Home namma chikmagalur ಧರ್ಮಸ್ಥಳ ಪ್ರಕರಣಗಳ ತನಿಖೆ ಎಸ್‌ಐಟಿ ನಿಷ್ಪಕ್ಷಪಾತ ತನಿಖೆಗೆ ಆಗ್ರಹ
namma chikmagalurchikamagalurHomeLatest News

ಧರ್ಮಸ್ಥಳ ಪ್ರಕರಣಗಳ ತನಿಖೆ ಎಸ್‌ಐಟಿ ನಿಷ್ಪಕ್ಷಪಾತ ತನಿಖೆಗೆ ಆಗ್ರಹ

Share
Share

ಚಿಕ್ಕಮಗಳೂರು: ಧರ್ಮಸ್ಥಳ ಪೊಲೀಸ್‌ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಯನ್ನು ಎಸ್‌ಐಟಿ ನಿಷ್ಪಕ್ಷಪಾತವಾಗಿ ನಡೆಸಿ ಅಪರಾಧಿಗಳಿಗೆ ಶಿಕ್ಷೆಯಾಗಬೇಕು. ನೊಂದವರಿಗೆ ನ್ಯಾಯ ಸಿಗುವಂತಾಗಬೇಕು ಎಂದು ಕರ್ನಾಟಕ ಜನಶಕ್ತಿ ಹಾಗೂ ಎದ್ದೇಳು ಕರ್ನಾಟಕ ಸಂಘಟನೆಗಳು ಆಗ್ರಹಿಸಿವೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಗೌಸ್‌ಮೊಹಿದ್ದೀನ್ ಮಾತನಾಡಿ, ಧರ್ಮಸ್ಥಳದಲ್ಲಿ ೨೦೧೨ ರಲ್ಲಿ ನಡೆದ ಸೌಜನ್ಯ ಬರ್ಬರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ, ವೇದ, ಪದ್ಮಲತಾ, ಅನನ್ಯಭಟ್, ನಾರಾಯಣ, ಯಮುನ ಮತ್ತಿತರೆ ಮಹಿಳೆಯರ ನಾಪತ್ತೆ ಇವುಗಳನ್ನೊಳಗೊಂಡಂತೆ ತನಿಖೆ ಮಾಡಲು ಈಗ ಎಸ್‌ಐಟಿ ವಿಶೇಷ ತನಿಖಾ ತಂಡವನ್ನು ಸರಕಾರ ರಚಿಸಿರುವುದನ್ನು ಸ್ವಾಗತಿಸಿದರು.

ಈಗಾಗಲೇ ನೂರಾರು ಶವಗಳನ್ನು ನಾನೇ ಹೂತಿದ್ದೇನೆ ಎಂದು ವ್ಯಕ್ತಿಯೊಬ್ಬ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದಾನೆ. ಹೀಗಾಗಿ ಈ ಕೊಲೆಗಳನ್ನು ಮಾಡಿದವರು ಯಾರು ಎಂಬ ಪ್ರಶ್ನೆ ಈಗ ಮುಖ್ಯವಾಗಿದೆ. ಅಲ್ಲದೆ ಈ ವ್ಯಕ್ತಿ ಧರ್ಮಸ್ಥಳದಲ್ಲಿ ಉದ್ಯೋಗಿಯಾಗಿದ್ದೆ ಎಂಬುದರ ಬಗ್ಗೆ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ಇರುವುದಾಗಿ ಹೇಳಿಕೆ ನೀಡಿದ್ದಾನೆ. ಹೀಗಾಗಿ ಆತನ ಜೀವಕ್ಕೆ ಅಪಾಯವಿದ್ದು, ಆತನಿಗೆ ಪೊಲೀಸ್ ಇಲಾಖೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.

ಧರ್ಮಸ್ಥಳದಲ್ಲಿ ನಡೆದಿರುವ ಅತ್ಯಾಚಾರ, ಕೊಲೆ ಎಲ್ಲವೂ ಸುದ್ದಿಯಾದಾಗ ಅಲ್ಲಿಗೆ ಬರುವ ಭಕ್ತರಿಗೂ ಕೂಡ ಆತಂಕವಾಗುತ್ತದೆ. ಧರ್ಮಸ್ಥಳ ಸುತ್ತಮುತ್ತ ಶೈಕ್ಷಣಿಕ ಸಂಸ್ಥೆಗಳಿದ್ದು, ಅಲ್ಲಿಗೆ ವಿದ್ಯಾರ್ಥಿಗಳು ಬರಲು ಭಯದಿಂದ ಹಿಂಜರಿಯುತ್ತಾರೆ. ಹೀಗಾಗಿ ಈ ಪ್ರಕರಣಗಳ ತನಿಖೆಯನ್ನು ತ್ವರಿತ, ನಿಷ್ಪಕ್ಷಪಾತವಾಗಿ ನಡೆಸಿ ಸತ್ಯ ಏನೆಂಬುದು ಜನರಿಗೆ ಗೊತ್ತಾಗಬೇಕಿದೆ ಮತ್ತು ಯಾವುದೇ ಸಾಕ್ಷಿ ನಾಶವಾಗದಂತೆ ನೋಡಿಕೊಳ್ಳಬೇಕು. ಈ ಪ್ರಕರಣಗಳ ಆರೋಪಿಗಳಗೆ ಆದಷ್ಟು ಬೇಗ ಕಾನೂನು ಬದ್ದ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಮಹಿಳಾ ಘಟಕದ ವೀಣಾ, ಅರುಣಾಕ್ಷಿ, ಟಿ.ಎಲ್. ಗಣೇಶ್, ಅಶೋಕ್, ಸಂದೀಪ್ ಮತ್ತಿತರರಿದ್ದರು.

Demand for impartial investigation by SIT investigating Dharmasthala cases

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...