Home Latest News ದತ್ತ ಜಯಂತಿ ಹಿನ್ನೆಲೆ ಡಿ.ಸಿ ಎಸ್ಪಿ ಸ್ಥಳ ಪರಿಶೀಲನೆ
Latest News

ದತ್ತ ಜಯಂತಿ ಹಿನ್ನೆಲೆ ಡಿ.ಸಿ ಎಸ್ಪಿ ಸ್ಥಳ ಪರಿಶೀಲನೆ

Share
Share

ಚಿಕ್ಕಮಗಳೂರು : ಕಾಫಿನಾಡ ವಿವಾದಿತ ದತ್ತಪೀಠದಲ್ಲಿ ದತ್ತ ಜಯಂತಿ ಹಿನ್ನೆಲೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹಾಗೂ ಎಸ್ಪಿ ವಿಕ್ರಂ ಅಮಟೆ ದತ್ತಪೀಠ ಮಾರ್ಗದ ಚೆಕ್ ಪೋಸ್ಟ್, ಕಿರಿದಾದ ರಸ್ತೆ, ಅಪಾಯದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ನಗರದ ಅಲ್ಲಂಪುರದಿಂದ ದತ್ತಪೀಠವರೆಗಿನ ಸುಮಾರು 30 ಕಿ.ಮೀ. ದೂರವನ್ನ ಪರಿಶೀಲನೆ ನಡೆಸಿದ್ದಾರೆ.

ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ದತ್ತಪೀಠದ ಮಾರ್ಗ ಹಾವುಬಳುಕಿನ ಮೈಕಟ್ಟಿನ ರಸ್ತೆಯಾಗಿದೆ. ಈ ವರ್ಷದ ನಿರಂತರ ಮಳೆಯಿಂದ ಮಾರ್ಗ ಮಧ್ಯೆ ಅಲ್ಲಲ್ಲೇ ಭೂ ಕುಸಿತ ಹಾಗೂ ಗುಡ್ಡ ಕುಸಿತ ಕೂಡ ಸಂಭವಿಸಿದೆ. ಕೆಲವೆಡೆ ಸಿಂಗಲ್ ರೋಡ್ ರೀತಿಯಂತಹಾ ಮಾರ್ಗವೂ ಇರೋದ್ರಿಂದ ಟ್ರಾಫಿಕ್ ಜಾಮ್ ಉಂಡಾಗದಂತೆ, ಭಕ್ತರ ಹಿತದೃಷ್ಟಿಯಿಂದ ಬಂದೋಬಸ್ತ್ ಮಾಡುವ ನಿಟ್ಟಿನಲ್ಲಿ ಪರಿಶೀಲನೆ ನಡೆಸಿದ್ದಾರೆ. ದತ್ತಪೀಠದಲ್ಲೂ ಪಾರ್ಕಿಂಗ್ ವ್ಯವಸ್ಥೆಯನ್ನ ಪರಿಶೀಲನೆ ನಡೆಸಿದ್ದು ಟ್ರಾಫಿಕ್ ಜಾಮ್ ಉಂಟಾಗದಂತೆ ಕ್ರಮಕೈಗೊಂಡಿದ್ದಾರೆ. ದತ್ತಜಯಂತಿಯ ಕೊನೆ ದಿನವಾದ 14ರಂದು ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಗಾಡಿಗಳಲ್ಲಿ ಬರುವ ಸುಮಾರು 20 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಂಪೂರ್ಣ ಬಂದೋಬಸ್ತ್ ಕಲ್ಪಿಸಿದೆ. ಜೊತೆಗೆ, ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಿರುವ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ 4500ಕ್ಕೂ ಅಧಿಕ ಪೊಲೀಸರು ದತ್ತಪೀಠ ಹಾಗೂ ಜಿಲ್ಲಾದ್ಯಂತ ಹದ್ದಿನ ಕಣ್ಣಿಟ್ಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...