Home Latest News ದತ್ತಪೀಠದ ಅರ್ಚಕ ರಾಜೀನಾಮೆ : ಕಾರಣವೇನು ಗೊತ್ತಾ ?
Latest News

ದತ್ತಪೀಠದ ಅರ್ಚಕ ರಾಜೀನಾಮೆ : ಕಾರಣವೇನು ಗೊತ್ತಾ ?

Share
Share

ಚಿಕ್ಕಮಗಳೂರು : ವಿವಾದಿತ ಇನಾಮ್ ದತ್ತಾತ್ರೇಯ ಪೀಠಕ್ಕೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕ ಮಾಡಿದ್ದ ಇಬ್ಬರು ಅರ್ಚಕರಲ್ಲಿ ಶೃಂಗೇರಿಯ ಶ್ರೀಧರ್ ರಾಜೀನಾಮೆ ನೀಡಿದ್ದಾರೆ. ವಯಕ್ತಿಕ ಕಾರಣಗಳನ್ನ ಕೊಟ್ಟು ಮುಜರಾಯಿ ಇಲಾಖೆಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಸದ್ಯ ದತ್ತಪೀಠದಲ್ಲಿ ತೀರ್ಥಹಳ್ಳಿ ಮೂಲದ ಶಿವರಾಮ್ ಭಟ್ ಕಾರ್ಯ ನಿರ್ವಹಿಸಿತ್ತಿದ್ದಾರೆ. ಅವರ ಜೊತೆಗೆ ಬಿಸಗ್ನಿ ಮಠದ ಮಹೇಶ್ ಅರ್ಚಕರಾಗಿ ನೇಮಿಸಲಾಗಿದೆ.

ಹೈಕೋರ್ಟ್ ನಿರ್ದೇಶನದಂತೆ ಈ ಹಿಂದೆ ಇಬ್ಬರು ಅರ್ಚಕರನ್ನು ನೇಮಿಸಲಾಗಿತ್ತು ಆದರೆ ವರ್ಷ ಕಳೆದರೂ ಸರಿಯಾಗಿ ದಸ್ತಕ್ ಅಂದರೆ ಗೌರವಧನ ಸರಿಯಾಗಿ ನೀಡುತ್ತಿಲ್ಲ ಎಂಬ ಆರೋಪ ಕೂಡ ಇತ್ತು. ಈ ಮಧ್ಯೆ ಅರ್ಚಕರಾದ ಶ್ರೀಧರ್ ತಮ್ಮ ಕೆಲಸದಿಂದ ನಿರ್ಗಮನ ಹೊಂದಿದ್ದಾರೆ. ಕೌಟುಂಬಿಕ ಕಾರಣಗಳನ್ನು ನೀಡಿ ರಾಜೀನಾಮೆ ನೀಡಿದ್ದರೂ ಕೂಡಾ ರಾಜ್ಯ ಸರ್ಕಾರ ಮುಜರಾಯಿ ಇಲಾಖೆ ಅವರನ್ನು ನಡೆಸಿಕೊಂಡ ರೀತಿಯ ಬಗ್ಗೆ ಸಾಕಷ್ಟು ಬೇಸರ ವ್ಯಕ್ತಪಡಿಸುತ್ತಿದ್ರು ಇದೀಗ ದತ್ತಗುಹೆಯಲ್ಲಿ ಕುಂಕುಮ ಹಚ್ಚಿದ ಪ್ರಕರಣ ಹಸಿಯಾಗಿರುವ ನಡುವೆ ಅರ್ಚಕರ ಬದಲಾವಣೆ ದತ್ತ ಭಕ್ತರಲ್ಲಿ ಗೊಂದಲ ಹಾಗೂ ಬೇಸರ ಮೂಡಿರುವುದು ಮಾತ್ರ ಸುಳ್ಳಲ್ಲ

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...