Home namma chikmagalur ಅಮಾಯಕ ಬಾಲಕನ ಸಾವಿನ ತನಿಖೆಗೆ ಆಗ್ರಹಿಸಿ ದಸಂಸ ಪ್ರತಿಭಟನೆ
namma chikmagalurchikamagalurHomeLatest News

ಅಮಾಯಕ ಬಾಲಕನ ಸಾವಿನ ತನಿಖೆಗೆ ಆಗ್ರಹಿಸಿ ದಸಂಸ ಪ್ರತಿಭಟನೆ

Share
????????????????????????????????????
Share

ಚಿಕ್ಕಮಗಳೂರು: ಬಾನಳ್ಳಿ ಬಗ್ಗಸಗೋಡು ಗ್ರಾಮದ ಪ್ರೀತಂ ಸಾವಿನ ತನಿಖೆಯನ್ನು ನ್ಯಾಯಾಂಗಕ್ಕೆ ಒಳಪಡಿಸಿ ಕುಟುಂಬಸ್ಥರಿಗೆ ಸೂಕ್ತ ನ್ಯಾಯ ಒದಗಿಸಿಕೊಡಬೇಕು ಎಂದು ದಸಂಸ ಮುಖಂಡ ರುಗಳು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ದಸಂಸ ರಾಜ್ಯ ಸಮಿತಿ ಸದಸ್ಯ ಮರ್ಲೆ ಅಣ್ಣಯ್ಯ ಮಾತನಾಡಿ ಮೂಡಿಗೆರೆ ತಾಲ್ಲೂಕಿನ ಬಾ ನಳ್ಳಿ ಬಗ್ಗಸಗೋಡು ಗ್ರಾಮದ ಪ.ಜಾತಿ ಜನಾಂಗದ ಶಿವಣ್ಣ ಎಂಬುವವರ ಪುತ್ರ ಪ್ರೀತಂ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಆದರೆ ಕಳೆದ ೧೫ ದಿನಗಳಿಂದ ಶಾಲೆಗೆ ಗೈರಾಗಿದ್ದು ಮನಗಂಡ ಪಾಲಕರು ತೀವ್ರ ಗಾಬರಿಗೊಂಡಿದ್ದಾರೆ ಎಂದರು.

ಪ್ರೀತಂ ಎಂಬ ಬಾಲಕನನ್ನು ಭಾರತಿ ಬೈಲ್ ಗ್ರಾಮದ ವ್ಯಕ್ತಿಯೊರ್ವರು, ಪಾಲಕರು ಇಲ್ಲದ ಸಮಯ ದಲ್ಲಿ ಬಲವಂತವಾಗಿ ಟಿಂಬರ್ ಕೆಲಸಕ್ಕೆ ಕರೆದೊಯ್ದುದಿದ್ದಾರೆ. ಕೆಲಗಂಟೆ ನಂತರ ಮನೆಗೆ ಹಿಂತಿರುಗಿದಾಗ ಶಿವಣ್ಣ, ಕೆಲಸದಾಳಿನ ಮೂಲಕ ಪ್ರೀತಂ ತಲೆಸುತ್ತಿ ಬಿದ್ದಿರುವುದಾಗಿ ತಿಳಿಸಿದ್ದು ಕೂಡಲೇ ತೆರಳಿದಾಗ ಬಿದ್ದಿ ರುವ ಜಾಗ ಬದಲಿಸಿ, ಬೇರೆ ಸಮತಟ್ಟಾದ ಜಾಗದಲ್ಲಿ ಪ್ರೀತಂನನ್ನು ಇರಿಸಿದ್ದಾರೆ ಎಂದು ಹೇಳಿದರು.

ಗಾಬರಿಗೊಂಡ ಪಾಲಕರು ಶೀಘ್ರವೇ ಮೂಡಿಗೆರೆ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು, ವೈದ್ಯರು ಪರೀಕ್ಷಿಸಿದಾಗ ಮೃತರಾಗಿದ್ದಾರೆ ಎಂದು ದೃಢಪಡಿಸಿದ್ದಾರೆ. ಈ ವಿಚಾರ ತಿಳಿದ ಭಾರತಿ ಬೈಲ್ ಗ್ರಾಮದ ವ್ಯಕ್ತಿ ಶಿವಣ್ಣ ಎಂಬುವವರನ್ನು ಬಲವಂತದಿಂದ ಬಣಕಲ್ ಪೊಲೀಸ್ ಠಾಣೆಗೆ ಕರೆದುಕೊಂಡು ಅವರೇ ಹೇಳಿಕೆ ಯಂತೆ ಪ್ರಕರಣ ದಾಖಲಿಸಿದ್ದಾರೆ ಎಂದರು.

ಪ್ರೀತಂ ಸಾವು ಹೆಚ್ಚು ಭಾರ ಹೊರೆಸಿದ ಕಾರಣ ಕುಸಿದು ಬಿದ್ದಿರುವ ಸಾಧ್ಯತೆಯಿದೆ. ಹಾಗೂ ಬಾಲ ಅಪರಾಧ ಕಾಯ್ದೆಯ ನಿಯಮದಂತೆ ಮಕ್ಕಳನ್ನು ಯಾವುದೇ ಕೆಲಸಕ್ಕೆ ಕರೆದುಕೊಂಡು ಹೋಗುವಂತಿಲ್ಲ. ಇದು ಪೊಲೀಸ್ ಇಲಾಖೆಗೆ ತಿಳಿದಿದ್ದರೂ ಸಹ ಪ್ರೀತಂ ಬಾಲಕ ಸಾವನ್ನು ಮುಚ್ಚಿ ಹಾಕಲಾಗಿದೆ ಎಂದು ದೂರಿದರು.

ಈ ಪ್ರಕರಣದ ಸಂಬಂಧ ಶಿವಣ್ಣ ಎಂಬುವವರು ಅನೇಕ ತಿಂಗಳು ಕಾಲ ಪೊಲೀಸ್ ಇಲಾಖೆಗೆ ತೆರ ಳಿದರೂ ನ್ಯಾಯ ದೊರಕಿಲ್ಲ. ಅಲ್ಲದೇ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ನೇರ ಗಮನಕ್ಕೆ ತಂದರೂ ಯಾವುದೇ ರೀತಿ ಕ್ರಮ ಕೈಗೊಂಡಿರುವುದಿಲ್ಲ ಎಂದರು.

ಕೂಡಲೇ ಪ್ರೀತಂ ಸಾವಿನ ತನಿಖೆಯನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ ಕುಟುಂಬಸ್ಥರ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮಂ ಜಯ್ಯ, ಮುಖಂಡರುಗಳಾದ ಸಂತೋಷ್ ಲಕ್ಯಾ, ಮಂಜುನಾಥ್ ನಂಬಿಯಾರ್, ವಿರೂಪಾಕ್ಷ, ರಾಕೇಶ್, ಪುಟ್ಟರಾಜು, ಪೂರ್ಣೇಶ್, ಮೃತನ ಕುಟುಂಬಸ್ಥರಾದ ಶಿವಣ್ಣ, ಪ್ರೀತಿ ಹಾಜರಿದ್ದರು.

Dasamsa protests against investigation into death of innocent boy

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...