Home Latest News ದತ್ತಮಾಲಾಧಾರಿಗಳಿಂದ ಭಿಕ್ಷಾಟನೆ : ಮನೆ ಮನೆಗೆ ತೆರಳಿ ಪಡಿ ಸಂಗ್ರಹ
Latest News

ದತ್ತಮಾಲಾಧಾರಿಗಳಿಂದ ಭಿಕ್ಷಾಟನೆ : ಮನೆ ಮನೆಗೆ ತೆರಳಿ ಪಡಿ ಸಂಗ್ರಹ

Share
Share

ಚಿಕ್ಕಮಗಳೂರು : ದತ್ತಮಾಲಾ ಅಭಿಯಾನದ ಹಿನ್ನೆಲೆ ಶ್ರೀರಾಮಸೇನೆ ಕಾರ್ಯಕರ್ತರು ನಗರದ ವಿವಿಧ ಬಡಾವಣೆಗಳಲ್ಲಿ ಮನೆಮನೆಗೆ ತೆರಳಿ ಪಡಿ ಸಂಗ್ರಹ ಮಾಡಿದರು. ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ನೇತೃತ್ವದಲ್ಲಿ ಮನೆಗಳಿಗೆ ತೆರಳಿ ದವಸ-ಧಾನ್ಯ, ತೆಂಗಿನಕಾಯಿ, ಅಕ್ಕಿ-ಬೆಲ್ಲ ಮುಂತಾದ ವಸ್ತುಗಳನ್ನ ಪಡಿ ಸಂಗ್ರಹದ ರೂಪದಲ್ಲಿ ಸಂಗ್ರಹಿದ್ದಾರೆ. ದತ್ತಮಾಲೆ ಧರಿಸಿದ್ದ 30ಕ್ಕೂ ಹೆಚ್ಚು ಶ್ರೀರಾಮಸೇನೆ ಕಾರ್ಯಕರ್ತರು ರಾಜ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಅವರ ನೇತೃತ್ವದಲ್ಲಿ ವಿಜಯಪುರ ರಸ್ತೆ, ಕೋಟೆ ಬಡಾವಣೆ, ಬಸವನಹಳ್ಳಿಯ ಹತ್ತಾರು ಮನೆಗಳಲ್ಲಿ ಪಡಿ ಸಂಗ್ರಹಿಸಿದರು.

ದತ್ತಮಾಲಾ ಅಭಿಯಾನದ ಹಿನ್ನೆಲೆ ಕನಿಷ್ಟ 5 ಮನೆಗಳಲ್ಲಾದರೂ ಪಡಿ ಸಂಗ್ರಹ ಮಾಡುವುದು ಹಿಂದಿನಿಂದ ನಡೆದುಕೊಂಡು ಬಂದಿರುವ ಪದ್ಧತಿ. ಈ ಬಾರಿಯೂ ಮಾಲಾಧಾರಿಗಳು ಹತ್ತಾರು ಮನೆಗಳಿಗೆ ಹೋಗಿ ಪಡಿ ಸಂಗ್ರಹಿಸಿದರು. ಪಡಿ ಸಂಗ್ರಹದ ವೇಳೆ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಗುರುಗಳಿಗೆ ಪ್ರಿಯವಾದ ಪಡಿ ಸಂಗ್ರಹಣೆಯನ್ನು ಇಂದು ಮಾಡುತ್ತಿದ್ದೇವೆ. ದತ್ತಮಾಲೆ ಧಾರಣೆ ಮಾಡಿದ ಬಳಿಕ ಭಿಕ್ಷಾಟನೆ ಮಾಡಿ, ಪಡಿ ಸಂಗ್ರಹಿಸಿದಾಗ ನಮ್ಮ ಮನಸ್ಸಿನಲ್ಲಿರುವ ಲೋಭ, ಅಹಂಕಾರವೆಲ್ಲವೂ ನಿವಾರಣೆಯಾಗುತ್ತದೆ ಎಂಬುದು ಗುರುಗಳ ಅಭಿಪ್ರಾಯ. ಹೀಗಾಗಿ ನಾವೂ ದತ್ತಮಾಲೆ ಧರಿಸಿ, ಪಡಿ ಸಂಗ್ರಹಣೆ ಮಾಡಿದ್ದೇವೆ ಎಂದರು.

ಕೇವಲ ಚಿಕ್ಕಮಗಳೂರು ಮಾತ್ರವಲ್ಲದೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಶ್ರೀರಾಮ ಸೇನೆ ಕಾರ್ಯಕರ್ತರು ಪಡಿ ಸಂಗ್ರಹಣೆ ಮಾಡಿದ್ದಾರೆ. ನಾಳೆ ದತ್ತಪೀಠದಲ್ಲಿ ವಿಶೇಷ ಹೋಮ-ಹವನ ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ವಿವಿಧ ಭಾಗಗಳಿಂದ ಶ್ರೀರಾಮಸೇನೆ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದರು. ನಾಳೆ ಸಾವಿರಾರು ದತ್ತಮಾಲಾಧಾರಿಗಳು ನಗರದಲ್ಲಿ ಬೃಹತ್ ಶೋಭಾಯಾತ್ರೆ, ಧರ್ಮಸಭೆ ನಡೆಸಿ ಇರುಮುಡಿ ಹೊತ್ತು ದತ್ತಾತ್ರೇಯ ಹಾಗೂ ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ. ದಾಖಲೆಗಳ ಪ್ರಕಾರ ದತ್ತಪೀಠ ಹಿಂದೂ ಪೀಠವೇ ಆಗಿದೆ. ದತ್ತಪೀಠವೇ ಬೇರೆ, ದರ್ಗಾವೇ ಬೇರೆ. ಶೀಘ್ರವೇ ದತ್ತಪೀಠವನ್ನು ಹಿಂದುಗಳ ಪೀಠವೆಂದು ಘೋಷಿಸಬೇಕೆಂದು ಮಾಲಾಧಾರಿಗಳು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಕಳೆದ ಏಳು ದಿನಗಳಿಂದ ನಡೆಯುತ್ತಿರೋ ದತ್ತಮಾಲಾ ಅಭಿಯಾನಕ್ಕೆ ನಾಳೆ ಅಂತಿಮ ತೆರೆ ಬೀಳಲಿದೆ. ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಚಿಕ್ಕಮಗಳೂರು ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಶೋಭಾಯಾತ್ರೆ ನಡೆಸಿ ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....