Home namma chikmagalur ದೇವರಾಜ ಅರಸು ಕ್ರಾಂತಿಕಾರಿ ನಿಲುವುಗಳಿಂದ ರಾಜ್ಯಕ್ಕೆ ಅಪ್ರತಿಮ ಕೊಡುಗೆ
namma chikmagalurchikamagalurHomeLatest News

ದೇವರಾಜ ಅರಸು ಕ್ರಾಂತಿಕಾರಿ ನಿಲುವುಗಳಿಂದ ರಾಜ್ಯಕ್ಕೆ ಅಪ್ರತಿಮ ಕೊಡುಗೆ

Share
Share

ಚಿಕ್ಕಮಗಳೂರು:  ಸುದೀರ್ಘ ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ತಮ್ಮ ಕ್ರಾಂತಿಕಾರಿ ನಿಲುವುಗಳಿಂದ ರಾಜ್ಯಕ್ಕೆ ಅಪ್ರತಿಮ ಕೊಡುಗೆಯನ್ನು ನೀಡಿದವರು ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರು ಎಂದು ಕರ್ನಾಟಕ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಂಯುಕ್ತ ಆಶ್ರಯದಲ್ಲಿ ಇಂದು ನಗರದ ಜಿಲ್ಲಾ ಪೊಲೀಸ್ ಸಮುದಾಯ ಭವನದಲ್ಲಿ ಪರಿವರ್ತನೆಯ ಹರಿಕಾರ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸುರವರ ೧೧೦ನೇ ಜನ್ಮ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ದೇವರಾಜ ಅರಸುರವರು ಸುದೀರ್ಘಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಪರಿಶಿಷ್ಟ ಜಾತಿ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹಾವನೂರು ಆಯೋಗವನ್ನು ರಚಿಸಿ, ನಂತರದ ದಿನಗಳಲ್ಲಿ ಅಲ್ಪಸಂಖ್ಯಾತರ ಇಲಾಖೆ ಹಾಗೂ ಹಿಂದುಳಿದ ವರ್ಗದ ನಿಗಮ, ಮಂಡಳಿಯನ್ನು ಪ್ರಾರಂಭಿಸಿದರು. ಜೀತ ಪದ್ಧತಿಯನ್ನು ರದ್ದುಗೊಳಿಸಿ, ಬಡವರು ಹಾಗೂ ಶ್ರೀಮಂತರ ನಡುವೆ ಇರುವ ಅಂತರ ಹಾಗೂ ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಲು ಶ್ರಮಿಸಿದ್ದ ಅವರು, ೧೯೭೩ರಲ್ಲಿ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಲು ಕಾರಣೀಭೂತರಾದವರು ಎಂದರು.

ನಂತರ ರೈತರಿಗೆ ಅನುಕೂಲವಾಗುವಂತೆ ಕಾಳಿ ಯೋಜನೆಯನ್ನು ಜಾರಿಗೆ ತಂದರು. ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ಹಿಂದುಳಿದ ವರ್ಗದವರು ಶೈಕ್ಷಣಿಕ ಕ್ಷೇತ್ರದಲ್ಲಿ ಮುಂದುವರಿಯಬೇಕೆಂಬ ಆಶಯ ಹೊಂದಿದ್ದರು. ಈ ಕಾರಣದಿಂದಲೇ ಹಿಂದುಳಿದ ವರ್ಗದವರಿಗೆ ಹಾಗೂ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯವನ್ನು ಒದಗಿಸಿ, ವಿದ್ಯಾವಂತ ನಿರುದ್ಯೋಗಿಗಳಿಗೆ ಸ್ಟೈಫಂಡರಿ ಯೋಜನೆಯಲ್ಲಿ ಉದ್ಯೋಗ ಕಲ್ಪಿಸಿದ್ದರು. ಬಡವರ ಧ್ವನಿಯಾಗಿ ಭೂಸುಧಾರಣೆಯನ್ನು ಜಾರಿಗೆ ತಂದು ಉಳುವವನೇ ಭೂಮಿಯ ಹೊಲದೊಡೆಯ ಎನ್ನುವ ಕಾನೂನನ್ನು ಜಾರಿಗೆ ತಂದರು ಎಂದು ತಿಳಿಸಿದರು.

ಅಂದು ಶೃಂಗೇರಿ ಕ್ಷೇತ್ರದ ಶಾಸಕರಾಗಿದ್ದ ತಮ್ಮ ತಂದೆ ಬೇಗಾನೆ ರಾಮಯ್ಯನವರು ಅರಸು ಅವರ ನಿಕಟವರ್ತಿಯಾಗಿ ಭೂಸುಧಾರಣಾ ಸಮಿತಿಯ ಸದಸ್ಯರೂ ಆಗಿದ್ದರು. ನಂತರ ಅವರು ಈ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಮಲೆನಾಡು ಭಾಗಕ್ಕೆ ಬೋರ್‌ವೆಲ್ ಅನ್ನು ಒದಗಿಸುವ ಮೂಲಕ ಬೋರ್‌ವೆಲ್ ರಾಮಯ್ಯ ಎಂದೇ ಖ್ಯಾತಿ ಪಡೆದಿದ್ದರು ಎಂದು ಹೇಳಿದರು.

ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿ, ಇಂದು ದೇಶ ಕಂಡ ಅಪ್ರತಿಮ ನಾಯಕ ದೇವರಾಜ ಅರಸು ಅವರ ಹಾಗೂ ಆಧುನಿಕ ತಂತ್ರಜ್ಞಾನದ ಹರಿಕಾರರಾಗಿದ್ದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿಯವರ ಹುಟ್ಟುಹಬ್ಬವೂ ಆಗಿದೆ. ತಮ್ಮ ದಕ್ಷ ಆಡಳಿತದ ಮೂಲಕ ಹಲವಾರು ದೂರದೃಷ್ಟಿಯ ಕಾರ್ಯಕ್ರಮಗಳನ್ನು ನೀಡಿದ ದೇವರಾಜ ಅರಸು, ಭೂ ಒಡೆತನದ ಹಕ್ಕು ನೀಡಿರುವುದು ಮಾತ್ರವಲ್ಲ, ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿಯವರ ೨೦ ಅಂಶಗಳ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದವರು. ಗ್ರಾಮೀಣ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಅನುಕೂಲವಾಗುವಂತೆ ಹಾಸ್ಟೆಲ್ ಸೌಲಭ್ಯವಲ್ಲದೆ, ವಿದ್ಯಾರ್ಥಿ ವೇತನವನ್ನು ನೀಡುವ ವ್ಯವಸ್ಥೆಯನ್ನು ಜಾರಿಗೆ ತಂದು ಬಡವರಿಗೆ ಬದುಕು ಕಟ್ಟಿಕೊಟ್ಟವರು ಎಂದು ತಿಳಿಸಿದರು.

ದಿ.ಡಿ.ದೇವರಾಜ ಅರಸು ಅವರ ತತ್ವ ಮತ್ತು ಸಾಧನೆಗಳ ಬಗ್ಗೆ ಐಡಿಎಸ್‌ಜಿ ಸರ್ಕಾರಿ ಕಾಲೇಜಿನ ಅರ್ಥಶಾಸ್ತ್ರ-ಸ್ನಾತಕೋತ್ತರ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಲಕ್ಷ್ಮೀಕಾಂತ್ ಉಪನ್ಯಾಸ ನೀಡಿ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಒಬ್ಬ ಶ್ರೇಷ್ಠ ಮತ್ತು ಧೀಮಂತ ನಾಯಕ, ದಾರ್ಶನಿಕ. ೧೯೬೯ ರಿಂದ ೧೯೭೯ರವರೆಗಿನ ಕಾಲಘಟ್ಟವನ್ನು ಅರಸು ಯುಗವೆಂದು ಕರೆಯಲಾಗುತ್ತದೆ. ೧೯೬೯-೭೦ರ ಅವಧಿಯಲ್ಲಿ ರಾಜ್ಯದ ಅವಿಸ್ಮರಣೀಯ ಬೆಳವಣಿಗೆಗೆ ಉತ್ತಮ ಅಡಿಪಾಯವನ್ನು ಹಾಕಿಕೊಟ್ಟವರು. ಅವರು ವಿಶೇಷವಾಗಿ ದೀನ ದಲಿತರು, ಬಡವರು, ಹಿಂದುಳಿದವರ ಬಗ್ಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದವರು. ಶೋಷಿತ ಜನರ ಕಷ್ಟ ಕಾರ್ಪಣ್ಯವನ್ನು ಅರಿತುಕೊಂಡಿದ್ದರು. ಬಡತನ ನಿರ್ಮೂಲನೆಗೆ ಶ್ರಮಿಸಿದ ಮಹಾನ್ ನಾಯಕ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪೌತಿ ಖಾತೆಯ ವಾರಸುದಾರರಿಗೆ ಪಹಣಿಗಳನ್ನು ವಿತರಿಸಲಾಯಿತು. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಜಿಲ್ಲಾ ಅರಸು ಸಂಘದ ಅಧ್ಯಕ್ಷ ಕೆ.ಜೆ.ಮಂಜುನಾಥ ರಾಜ್ ಅರಸ್, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ನಾಗರಾಜ ಅರಸ್, ನಗರಸಭೆ ಸದಸ್ಯರುಗಳಾದ ಮಧುಕುಮಾರ್ ರಾಜೇ ಅರಸ್, ಪರಮೇಶ್ ಅರಸ್, ಅಲೆಮಾರಿ ಸಂಘದ ಅಧ್ಯಕ್ಷ ಚಂದ್ರಶೇಖರ್, ಉಪವಿಭಾಗಾಧಿಕಾರಿ ಸುದರ್ಶನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ರೀನಿವಾಸ ಆಲದರ್ತಿ, ಮುಖಂಡರಾದ ಕೆ.ಟಿ.ರಾಧಾಕೃಷ್ಣ, ಹೆಚ್.ಪಿ.ಮಂಜೇಗೌಡ, ಜಯರಾಜ ಅರಸ್ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಎನ್.ಮಂಜುನಾಥ್ ಸ್ವಾಗತಿಸಿದರು. ಮಲ್ಲಿಗೆ ಸುಧೀರ್ ಮತ್ತು ತಂಡದವರು ನಾಡಗೀತೆ ಹಾಗೂ ಗೀತ ಗಾಯನ ನಡೆಸಿಕೊಟ್ಟರು.

ಇದಕ್ಕೂ ತಾಲ್ಲೂಕು ಕಚೇರಿ ಆವರಣದಿಂದ ಆರಂಭಗೊಂಡ ಮೆರವಣಿಗೆಗೆ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಚಾಲನೆ ನೀಡಿದರು.

Devaraja Urs made an unparalleled contribution to the state with his revolutionary stances.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...