Home namma chikmagalur chikamagalur ಕಾಫಿ ತೋಟದಲ್ಲಿ ಗಂಡು ಹುಲಿಯ ಮೃತದೇಹ ಪತ್ತೆ
chikamagalurCrime NewsHomeLatest Newsnamma chikmagalur

ಕಾಫಿ ತೋಟದಲ್ಲಿ ಗಂಡು ಹುಲಿಯ ಮೃತದೇಹ ಪತ್ತೆ

Share
Share

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲ್ಲೂಕಿನ ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಮುತ್ತೋಡಿ ಪ್ರಾದೇಶಿಕ ವಲಯದ ವ್ಯಾಪ್ತಿಯ ಹೊಸ ತೋಟ ಪ್ರದೇಶದ ಖಾಸಗಿ ಕಾಫಿ ತೋಟದಲ್ಲಿ ಗಂಡು ಹುಲಿಯ ಮೃತದೇಹ ಸೋಮವಾರ ಸಂಜೆ ಪತ್ತೆಯಾಗಿದೆ.

ಪ್ರಾಥಮಿಕ ಮಾಹಿತಿಯಂತೆ, ಹುಲಿಯು ಸುಮಾರು ಒಂದು ದಿನದ ಹಿಂದೆಯೇ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ಮೃತದೇಹ ಪತ್ತೆಯಾಗುತ್ತಿದ್ದಂತೆಯೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಹಿರಿಯ ಅಧಿಕಾರಿಗಳೂ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.

ಕೇಂದ್ರ ಸರ್ಕಾರದ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (NTCA) ಮಾರ್ಗಸೂಚಿಗಳ ಪ್ರಕಾರ ಮಂಗಳವಾರ ಮರಣೋತ್ತರ ಪರೀಕ್ಷೆ ನಡೆಸಲಾಗಲಿದ್ದು, ಹುಲಿಯ ಸಾವಿಗೆ ನಿಖರ ಕಾರಣ ಪರೀಕ್ಷಾ ವರದಿಯ ಬಳಿಕವೇ ತಿಳಿದುಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ನಡುವೆ, ಹುಲಿಯ ಸಾವಿನ ಕುರಿತು ಸಮಗ್ರ ತನಿಖೆ ನಡೆಸಿ, ಅದು ಸಹಜ ಸಾವೇ ಅಥವಾ ಬೇರೆ ಯಾವುದೇ ಕಾರಣದಿಂದ ಸಂಭವಿಸಿದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ವನ್ಯಜೀವಿ ಪ್ರೇಮಿಗಳು ಆಗ್ರಹಿಸಿದ್ದಾರೆ. ತಪ್ಪಿತಸ್ಥರು ಇದ್ದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.

ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದೆ.

Dead body of male tiger found in coffee plantation

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ ಬಳಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಕನ್ನಡಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಭಂವರ್‌ಸಿಂಗ್...

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ, ಮತ್ತೊಂದೆಡೆ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ಬಾರದ...

Related Articles

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ...

ಹಂದಿ ಬೇಟೆ: 7 ಜನರ ಬಂಧನ

ಕಡೂರು: ತಾಲ್ಲೂಕಿನ ಮಲ್ಲಾಘಟ್ಟ ಗ್ರಾಮದಿಂದ ಸಿಂಗಟಗೆರೆಗೆ ಹೋಗುವ ರಸ್ತೆಯಲ್ಲಿ ಭಾನುವಾರ ಮುಂಜಾನೆ ಹಂದಿ ಬೇಟೆಗೆ ಬಂದಿದ್ದ...

ಕೈಕುಸ್ತಿ(ಪಂಝಾ)ಆಡುತ್ತಿದ್ದ ವೇಳೆ ಯುವಕನ ಸಾವು

ಕಡೂರು:  ಕೈಕುಸ್ತಿ(ಪಂಝಾ)ಆಡುತ್ತಿದ್ದ ಸ್ನೇಹಿತರುಗಳ ನಡುವೆ ನಡೆದ ಮಾತಿನಚಕಮಕಿಯಿಂದ ಮಾರಣಾಂತಿಕ ಹಲ್ಲೆಗೆ ತಿರುಗಿ ಯುವಕನೊಬ್ಬನು ಮೃತಪಟ್ಟಿದ್ದು, ಕೊಲೆ...

ಉದ್ಯಮ ವಿಸ್ತರಣೆಗೆ ‘ಇ-ಹರಾಜು’ ಸುವರ್ಣಾವಕಾಶ

ಚಿಕ್ಕಮಗಳೂರು:  ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮದ್ಯದ ಅಂಗಡಿಗಳ ಲೈಸೆನ್ಸ್ ಇ-ಹರಾಜು ಪ್ರಕ್ರಿಯೆಯು ಜಿಲ್ಲೆಯ ಹಾಗೂ...