Home namma chikmagalur ಗಿರಿಗೆ ತೆರಳಲು ಪಾಸ್ ಕಡ್ಡಾಯ ನಿರ್ಧಾರ ರದ್ದುಪಡಿಸುವಂತೆ ಆಗ್ರಹ
namma chikmagalurchikamagalurHomeLatest News

ಗಿರಿಗೆ ತೆರಳಲು ಪಾಸ್ ಕಡ್ಡಾಯ ನಿರ್ಧಾರ ರದ್ದುಪಡಿಸುವಂತೆ ಆಗ್ರಹ

Share
Share

ಚಿಕ್ಕಮಗಳೂರು:  ಗುರುದತ್ತಾತ್ರೇಯ ಸ್ವಾಮಿ ಬಾಬಾಬುಡನ್‌ಗಿರಿ ದರ್ಗಾ ವ್ಯಾಪ್ತಿಯ ಸಂಚಾರಕ್ಕೆ ಸ್ಥಳೀಯ ನಿವಾಸಿಗಳಿಗೆ ಪಾಸ್ ಕಡ್ಡಾಯ ಮಾಡಲು ಮುಂದಾಗಿರುವ ಜಿಲ್ಲಾಡಳಿತದ ನಿರ್ಧಾರವನ್ನು ರದ್ದುಪಡಿಸುವಂತೆ ಎದ್ದೇಳು ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ರಾಜ್ಯ ಸಂಚಾಲಕ ಗೌಸ್‌ಮೊಯುದ್ದೀನ್ ಮಾತನಾಡಿ, ಗುರುದತ್ತಾತ್ರೇಯ ಸ್ವಾಮಿ ಬಾಬಾಬುಡನ್ ದರ್ಗಾ ಸರ್ವಧರ್ಮಿಯರ ಸೌಹಾರ್ದ ಕೇಂದ್ರವಾಗಿದೆ. ಜತೆಗೆ ಸುತ್ತಮುತ್ತ ಹತ್ತಾರು ಪ್ರವಾಸಿ ತಾಣಗಳಿವೆ. ಪ್ರವಾಸಿ ಸ್ಥಳ ವೀಕ್ಷಣೆಗೆ ಬರುವ ಹೊರಗಿನವರಿಗೆ ಆನ್‌ಲೈನ್ ಪ್ರವೇಶ ನೀಡಲು, ಸ್ಥಳೀಯರಿಗೆ ಪಾಸ್ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಹೇಳಿದರು.

ಈ ವಿಚಾರದಲ್ಲಿ ಸ್ಥಳೀಯ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ. ಈ ರೀತಿ ಸ್ಥಳೀಯರಿಗೆ ಪಾಸ್ ನೀಡಿದರೆ ಆ ಭಾಗದಲ್ಲಿರುವ ಕಾಫಿ ತೋಟಗಳಿಗೆ ಕೂಲಿ ಕೆಲಸಕ್ಕೆ ಕಾರ್ಮಿಕರು ಬರುವುದ ಹೇಗೆ? ಮದುವೆ, ಮುಂಜಿ ಮತ್ತಿತರೆ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಾವುನೋವುಗಳಾದಾಗ ಹೊರಗಿನ ಸಂಬಂಧಿಕರು ತಮ್ಮವರನ್ನು ಭೇಟಿ ಮಾಡುವುದು ಹೇಗೆ ಎಂದು ಪ್ರಶ್ನಿಸಿದರು.

ನಮ್ಮ ಊರು, ನಮ್ಮ ಮನೆಗೆ ಅನುಮತಿ ಪಡೆದು ಬರುವಂತಾಗುತ್ತದೆ. ಇದು ಮಾನವನ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ ಎಂದರು. ಜಿಲ್ಲಾಡಳಿತ ಈ ನಿರ್ಧಾರವನ್ನು ಕೈಬಿಡದಿದ್ದರೆ ಆ.೧೩ ರಂದು ಜಿಲ್ಲಾ ಕೇಂದ್ರದಲ್ಲಿ ತೀವೃತರದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಶ್ರೀ ಗುರುದತ್ತಾತ್ರೇಯ ಸ್ವಾಮಿ ಬಾಬಾಬುಡನ್ ದರ್ಗಾದಲ್ಲಿ ಸಂಘಪರಿವಾರ ಹುಟ್ಟು ಹಾಕಿರುವ ವಿವಾದಕ್ಕೆ ಒಂದು ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು. ಈಗ ದತ್ತಪೀಠದಲ್ಲಿರುವ ಈಗಿರುವ ಸಮಿತಿಯನ್ನು ರದ್ದುಮಾಡಿ ಎರಡೂ ಪಂಗಡದವರು ಸಮಾನವಾಗಿರುವ ಪಾರದರ್ಶಕ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಮುಖಂಡರಾದ ಆಶಾಸಂತೋಷ್, ದಿವಾಕರ, ರೀತು, ಪುಟ್ಟಸ್ವಾಮಿ, ವೀಣಾ, ಗಣೇಶ್, ಚಂದು, ಪಾಷಾ ಮತ್ತಿತರರಿದ್ದರು

Demand to cancel the decision to make passes mandatory to visit Giri

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ ಬಳಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಕನ್ನಡಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಭಂವರ್‌ಸಿಂಗ್...

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ, ಮತ್ತೊಂದೆಡೆ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ಬಾರದ...

Related Articles

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ...

ಹಂದಿ ಬೇಟೆ: 7 ಜನರ ಬಂಧನ

ಕಡೂರು: ತಾಲ್ಲೂಕಿನ ಮಲ್ಲಾಘಟ್ಟ ಗ್ರಾಮದಿಂದ ಸಿಂಗಟಗೆರೆಗೆ ಹೋಗುವ ರಸ್ತೆಯಲ್ಲಿ ಭಾನುವಾರ ಮುಂಜಾನೆ ಹಂದಿ ಬೇಟೆಗೆ ಬಂದಿದ್ದ...

ಕೈಕುಸ್ತಿ(ಪಂಝಾ)ಆಡುತ್ತಿದ್ದ ವೇಳೆ ಯುವಕನ ಸಾವು

ಕಡೂರು:  ಕೈಕುಸ್ತಿ(ಪಂಝಾ)ಆಡುತ್ತಿದ್ದ ಸ್ನೇಹಿತರುಗಳ ನಡುವೆ ನಡೆದ ಮಾತಿನಚಕಮಕಿಯಿಂದ ಮಾರಣಾಂತಿಕ ಹಲ್ಲೆಗೆ ತಿರುಗಿ ಯುವಕನೊಬ್ಬನು ಮೃತಪಟ್ಟಿದ್ದು, ಕೊಲೆ...

ಉದ್ಯಮ ವಿಸ್ತರಣೆಗೆ ‘ಇ-ಹರಾಜು’ ಸುವರ್ಣಾವಕಾಶ

ಚಿಕ್ಕಮಗಳೂರು:  ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮದ್ಯದ ಅಂಗಡಿಗಳ ಲೈಸೆನ್ಸ್ ಇ-ಹರಾಜು ಪ್ರಕ್ರಿಯೆಯು ಜಿಲ್ಲೆಯ ಹಾಗೂ...