Home ಡಿಸಿಸಿ ಬ್ಯಾಂಕ್ ನೇಮಕಾತಿ ಪ್ರಕ್ರಿಯೆ ತಡೆಗೆ ದಸಂಸ ಆಗ್ರಹ
HomechikamagalurLatest Newsnamma chikmagalur

ಡಿಸಿಸಿ ಬ್ಯಾಂಕ್ ನೇಮಕಾತಿ ಪ್ರಕ್ರಿಯೆ ತಡೆಗೆ ದಸಂಸ ಆಗ್ರಹ

Share
Share

ಚಿಕ್ಕಮಗಳೂರು: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿರುವ ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿಯಬೇಕು. ಇಲ್ಲದಿದ್ದಲ್ಲಿ ತೀವ್ರ ಹೋರಾಟ ಹಮ್ಮಿಕೊಳ್ಳುವುದರ ಜೊತೆಗೆ ಕಾನೂನು ಹೋರಾಟ ರೂಪಿಸುವುದಾಗಿ ದಲಿತ ಸಂಘರ್ಷ ಸಮಿತಿ ಮುಖಂಡ ಮರ್ಲೆ ಅಣ್ಣಯ್ಯ ಎಚ್ಚರಿಸಿದ್ದಾರೆ.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪರಿಶಿಷ್ಟ ಜಾತಿಗಳಿಗೆ ಒಳಮೀಸಲು ನೀಡುವತನಕ ಯಾವುದೇ ನೇಮಕಾತಿ ಅಧಿಸೂಚನೆ ಹೊರಡಿಸಬಾರದು ಎಂದು ರಾಜ್ಯಸರಕಾರ ಆದೇಶಿಸಿದೆ. ಈ ಆದೇಶವನ್ನು ಉಲ್ಲಂಘಿಸಿ ನೇಮಕಾತಿ ಅಧಿಸೂಚನೆ ಹೊರಡಿಸುವ ಮೂಲಕ ಎಸ್ಸಿ ವಿದ್ಯಾವಂತ ಯುವಜನತೆಯನ್ನು ವಂಚಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಬ್ಯಾಂಕಿನ ಮುಂಬಡ್ತಿಗಳಲ್ಲಿ ರೋಸ್ಟರ್ ನಿಯಮ ಪಾಲನೆ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ದರೂ, ಈ ಬಗ್ಗೆ ಹೈಕೋರ್ಟ್ ಆದೇಶ ನೀಡಿದ್ದರೂ ಸಹ ಸೂಕ್ತ ಕ್ರಮ ಜರುಗಿಸದೆ ಪರಿಶಿಷ್ಟ ನೌಕರರನ್ನು ದ್ವಿತೀಯ ದರ್ಜೆ ಪ್ರಜೆಗಳಂತೆ ಕಾಣಲಾಗುತ್ತಿದೆ. ಮೇ.೨೫ ರಂದು ಯುಪಿಎಸ್‌ಸಿ, ಕೆಪಿಎಸ್‌ಸಿ ಪರೀಕ್ಷೆ ನಡೆಯುತ್ತಿದೆ. ಅಂದು ಯಾವುದೇ ಇತರೆ ಪರೀಕ್ಷೆಗಳನ್ನು ನಡೆಸಬಾರದು ಎಂಬ ನಿಯಮವಿದ್ದರೂ ಅದೇ ದಿನ ಡಿಸಿಸಿ ಬ್ಯಾಂಕಿನ ನೇಮಕಾತಿ ಪರೀಕ್ಷೆ ದಿನ ನಿಗದಿ ಮಾಡಿದ್ದಾರೆ. ಬೇರೆ ದಿನ ನಡೆಸುವಂತೆ ಸರಕಾರದ ಕಾರ್ಯದರ್ಶಿಗಳು ಆದೇಶಿಸಿದ್ದರೂ ಅದನ್ನು ಉಲ್ಲಂಘಿಸಲಾಗಿದೆ ಎಂದು ದೂರಿದರು.

ಬ್ಯಾಂಕಿನ ಆಡಳಿತ ಮಂಡಳಿ ಅವಧಿಯು ಇನ್ನೂ ೬ ತಿಂಗಳು ಬಾಕಿ ಇದ್ದು ಈ ಸಂದರ್ಭದಲ್ಲಿ ತರಾತುರಿಯಲ್ಲಿ ನೇಮಕಾತಿಯನ್ನು ಪೂರ್ಣಗೊಳಿಸಲು ಯತ್ನಿಸುತ್ತಿರುವುದು ಇವರ ದುರುದ್ದೇಶದ ಕ್ರಮವಾಗಿದೆ. ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನಹರಿಸಿ ಸರಕಾರದ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಲು ನಿರ್ದೇಶನ ನೀಡಬೇಕು. ಅಲ್ಲಿಯತನಕ ಪರೀಕ್ಷೆಯನ್ನು ಮುಂದೂಡುವಂತೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.

ಡಿಸಿಸಿ ಬ್ಯಾಂಕಿನಲ್ಲಿ ಮೀಸಲಾತಿ ಪಾಲಿಸುವಂತೆ ಹೈಕೋರ್ಟ್ ೨೦೧೭ ರಲ್ಲಿ ನೀಡಿರುವ ಆದೇಶವನ್ನು ಪಾಲಿಸಿದ ನಂತರವೇ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಬೇಕು ಎಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಬಾಚಿಗನಹಳ್ಳಿಮಂಜಯ್ಯ ಉಪಸ್ಥಿತರಿದ್ದರು.

Demand to stop DCC Bank recruitment process

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...