Home Latest News ಆರೋಗ್ಯ ವಿಮೆ- ಭವಿಷ್ಯ ನಿಧಿ ಸೌಲಭ್ಯ ನೀಡುವಂತೆ ಒತ್ತಾಯ
Latest NewschikamagalurHomenamma chikmagalur

ಆರೋಗ್ಯ ವಿಮೆ- ಭವಿಷ್ಯ ನಿಧಿ ಸೌಲಭ್ಯ ನೀಡುವಂತೆ ಒತ್ತಾಯ

Share
Share

ತರೀಕೆರೆ: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತರೀಕೆರೆ, ಅಜ್ಜಂಪುರ ತಾಲ್ಲೂಕಿನ ಪರವಾನಗಿ ಭೂಮಾಪಕರ ಸಂಘದ ಪದಾಧಿಕಾರಿಗಳು ಭೂದಾಖಲೆಗಳ ಸಹಾಯಕ ನಿರ್ದೇಶಕ ಮಂಜುನಾಥ್‌ ಸಿಂಗ್ ಅವರಿಗೆ ಮನವಿ ಸಲ್ಲಿಸಿದರು.

ಸರ್ಕಾರಿ ಭೂಮಾಪಕರಿಗೂ, ಪರವಾನಗಿ ಭೂಮಾಪಕರಿಗೂ ವೇತನದಲ್ಲಿ ಬಹಳ ತಾರತಮ್ಯವಿದೆ. ದರ್ಖಾಸ್ತು, ಕೆರೆ, ದೇವಸ್ಥಾನ, ಕೋರ್ಟ್ ಪ್ರಕರಣ ಇತ್ಯಾದಿ ಅಳತೆ ಕೆಲಸಗಳನ್ನು ಪರವಾನಗಿ ಭೂಮಾಪಕರು ನಿರ್ವಹಿಸುತ್ತಿದ್ದಾರೆ. ಆಕಾರ್‌ಬಂದು ಗಣಕೀಕರಣ, ನಕ್ಷಾ ಯೋಜನೆ ಸೇರಿದಂತೆ ವಿವಿಧ ರೀತಿಯಲ್ಲಿ ಭೂಮಾಪನ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ನಮಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುತ್ತಿಲ್ಲ. ಕನಿಷ್ಠ ಸವಲತ್ತುಗಳಿಂದಲೂ ವಂಚಿತರಾಗಿದ್ದೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಅಳತೆ ಕೆಲಸಕ್ಕೆ, ನೋಟಿಸ್ ಮಾಡುವುದಕ್ಕೆ ಅಗತ್ಯವಿರುವ ಬಾಂದು ಜವಾನರನ್ನು ನೀಡಿರುವುದಿಲ್ಲ. ಆದರೆ ಸಂಬಳ ನಿಗದಿ ಮಾಡಿರುವುದಿಲ್ಲ. ಆರೋಗ್ಯ ವಿಮೆ, ಭವಿಷ್ಯ ನಿಧಿ ಸೌಲಭ್ಯ ನೀಡಬೇಕು. ತಾಂತ್ರಿಕ ದೋಷಗಳಿಂದ ಆಗುವ ಸಮಸ್ಯೆಗಳಿಗೆ ಮೇಲಧಿಕಾರಿಗಳಿಂದ ನೋಟಿಸ್ ಪಡೆದುಕೊಳ್ಳುವ ಪರಿಸ್ಥಿತಿ ಎದುರಾಗುತ್ತಿದೆ. ಸರ್ಕಾರಿ ಭೂಮಾಪಕರಿಗೆ ನೀಡುವ ವೇತನ ಮತ್ತಿತರೆ ಸೌಲಭ್ಯಗಳನ್ನು ನಮಗೂ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಭೂದಾಖಲೆಗಳ ಕಚೇರಿ ಅಧೀಕ್ಷಕ ಮಹೇಶ್, ಪರವಾನಗಿ ಭೂಮಾಪಕರ ಸಂಘದ ಅಧ್ಯಕ್ಷ ಮಂಜುನಾಥ್, ಶ್ರೀನಿವಾಸ್, ದರ್ಶನ್ ಜೊತೆಗಿದ್ದರು.

Demand for health insurance-provident fund facility

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....