Home Crime News ಅತ್ತೆ ಕೊಲೆ ಪ್ರಕರಣದ ಆರೋಪಿ ಸೊಸೆ – ಪ್ರಿಯಕರನ ಬಂಧನ
Crime NewsajjampuraHomeLatest Newsnamma chikmagalur

ಅತ್ತೆ ಕೊಲೆ ಪ್ರಕರಣದ ಆರೋಪಿ ಸೊಸೆ – ಪ್ರಿಯಕರನ ಬಂಧನ

Share
Share

ಅಜ್ಜಂಪುರ: ಅತ್ತೆಗೆ ನಿದ್ರೆ ಮಾತ್ರೆ ಹಾಕಿ ಕೊಲೆ ಮಾಡಿದ್ದ ಆರೋಪಿ ಸೊಸೆ ಹಾಗೂ ಆಕೆಯ ಪ್ರಿಯಕರನನ್ನು ಅಜ್ಜಂಪುರ ಪಟ್ಟಣ ಪೊಲೀಸರು ಮಂಗಳವಾರ ಬಂಧಿಸಿದ್ದು, ಆರೋಪಿಗಳಿಂದ ₹36 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಟೆಂಪೊ ಟ್ರಾವಲರ್‌, ಬೈಕ್‌ ವಶಕ್ಕೆ ಪಡೆದಿದ್ದಾರೆ.

ತಾಲ್ಲೂಕಿನ ತಡಗ ಗ್ರಾಮದ ದೇವಿರಮ್ಮ ಕೊಲೆಯಾದವರು. ಅವರ ಸೊಸೆ ಅಶ್ವಿನಿ (34), ಆಕೆಯ ಪ್ರಿಯಕರ ಶಿವನಿ ಗ್ರಾಮದ ಆಂಜನೇಯ ಎಸ್‌.ಎಸ್‌. (30) ಆರೋಪಿಗಳು. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸೊಸೆ ಅಶ್ವಿನಿ ಮತ್ತು ಆಂಜನೇಯ ನಡುವೆ ಅಕ್ರಮ ಸಂಬಂಧವಿತ್ತು. ಇದನ್ನೇ ದುರುಪಯೋಗಪಡಿಸಿಕೊಂಡ ಆಂಜನೇಯ, ಅಶ್ವಿನಿಯಿಂದ ದೇವಿರಮ್ಮ ಅವರಿಗೆ ಸೇರಿದ್ದ ಚಿನ್ನಾಭರಣವನ್ನು ಪಡೆದುಕೊಂಡಿದ್ದ. ಅಶ್ವಿನಿ, ನಕಲಿ ಕೀ ಬಳಸಿ, ಚಿನ್ನಾಭರಣ ತೆಗೆದುಕೊಂಡಿದ್ದರು. ಇದು ಅತ್ತೆ ದೇವಿರಮ್ಮಗೆ ಗೊತ್ತಾಗುತ್ತದೆ ಎಂದು ಭಾವಿಸಿ ಕೊಲೆಗೆ ಸಂಚು ರೂಪಿಸಿ ಆಗಸ್ಟ್ 10ರಂದು ದೇವಿರಮ್ಮ ಅವರಿಗೆ ಊಟದಲ್ಲಿ 20 ನಿದ್ರೆ ಮಾತ್ರೆ ಹಾಕಿದ್ದರು.

ಊಟದ ಬಳಿಕ ದೇವಿರಮ್ಮ ಅವರು ಸುಸ್ತಾದರೂ ಆಸ್ಪತ್ರೆಗೆ ದಾಖಲಿಸಲು ತಡ ಮಾಡಿದ್ದರಿಂದ ಸಕಾಲದಲ್ಲಿ ಚಿಕಿತ್ಸೆ ದೊರೆಯದೆ ಮೃತಪಟ್ಟಿದ್ದರು. ವಿಷಯ ಮರೆಮಾಚಿ ಆ.11ರಂದು ಸಂಬಂಧಿಕರು ಮತ್ತು ಗ್ರಾಮಸ್ಥರ ಸಮ್ಮುಖದಲ್ಲಿ ಅಂತ್ಯಸಂಸ್ಕಾರವನ್ನೂ ಮಾಡಿದ್ದರು. ಈ ಬಗ್ಗೆ ಅನುಮಾನಗೊಂಡ ಮೃತರ ಪುತ್ರಿ ವೀಣಾ ಅವರು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ಭೇದಿಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿ, ₹20.34 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಚಿನ್ನಾಭರಣ ಅಡವಿಟ್ಟು ಖರೀದಿಸಿದ ₹16 ಲಕ್ಷ ಮೌಲ್ಯದ ಟೆಂಪೊ ಟ್ರಾವೆಲರ್ ಮತ್ತು ಬಜಾಜ್ ಪಲ್ಸರ್ ಬೈಕ್ ಅನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸ್ ಇನ್‌ಸ್ಪೆಕ್ಟರ್ ವೀರೇಂದ್ರ, ಪಿಎಸ್ಐ ಗಜೇಂದ್ರ, ಚಂದ್ರಮ್ಮ ಹಾಗೂ ಸಿಬ್ಬಂದಿ ಪ್ರಕರಣ ಭೇದಿಸಿದ್ದಾರೆ. ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾದ ಪೊಲೀಸರಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಕ್ರಮ ಅಮಟೆ ಅವರು ಬಹುಮಾನ ಘೋಷಿಸಿದ್ದಾರೆ.

Daughter-in-law and boyfriend arrested in mother-in-law murder case

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...