲಿ ಸಿದ್ರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ದಂತಭಾಗ್ಯ ಯೋಜನೆ ತಂದಿದ್ದಾರೆ.

ಬಿಪಿಎಲ್ ಕಾರ್ಡ್ ಹೊಂದಿರುವ ೬೦ ವರ್ಷ ಮೇಲ್ಪಟ್ಟವರು ಈ ಯೋಜನೆ ಲಾಭ ಪಡೆಯಬಹುದಿತ್ತು. ಈಗ ವಯೋಮಾನದ ಮಿತಿಯನ್ನು ೪೫ ವರ್ಷಕ್ಕೆ ಇಳಿಸಿದ್ದು ಇದರಿಂದ ಸಾಕಷ್ಟು ಬಡವರಿಗೆ ಅನುಕೂಲ ಆಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ದಂತ ಜೋಡಣೆಗೆ ೬೦-೭೦ ಸಾವಿರ ರೂ. ಪಾವತಿಸಬೇಕು. ಇಲ್ಲಿ ಉಚಿತವಾಗಿ ಸೌಲಭ್ಯ ನೀಡುತ್ತಿದ್ದು ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿದರು.

ಜಿಲ್ಲಾಸ್ಪತ್ರೆ ದಂತ ರೋಗ ವೈದ್ಯಾಕಾರಿ ಡಾ.ಪ್ರೇಂಕುಮಾರ್ ಪ್ರಾಸ್ತಾವಿಕ ಮಾತನಾಡಿ, ಉಚಿತ ಕೃತಕ ದಂತಪಂಕ್ತಿ ಜೋಡನಾ ಶಿಬಿರವನ್ನು ಕರ್ನಾಟಕ ಸರಕಾರ ದಂತಭಾಗ್ಯ ಯೋಜನೆ ಹೆಸರಲ್ಲಿ ಜಾರಿಗೆ ತಂದಿದೆ. ೩ ಹಲ್ಲುಗಳಿಗಿಂತ ಹೆಚ್ಚು ಹಲ್ಲುಗಳು ಹೋಗಿದ್ದರೆ ಅಂತವರು ಈ ಯೋಜನೆ ಲಾಭ ಪಡೆಯಬಹುದು ಎಂದು ಹೇಳಿದರು.

ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ, ಹಲ್ಲುಗಳ ಜೋಡಣೆ ಹಾಕಿಸಿಕೊಳ್ಳಲು ಬಡಜನರಿಗೆ ಹೆಚ್ಚು ಹಣ ವ್ಯಯಿಸಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ದಂತಭಾಗ್ಯ ಯೋಜನೆ ಮೂಲಕ ಹಲ್ಲುಸೆಟ್ಟು ಕಟ್ಟಿಸಿಕೊಳ್ಳಲು ಅನುಕೂಲ ಕಲ್ಪಿಸಿರುವುದು ತುಂಬಾ ಜನರಿಗೆ ಪ್ರಯೋಜನವಾಗಲಿದೆ ಎಂದು ಹೇಳಿದರು.

ಜಿಲ್ಲಾಸರ್ಜನ್ ಡಾ. ಚಂದ್ರಶೇಖರ್ ಸ್ವಾಗತಿಸಿದರು. ಡಿಎಚ್‌ಒ ಡಾ.ಅಶ್ವತ್‌ಬಾಬು, ಡಿಎಸ್-೨ ಚಂದ್ರಶೇಖರಸಾಲಿಮಠ, ನಿಟ್ಟೆ ಎ.ಬಿ.ಶೆಟ್ಟಿ ಡೆಂಟಲ್ ಕಾಲೇಜಿನ ಡಾ.ಚೇತನ ಹೆಗ್ಡೆ, ವಿವಿಧ ತಾಲೂಕಿನಿಂದ ಆಗಮಿಸಿದ್ದ ದಂತವೈದ್ಯರು, ಅಧಕಾರಿ ಸಿಬ್ಬಂದಿ ಕಾರ್ಯಕ್ರಮದಲ್ಲಿದ್ದರು.

Danthabhagya Yojana a support for the poor

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...