Home namma chikmagalur ಸೆಪ್ಟೆಂಬರ್ 13 ಕ್ಕೆ ಡಿ.ಸಿ.ಸಿ ಬ್ಯಾಂಕ್ ಚುನಾವಣೆ
namma chikmagalurchikamagalurHomeLatest News

ಸೆಪ್ಟೆಂಬರ್ 13 ಕ್ಕೆ ಡಿ.ಸಿ.ಸಿ ಬ್ಯಾಂಕ್ ಚುನಾವಣೆ

Share
Share

ಚಿಕ್ಕಮಗಳೂರು: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಚುನಾವಣೆ ಸೆಪ್ಟೆಂಬರ್ 13 ರಂದು ನಡೆಯಲಿದೆ.

ಚಿಕ್ಕಮಗಳೂರು ಉಪವಿಭಾಗಧಿಕಾರಿಯವರನ್ನು ಚುನಾವಣಾ ಅಧಿಕಾರಿಯಾಗಿ ನೇಮಿಸಿದ್ದು ಚಿಕ್ಕಮಗಳೂರು ತಹಶಿಲ್ದಾರರನ್ನು ಸಹಾಯಕ ಚುನಾವಣಾಧಿಕಾರಿಯಾಗಿ ನೇಮಿಸಲಾಗಿದೆ.

ಬ್ಯಾಂಕ್ ನ 13 ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಬಿಜೆಪಿಯವರು ಪ್ರಸ್ತುತ ಅಧಿಕಾರದ ಚುಕ್ಕಾಣಿ ಹಿಡಿದು ಮಾಜಿ ಶಾಸಕರಾದ ಡಿ.ಎಸ್.ಸುರೇಶ್ ಅಧ್ಯಕ್ಷರಾಗಿ ಅತ್ಯುತ್ತಮ ಬ್ಯಾಂಕ್ ಕಟ್ಟಡ ನಿರ್ಮಿಸಿರುವುದು ಸೇರಿದಂತೆ ರೈತರಿಗೆ ಸಕಾಲದಲ್ಲಿ ಸಾಲ ದೊರೆಯುವಂತೆ ಮಾಡಿದ್ದಾರೆ.

ಸಹಕಾರ ಕ್ಷೇತ್ರದ ಇತಿಹಾಸದಲ್ಲಿ ಘಾಟಾನುಘಟಿ ಸಹಕಾರಿಗಳು ಅತ್ಯುನ್ನತ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಲು ಹಾತೊರೆದರು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿರಲಿಲ್ಲ.ಮಾಜಿ ಶಾಸಕರಾದ ಬೆಳ್ಳಿ ಪ್ರಕಾಶ್ ಡಿಸಿಸಿ ಬ್ಯಾಂಕ್ ನಿಂದ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಇದೇ ಅವಧಿಯಲ್ಲಿ ದಾಖಲೆ ಬರೆದಿದ್ದಾರೆ.

ಮತ್ತೆ ಚುನಾವಣೆ ನಿಗಧಿಯಾಗಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಿಲ್ಲೆಯಲ್ಲಿ ಐದು ಜನ ಕಾಂಗ್ರೆಸ್ ಶಾಸಕರಿದ್ದಾರೆ ಹೀಗಾಗಿ ಕುತೂಹಲ ಹುಟ್ಟಿಸಿದೆಯಾದರೂ ಒಂದಿಬ್ಬರು ಗೆದ್ದರೆ ಹೆಚ್ಚು ಎನ್ನುತ್ತಿದ್ದಾರೆ. ಏಕೆಂದರೆ ಕಳೆದ ಮೂವತ್ತು ವರ್ಷಗಳಿಂದ ಕಾಂಗ್ರೆಸ್ ಡಿಸಿಸಿ ಬ್ಯಾಂಕ್ ವಿಚಾರದಲ್ಲಿ ಕೈ ಕಟ್ಟಿ ಕುಳಿತಿದ್ದೇ ಹೆಚ್ಚು. ಈಗಲೂ ಕೂಡ ಅದೇ ಸ್ಥಿತಿ ಯಥಾಸ್ಥಿತಿ ಎನ್ನುತ್ತಿದ್ದಾರೆ.

ಸಹಕಾರ ಸಂಘಗಳಿಗೆ ನಡೆದ ಚುನಾವಣೆಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡ ಬಿಜೆಪಿಯವರು ಮತ್ತೊಂದು ಅವಧಿಯ ಅಧಿಕಾರ ಹಿಡಿಯುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

ಚಿಕ್ಕಮಗಳೂರು, ಕಡೂರು, ತರೀಕೆರೆ ಮತ್ತು ಮೂಡಿಗೆರೆಯಲ್ಲಿ ಬಹುತೇಕ ಸೊಸೈಟಿಗಳನ್ನು ಬಿಜೆಪಿಯವರು ಹಿಡಿತಕ್ಕೆ ಪಡೆದಿದ್ದಾರೆ ಕಾಂಗ್ರೆಸ್ ಕೊಪ್ಪ ದಲ್ಲಿ ಮಾತ್ರ ದಾರಿ ಸುಗಮ ಮಾಡಿಕೊಂಡಿದೆ.

DCC Bank Election on September 13

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...