Home namma chikmagalur chikamagalur ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ
chikamagalurHomeLatest Newsnamma chikmagalur

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

Share
Share

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ ರೂ.ಗಳ ಹಗರಣ ನಡೆಸಿರುವ ಪ್ರಕರಣವನ್ನು ಸಿಬಿಐ ಅಥವಾ ಇಡಿ ತನಿಖೆಗೆ ಒಪ್ಪಿಸಬೇಕೆಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್. ದೇವರಾಜಶೆಟ್ಟಿ ಒತ್ತಾಯಿಸಿದರು.

ಅವರು ಬುಧವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಈ ಸಂಬಂಧ ತಕ್ಷಣವೇ ಜಿಲ್ಲಾ ಬಿಜೆಪಿ ಜಾಗೃತಗೊಂಡು ಅನೇಕ ಮಾಹಿತಿಗಳನ್ನು ಸಂಗ್ರಹಿಸಲಾಗಿದೆ. ಹಗರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಬಡವರನ್ನೇ ಗುರಿಯಾಗಿಸಿಕೊಂಡು ನೂರಾರು ಕೋಟಿರೂ. ವಂಚನೆ ನಡೆಸಿದ್ದು, ಈ ಸಂಬಂಧ ಎಸ್ಪಿ ಅವರಿಗೆ ಮನವಿ ಸಲ್ಲಿಸುತ್ತಿರುವುದಾಗಿ ತಿಳಿಸಿದರು.

ಈ ದಂಧೆಯಲ್ಲಿ ರಾಜಕೀಯ ಪಕ್ಷಗಳ ಮುಖಂಡರು ಭಾಗಿಯಾಗಿರುವ ಶಂಖೆಯಿದ್ದು, ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡಲೇ ಬಂಧಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ ಅವರು, ಈಗಾಗಲೇ ೬ ಆರೋಪಿಗಳನ್ನು ಬಂಧಿಸಿರುವುದು ಕಣ್ಣೊರೆಸುವ ತಂತ್ರವಾಗಿದೆ. ಪ್ರಕರಣದ ಹಿಂದಿರುವ ಕಾಣದ ಕೈಗಳನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದು, ಈ ಪ್ರಕರಣವನ್ನು ಮುಚ್ಚಿಹಾಕುವ ಸಂಶಯಗಳು ವ್ಯಕ್ತವಾಗುತ್ತಿದೆ ಎಂದು ದೂರಿದರು.

ಪ್ರಕರಣದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ, ಕ್ರಿಕೆಟ್ ಬೆಟ್ಟಿಂಗ್ ಹಣ, ಹವಾಲದ ಹಣ ಬಳಕೆಯಾಗಿರುವ ಶಂಖೆಯಿದ್ದು, ಎಸ್‌ಬಿಐ, ಐಸಿಐಸಿಐ, ಆಕ್ಸಿಸ್ ಬ್ಯಾಂಕ್, ಕೋಟಕ್ ಮಹೀಂದ್ರ, ಹೆಚ್‌ಡಿಎಫ್‌ಸಿ, ಫೆಡರಲ್ ಬ್ಯಾಂಕ್ ಸೇರಿದಂತೆ ಇನ್ನೂ ಅನೇಕ ಬ್ಯಾಂಕುಗಳಲ್ಲಿ ಅಕ್ರಮವಾಗಿ ಖಾತೆಗಳನ್ನು ತೆರೆದು ಒಂದೊಂದು ಖಾತೆಗಳಲಿ ಲಕ್ಷಾಂತರ ರೂ. ವ್ಯವಹಾರ ಮಾಡಲಾಗಿದೆ. ಈ ವ್ಯವಹಾರದಲ್ಲಿ ಬ್ಯಾಂಕು ಸಿಬ್ಬಂದಿ ಬಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ತಿಳಿಸಿದರು.

ಇದೊಂದು ಬಹುಕೋಟಿ ಹಗರಣವಾಗಿರುವುದರಿಂದ ನಿಷ್ಪಕ್ಷಪಾತ ತನಿಖೆ ನಡೆಸಲು ಸಿಬಿಐ ಅಥವಾ ಇಡಿಗೆ ವಹಿಸಬೇಕೆಂದು ಒತ್ತಾಯಿಸಿದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ಹುಟ್ಟು ಹಬ್ಬದ ಅಂಗವಾಗಿ ಜು.೧೮ ರಂದು ಶನಿವಾರ ವೃದ್ದಾಶ್ರಮ, ಅಂಧಮಕ್ಕಳ ಶಾಲೆ, ಅನಾಥಾಶ್ರಮ, ಆಸ್ಪತ್ರೆಗಳಲ್ಲಿ ಹಣ್ಣು ಹಂಪಲು ವಿತರಣೆ ಮಾಡಲಾಗುವುದು ಹಾಗೂ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಲು ಜಿಲ್ಲಾ ಬಿಜೆಪಿ ನಿರ್ಧರಿಸಿದೆ ಎಂದರು.

ಜಿಲ್ಲೆಯ ಮತದಾರರು ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸರ್ವರೂ ಪಾಲ್ಗೊಳ್ಳುವ ಮೂಲಕ ಮತಪಟ್ಟಿಯಲ್ಲಿ ಹೆಸರು ಕೈ ತಪ್ಪದಂತೆ ಜಾಗ್ರತೆ ವಹಿಸಬೇಕೆಂದು ಮನವಿ ಮಾಡಿದರು.

ಪತ್ರಿಕಾಗೋಷ್ಟಿಯಲ್ಲಿ ನಗರ ಮಂಡಲ ಅಧ್ಯಕ್ಷ ಕೆ. ಪುಷ್ಪರಾಜು, ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ. ವೆಂಕಟೇಶ್, ವಕ್ತಾರ ಹೆಚ್.ಎಸ್. ಪುಟ್ಟಸ್ವಾಮಿ, ಮುಖಂಡರಾದ ಕೋಟೆ ರಂಗನಾಥ್, ಸಂತೋಷ್ ಕೋಟ್ಯಾನ್, ದಿನೇಶ್, ಸಚಿನ್, ಆಲ್ದೂರು ಶಶಿ ಉಪಸ್ಥಿತರಿದ್ದರು.

Demand for investigation into CBI-ED probe into multi-crore scam case

Share

Leave a comment

Leave a Reply

Your email address will not be published. Required fields are marked *

Don't Miss

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು ನೆರೆಯವರ ತೋಟದ ಮನೆಯ ಹಿಂಭಾಗ ಬೆಂಕಿ ಹಚ್ಚಿಕೊಂಡು ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ದುರಂತ ಘಟನೆ ವರದಿಯಾಗಿದೆ....

Related Articles

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...

ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಿಸುವ ನೆಪದಲ್ಲಿ ₹1.59 ಲಕ್ಷ ವಂಚನೆ

ಚಿಕ್ಕಮಗಳೂರು: ಕ್ರೆಡಿಟ್ ಕಾರ್ಡ್ ಮಿತಿಯನ್ನು ಹೆಚ್ಚಿಸುವುದಾಗಿ ನಂಬಿಸಿ ಬ್ಯಾಂಕ್ ಅಧಿಕಾರಿಯಂತೆ ನಟಿಸಿದ ಸೈಬರ್ ವಂಚಕರು ವ್ಯಕ್ತಿಯೊಬ್ಬರ...

ಹಾಡಹಗಲೇ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಒಳಗೆ ಯುವತಿ ಅಪಹರಣ

ಚಿಕ್ಕಮಗಳೂರು: ಪದವಿ ಮುಗಿಸಿ ಕಾಲೇಜಿನಿಂದ ಅಂಕಪಟ್ಟಿ ಪಡೆದುಕೊಂಡು ಬರಲು ತನ್ನ ಅಕ್ಕನ ಮಗಳೊಂದಿಗೆ ಬಂದಿದ್ದ ಯುವತಿಯನ್ನು...