Home namma chikmagalur chikamagalur ಒಂದೇ ದಿನ ಅಧಿಕಾರ ಸ್ವೀಕರಿಸಿದ ಡಿಸಿ-ಎಸ್‌ಪಿ
chikamagalurHomeLatest Newsnamma chikmagalur

ಒಂದೇ ದಿನ ಅಧಿಕಾರ ಸ್ವೀಕರಿಸಿದ ಡಿಸಿ-ಎಸ್‌ಪಿ

Share
Share

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಡಿಸಿಯಾಗಿದ್ದ ಸಿ.ಎನ್.ಮೀನಾ ನಾಗರಾಜ್ ಅವರು ವರ್ಗಾವಣೆಯಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಡಿಸಿ ಹುದ್ದೆಗೆ ನಿಯುಕ್ತರಾದ ಎಂ.ಎನ್.ನಾಗರಾಜ್ ಅವರು ಗುರುವಾರ ಸಂಜೆ ಮೀನಾ ನಾಗರಾಜ್ ಅವರಿಂದ ಅಧಿಕಾರ ಸ್ವೀಕರಿಸಿದರು. ಇನ್ನು ಎಸ್‌ಪಿ ವಿಕ್ರಮ ಅಮಟೆ ಅವರ ವರ್ಗಾವಣೆಯಿಂದ ತೆರವಾಗಿದ್ದ ಚಿಕ್ಕಮಗಳೂರು ಎಸ್‌ಪಿಯಾಗಿ ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅಧಿಕಾರ ವಹಿಸಿಕೊಂಡರು.

ಕಾಫಿನಾಡು ಚಿಕ್ಕಮಗಳೂರು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಡಿಸಿ, ಎಸ್‌ಪಿ ಇಬ್ಬರು ಒಂದೇ ದಿನ ವರ್ಗಾವಣೆಯಾಗಿದ್ದಲ್ಲದೆ ಒಂದೇ ದಿನ ನೂತನ ಡಿಸಿ ಹಾಗೂ ಎಸ್‌ಪಿ ಅಧಿಕಾರ ವಹಿಸಿಕೊಂಡಿದ್ದು ಹಾಗೂ ಅದೂ ವರ್ಷದ ಮೊದಲ ದಿನವೇ ಆಗಿದ್ದು ವಿಶೇಷವಾಗಿತ್ತು.

ನಿಕಟಪೂರ್ವ ಎಸ್‌ಪಿ ವಿಕ್ರಮ ಅಮಟೆ ಅವರು ಮಧ್ಯಾಹ್ಮ ೧೨ ಗಂಟೆ ಒಳಗಾಗಿ ಚಿಕ್ಕಮಗಳೂರಿನ ಎಸ್‌ಪಿ ನಿವಾಸವನ್ನು ತೊರೆದು ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಚಿಕ್ಕಮಗಳೂರು ನೂತನ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಅವರು ಬರುವುದು ತಡವಾಗಲಿದೆ ಎಂಬ ಕಾರಣದಿಂದಾಗಿ ವಿಕ್ರಮ ಅಮಟೆ ಅವರು ಚಿಕ್ಕಮಗಳೂರಿನಿಂದ ನಿರ್ಗಮಿಸಿದರು.

ಚಿಕ್ಕಮಗಳೂರಿನಿಂದ ವಿಕ್ರಮ ಅಮಟೆ ವರ್ಗಾವಣೆಯಾಗಿದೆ ಎಂಬುದು ತಿಳಿಯುತ್ತಿದ್ದಂತೆ ನೂರಾರು ಜನ ಎಸ್‌ಪಿ ನಿವಾಸದ ಎದುರು ಜಮಾಯಿಸಿದ್ದರು. ಜೊತೆಗೆ ಚಿಕ್ಕಮಗಳೂರಿನಲ್ಲಿ ಮಾಡಿದ ಕೆಲಸದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿ ಭಾವನಾತ್ಮಕವಾಗಿ ಬೀಳ್ಕೋಡುಗೆ ನೀಡಿದರು.

ಇನ್ನು ಚಿಕ್ಕಮಗಳೂರು ಎಸ್‌ಪಿಯಾಗಿ ಮಧ್ಯಾಹ್ನ ಅಧಿಕಾರ ಸ್ವೀಕರಿಸಿದ ಜಿತೇಂದ್ರ ಕುಮಾರ್ ದಯಾಮ ಅವರು ಅಧಿಕಾರಿಗಳ ಬಳಿ ಜಿಲ್ಲೆಯ ಸಮಗ್ರ ಮಾಹಿತಿ ಪಡೆದರು. ಜಿತೇಂದ್ರ ಕುಮಾರ್ ದಯಾಮ ಅವರು ಚಿಕ್ಕಮಗಳೂರಿನಲ್ಲಿ ಮೂರು ತಿಂಗಳ ಕಾಲ ಪ್ರಭಾರ ಎಸ್‌ಪಿಯಾಗಿ ಕಾರ್ಯನಿರ್ವಹಿಸಿದ್ದು, ಜಿಲ್ಲೆಯ ಬಗ್ಗೆ ಇನ್ನಷ್ಟು ಮಾಹಿತಿ ಪಡೆದುಕೊಂಡಿದ್ದು ವಿಶೇಷವಾಗಿತ್ತು.

DC-SP takes charge on the same day

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...