Home ರೈತರ ಅನುಕೂಲಕ್ಕಾಗಿ ಚಾನಲ್ ಕಾಮಗಾರಿ ಸ್ಥಗಿತಗೊಳಿಸಲು ಆಗ್ರಹ
HomechikamagalurLatest Newsnamma chikmagalur

ರೈತರ ಅನುಕೂಲಕ್ಕಾಗಿ ಚಾನಲ್ ಕಾಮಗಾರಿ ಸ್ಥಗಿತಗೊಳಿಸಲು ಆಗ್ರಹ

Share
Share

ಚಿಕ್ಕಮಗಳೂರು: ಅಯ್ಯನಕೆರೆ ಕೋಡಿಬಿದ್ದು ಹರಿಯುವ ನೀರಿನಿಂದ ಕೆರೆಗಳನ್ನು ತುಂಬಿಸುವ ಕಾಮಗಾರಿ ಎಂದು ಸರ್ಕಾರ ಅನುಮೋದನೆ ನೀಡಿದ್ದು, ಈ ಯೋಜನೆಯ ಬಗ್ಗೆ ಎರಡೂ ಭಾಗದ ರೈತರ ಗಮನಕ್ಕೆ ಅಧಿಕಾರಿಗಳು ಸರಿಯಾದ ಮಾಹಿತಿ ನೀಡಿಲ್ಲ ಎಂದು ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಕೆ. ಲೋಕೇಶ್ ಆರೋಪಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಾಸಕರು, ಜನಪ್ರತಿನಿಧಿಗಳು ಹಾಗೂ ಎರಡೂ ಭಾಗದ ರೈತರನ್ನೊಳಗೊಂಡ ಸಭೆಯನ್ನು ಜಿಲ್ಲಾಧಿಕಾರಿಗಳು ಕರೆದು ಯಥಾಸ್ಥಿತಿ ಕಾಪಾಡಬೇಕು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತಕ್ಷಣದಿಂದಲೇ ಚಾನಲ್ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿದರು.

ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಇಂಜಿನಿಯರ್‌ಗಳು ಅವೈಜ್ಞಾನಿಕವಾಗಿ ದಾಖಲೆಗಳನ್ನು ಸೃಷ್ಟಿಸಿ ಅಗ್ರಹಾರದ ಚೆಕ್‌ಡ್ಯಾಂ ನಿಂದ ನೀರೆತ್ತುವ ಕಾಮಗಾರಿ ಕಾರ್ಯರೂಪಗೊಳಿಸಿರುವುದನ್ನು ಖಂಡಿಸಿದರು.

ಸುಮಾರು ಕಡೂರು ಭಾಗದ ೫೧ ಹಳ್ಳಿಗಳ ರೈತರಿಗೆ ವೇದಾ ನದಿಯು ಜೀವನದಿಯಾಗಿದೆ. ಇಂದಿಗೂ ಕುಡಿಯಲು ಈ ನದಿ ನೀರನ್ನು ಬಳಸಲಾಗುತ್ತಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಸಚಿವರು, ಅಧಿಕಾರಿಗಳು, ಶಾಸಕರು ಕ್ರಮ ವಹಿಸುವಂತೆ ಮನವಿ ಮಾಡಿದರು.

ಅಯ್ಯನಕೆರೆಯಿಂದ ಕೋಡಿಬಿದ್ದ ನೀರು ಜೀವನಾಡಿಯಾದ ವೇದಾ ನದಿಗೆ ಬರುವುದೇ ಇಲ್ಲ. ಕೋಡಿಬಿದ್ದ ನೀರು ೩೫೪೦ ಕ್ಯೂಸೆಕ್ಸ್ ಹೊರ ಹರಿಯುತ್ತದೆ ಎಂದು ಡಿಪಿಆರ್‌ನಲ್ಲಿ ನಮೂದಿಸಿರುವುದು ಇದು ಶುದ್ಧ ಸುಳ್ಳು, ಅವೈಜ್ಞಾನಿಕವಾಗಿದೆ ಎಂದು ದೂರಿದರು.

ಮಾನ್ಸೂನ್ ಪ್ರಾರಂಭವಾದ ೪೫ ದಿನಗಳಲ್ಲಿ ದಿನಕ್ಕೆ ೨೨ ಗಂಟೆ ೨೦೦ ಅಶ್ವಶಕ್ತಿಯ ಪಂಪ್‌ನಿಂದ ನೀರೆತ್ತುವ ಕೆಲಸ ಪ್ರಾರಂಭವಾಗುತ್ತದೆ ಎಂದು ಮಾಜಿ ಜಿ.ಪಂ ಸದಸ್ಯ ಹೆಚ್.ಸಿ ಕಲ್ಮರುಡಪ್ಪ ಅವರು ಮಾಹಿತಿ ಇಲ್ಲದೆ ತಪ್ಪು ಹೇಳಿಕೆ ನೀಡಿದ್ದಾರೆ. ಅಯ್ಯನ ಕೆರೆಯಿಂದ ಹೊರ ಹರಿಯುವ ನೀರಿಗೂ ವೇದಾ ನದಿಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.ಪತ್ರಿಕಾಗೋಷ್ಠಿಯಲ್ಲಿ ಜಿಗಣೇಹಳ್ಳಿ ಗ್ರಾ.ಪಂ ಸದಸ್ಯ ಬಸವರಾಜ್ ಉಪಸ್ಥಿತರಿದ್ದರು.

Demand to stop channel work for the benefit of farmers

Share

Leave a comment

Leave a Reply

Your email address will not be published. Required fields are marked *

Don't Miss

ಮಕ್ಕಳಪ್ರತಿಭೆ ರಾಷ್ಟ್ರಮಟ್ಟದಲ್ಲಿ ಬೆಳಗಿಸಿದ ಕ್ರೀಡಾ ಶಿಕ್ಷಕ

ತರೀಕೆರೆ: ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ವಿಷಯಗಳ ಜೊತೆಗೆ ದೈಹಿಕ ಶಿಕ್ಷಣವು ಬಹು ಮುಖ್ಯ. ಮಕ್ಕಳ ಆಸಕ್ತಿ ಗಮನಿಸಿ ಪ್ರೋತ್ಸಾಹ ನೀಡುವುದರ ಜೊತೆಗೆ ತರಭೇತಿ ನೀಡಿದರೆ ತಾಲ್ಲೂಕು, ಜಿಲ್ಲೆ,ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಕೀರ್ತಿ ಗಳಿಸಲು...

ಮೂರು ಗುಂಪುಗಳಲ್ಲಿ 40ಕ್ಕೂ ಅಧಿಕ ಕಾಡಾನೆಗಳು ದಾಳಿ

ಮೂಡಿಗೆರೆ: ತಾಲ್ಲೂಕಿನ ಗೋಣಿಬಿಡು ಹೋಬಳಿಯ ಜಿ.ಹೊಸಳ್ಳಿ, ಹೊಸಪುರ, ಕಸ್ಕೇಬೈಲ್ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮೂರು ಗುಂಪುಗಳಲ್ಲಿ ಸುಮಾರು 40ಕ್ಕೂ ಅಧಿಕ ಕಾಡಾನೆಗಳು ದಾಳಿ ನಡೆಸಿದ್ದು ಭಯದ ವಾತಾವರಣ ಸೃಷ್ಟಿಯಾಗಿದೆ. ಒಂದು ತಿಂಗಳಿನಿಂದ...

Related Articles

ಫೋಟೋ-ವಿಡಿಯೋಗ್ರಫಿ ಕೆನಾನ್ ಕ್ಯಾಮಾರಗಳು ಶ್ರೇಷ್ಠ

ಚಿಕ್ಕಮಗಳೂರು:  ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ಕ್ಷೇತ್ರದಲ್ಲಿ ಹೊಸ ಆಯಾಮ ವನ್ನು ಸೃಷ್ಟಿಸುವ ಕೆನಾನ್ ಕ್ಯಾಮರಾಗಳು ಛಾಯಾಗ್ರಾಹಕರ...

ಕೊಳಮಗೆ ಬಳಿಯ ಭದ್ರಾ ನದಿಗೆ ಬಿದ್ದ ಪಿಕ್‌ಅಪ್: ಯುವಕ ಸಾವಿನ ಶಂಕೆ

ಕಳಸ: ಕಳಸ-ಕಳಕೋಡು ರಸ್ತೆಯ ಕೊಳಮಗೆ ಬಳಿ ಭದ್ರಾನದಿಗೆ ಗುರುವಾರ ಮಧ್ಯಾಹ್ನ ಪಿಕ್‌ಅಪ್ ವಾಹನ ಬಿದ್ದಿದ್ದು, ಯುವಕನೊಬ್ಬ...

ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ

ಕೊಪ್ಪ : ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಒಂದು ಚೀಲ ಗೊಬ್ಬರ ಬೇಕು...

ಅರಣ್ಯ ಸಚಿವರಿಗೆ ಮಲ್ನಾಡು ಹಾಗೂ ಬಯಲು ಸೀಮೆಗೂ ಇರೋ ವ್ಯತ್ಯಾಸ ಗೊತ್ತಿಲ್ಲ

ಚಿಕ್ಕಮಗಳೂರು: ಅರಣ್ಯ ಸಚಿವರಿಗೆ ಮಲ್ನಾಡು ಭಾಗಕ್ಕೂ ಹಾಗೂ ಬಯಲು ಸೀಮೆಗೂ ಇರೋ ವ್ಯತ್ಯಾಸ ಗೊತ್ತಿಲ್ಲ. ನಿರಂತರವಾಗಿ...