Home Latest News ಎರಡುದಿನ ದೇವೀರಮ್ಮ ಬೆಟ್ಟಹತ್ತಲು ಅವಕಾಶ
Latest NewschikamagalurHomenamma chikmagalur

ಎರಡುದಿನ ದೇವೀರಮ್ಮ ಬೆಟ್ಟಹತ್ತಲು ಅವಕಾಶ

Share
Share

ಚಿಕ್ಕಮಗಳೂರು: ತಾಲ್ಲೂಕು ಮಲ್ಲೇನಹಳ್ಳಿ ಬಿಂಡಿಗ ಆದಿಶಕ್ತ್ಯಾತ್ಮಕ ಶ್ರೀ ದೇವೀರಮ್ಮನವರ ದೀಪೋತ್ಸವ ಅ.೧೯ ರಿಂದ ೨೩ ರವರೆಗೆ ನಡೆಯಲಿದ್ದು, ಬೆಟ್ಟ ಹತ್ತಲು ರಾತ್ರಿ ಹೊರತುಪಡಿಸಿ ೨ ದಿನ ಅವಕಾಶ ಕಲ್ಪಿಸಲಾಗಿದೆ ಎಂದು ವ್ಯವಸ್ಥಾಪನಾ ಸಮಿತಿ ವ್ಯವಸ್ಥಾಪಕ ಕುಲಶೇಖರ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅ.೧೯ ರಂದು ಬೆಳಗ್ಗೆ ೯ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಹಾಗೂ ಅ.೨೦ ರಂದು ಬೆಳಗ್ಗೆ ೭ ಗಂಟೆಯಿಂದ ಬೆಟ್ಟ ಹತ್ತಲು ಭಕ್ತರಿಗೆ ಅವಕಾಶ ನೀಡಲಾಗಿದ್ದು, ಗಿರಿಪ್ರದೇಶದಲ್ಲಿ ಈ ಬಾರಿ ಅತಿ ಹೆಚ್ಚು ಮಳೆಯಾಗುತ್ತಿರುವ ಕಾರಣ ರಾತ್ರಿ ಬೆಟ್ಟ ಹತ್ತುವುದನ್ನು ನಿಷೇಧಿಸಲಾಗಿದೆ, ಭಕ್ತರು ಸಹಕರಿಸಬೇಕೆಂದು ಮನವಿ ಮಾಡಿದರು.

ಅ.೧೯ ರಂದು ಬೆಳಗ್ಗೆ ೭ ಗಂಟೆಗೆ ಬೆಟ್ಟದಲ್ಲಿ ಅಭಿಷೇಕ, ಪೂಜಾ ಕಾರ್ಯಕ್ರಮಗಳು ಜರುಗಿದ ಬಳಿಕ ೯ ರಿಂದ ೫ ಗಂಟೆಯವರೆಗೆ ದೇವೀರಮ್ಮ ದೇವಿಯವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ೨೦ ರಂದು ೩ ಗಂಟೆಯವರೆಗೆ ಮಾತ್ರ ದೇವಿ ದರ್ಶನಕ್ಕೆ ಅವಕಾಶವಿದ್ದು, ಸಂಜೆ ೭ ಗಂಟೆಗೆ ದೀಪೋತ್ಸವ ನಡೆಯಲಿದೆ ಎಂದರು.

೨೧ ರಂದು ದೇವೀರಮ್ಮ ದೇವಸ್ಥಾನದಲ್ಲಿ ದೇವಿಯವರಿಗೆ ಉಡುಗೆ ಪೂಜೆ, ಸಂಜೆ ೬.೩೦ ಕ್ಕೆ ಬೆಣ್ಣೆಬಟ್ಟೆ ಸುಡುವುದು ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ೨೨ ರಂದು ಮಹಾಗಣಪತಿ ಪೂಜೆ, ಕುಂಕುಮಾರ್ಚನೆ ಇತ್ಯಾದಿ. ೨೩ ರಂದು ಮಹಾಮಂಗಳಾರತಿ, ಹರಕೆ ಒಪ್ಪಿಸುವುದು, ತೀರ್ಥಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಶ್ರೀ ಕ್ಷೇತ್ರದಲ್ಲಿ ನಡೆಯುವ ಪ್ರಸಾದ ವಿನಿಯೋಗಕ್ಕೆ ಅಕ್ಕಿ, ಬೇಳೆ, ಎಣ್ಣೆ ಹಾಗೂ ಧನಸಹಾಯ ಮಾಡುವವರು ಕ್ಷೇತ್ರಕ್ಕೆ ತಂದು ಒಪ್ಪಿಸಬಹುದಾಗಿದೆ. ಬೆಟ್ಟದ ಮೇಲೆ ತೆಂಗಿನಕಾಯಿ ಒಡೆಯುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದರು.

ದೇವಿಯ ದರ್ಶನವಾದ ಬಳಿಕ ಬೆಟ್ಟದ ಮೇಲೆ ಕುಳಿತುಕೊಳ್ಳದೆ ಕೆಳಗೆ ಇಳಿಯಬೇಕು, ಬೆಟ್ಟದ ಹಾಗೂ ದೇವಸ್ಥಾನದ ಸುತ್ತಮುತ್ತ ಪ್ಲಾಸ್ಟಿಕ್ ಇತ್ಯಾದಿ ತ್ಯಾಜ್ಯ ವಸ್ತುಗಳನ್ನು ಎಸೆಯಬಾರದು, ದೇವಸ್ಥಾನದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ತರೀಕೆರೆ, ಬೀರೂರು, ಕಡೂರು, ಚಿಕ್ಕಮಗಳೂರಿನಿಂದ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದರು.

ಬೆಟ್ಟದಲ್ಲಿ ಪಟಾಕಿ ಒಡೆಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ, ಭಕ್ತರು ಸ್ವಚ್ಚತೆ ಕಾಪಾಡುವ ಜೊತೆಗೆ ಪರಿಸರದ ಕಾಳಜಿಯನ್ನು ಹೊಂದಬೇಕು ಎಂದು ಹೇಳಿದ ಅವರು, ಬೆಟ್ಟಹತ್ತುವ ಸಂದರ್ಭದಲ್ಲಿ ಭಕ್ತರು ನೂಕುನುಗ್ಗಲು ನಿಯಂತ್ರಣಕ್ಕೆ ಗ್ರಾಮಸ್ಥರ ೨೫೦ ಸ್ವಯಂಸೇವಕ ಯುವಕರನ್ನು ನೇಮಕ ಮಾಡಿದ್ದೇವೆಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್ ಕಾರ್ಯದರ್ಶಿ ಬಸವರಾಜ್‌ಗೌಡ, ಸದಸ್ಯರುಗಳಾದ ನಿಂಗೇಗೌಡ, ಸುನಿಲ್‌ಕುಮಾರ್, ದಿನೇಶ್, ಹರೀಶ್ ಉಪಸ್ಥಿತರಿದ್ದರು.

Deviramma allowed to climb the mountain for two days

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...