Home Latest News ಸರ್ಫೇಸಿ ಕಾಯ್ದೆ ರದ್ದುಮಾಡಲು ದೇವರಾಜ್ ಆಗ್ರಹ
Latest NewschikamagalurHomenamma chikmagalur

ಸರ್ಫೇಸಿ ಕಾಯ್ದೆ ರದ್ದುಮಾಡಲು ದೇವರಾಜ್ ಆಗ್ರಹ

Share
Share

ಚಿಕ್ಕಮಗಳೂರು:  ಸರ್ಫೇಸಿ ಕಾಯ್ದೆ ಕಾಫಿ ಬೆಳೆಗಾರರಿಗೆ ಮರಣ ಶಾಸನವಾಗಿದ್ದು, ಬೆಳೆಗಾರರ ಜೊತೆ ಚೆಲ್ಲಾಟವಾಡದೆ ಕೇಂದ್ರಸರ್ಕಾರ ಈ ಕಾಯ್ದೆಯನ್ನು ರದ್ದುಮಾಡಿ, ಬೆಳೆಗಾರರ ನೆರವಿಗೆ ಧಾವಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಆಗ್ರಹಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಯ ಕಾಫಿಯ ಗುಣಮಟ್ಟ ಮತ್ತು ಬೆಳೆಗಾರರ ಬಗ್ಗೆ ಮನ್‌ಕಿ ಬಾತ್ ನಲ್ಲಿ ಪ್ರಸ್ತಾಪಿಸಿದ್ದಾರೆ. ಬರಿ ಪ್ರಸ್ತಾಪ ಮಾಡಿದರೆ ಸಾಲದು ಬೆಳೆಗಾರರು ಸಂಕಷ್ಟದಲ್ಲಿದ್ದಾಗ ಅವರ ನೆರವಿಗೆ ಬರಬೇಕು. ಅಲ್ಲದೆ ಬೆಳೆಗಾರರಿಗೆ ಮರಣ ಶಾಸನವಾಗಿರುವ ಸರ್ಫೆಸಿ ಕಾಯಿದೆಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ಪ್ರಮುಖ ಬೆಳೆ ಕಾಫಿ ಅತಿವೃಷ್ಟಿಯಿಂದ ಶೇ.೫೦-೬೦ ರಷ್ಟು ನೆಲಕಚ್ಚಿದ್ದು, ಕಾಫಿ ಬೆಳೆಯಿಂದ ಅಧಿಕ ವಿದೇಶಿವಿನಿಮಯ ಪಡೆಯುವ ಕೇಂದ್ರ ಸರಕಾರ ಬೆಳೆಗಾರರಿಗೆ ಆಗಿರುವ ನಷ್ಟ ಭರ್ತಿಮಾಡಿಕೊಡಬೇಕು ಈ ವರ್ಷ ಸುರಿದ ಮಳೆಯಿಂದ ಶೇ.೫೦-೬೦ ರಷ್ಟು ಅರೆಬಿಕಾ ಕಾಫಿ ಉದುರಿ ಹೋಗಿದೆ. ರೊಬಸ್ಟಾ ಸೆಟ್ ಆಗಲೇ ಇಲ್ಲ. ಇಂತಹ ಕ್ಲಿಷ್ಟಕರ ಸಮಸ್ಯೆಯನ್ನು ಯಾರ ಬಳಿ ಹೇಳಿಕೊಳ್ಳಬೇಕು ಎಂಬುದೇ ತಿಳಿಯುತ್ತಿಲ್ಲ ಎಂದು ತಿಳಿಸಿದರು.

ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರು ಇನ್ನು ೬ ತಿಂಗಳಲ್ಲಿ ಸರ್ಫೆಸಿ ಕಾಯಿದೆ ರದ್ದು ಮಾಡಿಸುವುದಾಗಿ ಸಮಾರಂಭದಲ್ಲಿ ಹೇಳಿದ್ದರು. ಆದರೆ ವರ್ಷ ಕಳೆದರೂ ಬೆಳೆಗಾರರ ಹರಾಜು ಪ್ರಕ್ರಿಯೆ ಮುಂದುವರಿದಿದೆ. ಚಿಕ್ಕಮಗಳೂರು ಬೇಲೂರು ರಸ್ತೆ ಅಭಿವೃದ್ಧಿಪಡಿಸುವುದಾಗಿಯೂ ಸಂಸದರು ಹೇಳಿದ್ದರು, ಆ ಕೆಲಸವೂ ಆಗಿಲ್ಲ. ಹೀಗಾಗಿ ಹಿಂದಿನ ಸಂಸದೆ ಶೋಭಾ ಕರಂದ್ಲಾಜೆಯಂತೆ ಇವರೂ ನಮ್ಮ ಕಿವಿಗೆ ಹೂ ಮುಡಿಸುವುದು ಬೇಡ. ಸುಳ್ಳು ಹೇಳುವುದನ್ನು ನಿಲ್ಲಿಸಿ ನುಡಿದಂತೆ ನಡೆದುಕೊಳ್ಳಬೇಕು. ಇಲ್ಲದಿದ್ದರೆ ಅವರ ವಿರುದ್ಧವೂ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿ ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿ ಪದ ಬಳಿಸಿರುವ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಇನ್ನಾದರೂ ತಮ್ಮ ನಡವಳಿಕೆಯಲ್ಲಿ ಬದಲಾವಣೆ ಮಾಡಿಕೊಳ್ಳಲಿ ಎಂದು ಸಲಹೆ ನೀಡಿದರು.

ಸಂಸದರು, ಮುಖ್ಯಮಂತ್ರಿಗಳು, ಅರಣ್ಯ, ಕಂದಾಯ ಸಚಿವರಿಗೆ ಸಧ್ಯದಲ್ಲೇ ಕಾಫಿ ಬೆಳೆಯುವ ಪ್ರದೇಶಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಈ ಮೂರು ಜಿಲ್ಲೆಗಳ ಬೆಳೆಗಾರರ ಸಂಘಟನೆ ನೇತೃತ್ವದಲ್ಲಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಮಹಮದ್ ಅಕ್ಬರ್, ಶಾಂತಕುಮಾರ್, ಪ್ರಧಾನ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ ಉಪಸ್ಥಿತರಿದ್ದರು.

Devaraj demands repeal of SARFAESI Act

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...