Home Latest News ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದು ಕಾಲು ಮುರಿತ : ಹಲವರು ಅಸ್ವಸ್ಥ
Latest News

ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದು ಕಾಲು ಮುರಿತ : ಹಲವರು ಅಸ್ವಸ್ಥ

Share
Share

ಚಿಕ್ಕಮಗಳೂರು : ವರ್ಷಕ್ಕೊಮ್ಮೆ ದರ್ಶನ ನೀಡುವ ಚಿಕ್ಕಮಗಳೂರಿನ ಅದಿ ದೇವತೆ ದೇವಿರಮ್ಮ ಬೆಟ್ಟ ಹತ್ತಲು ಮಳೆಯ ನಡುವೆಯೂ ಸಾವಿರಾರು ಭಕ್ತರು ಆಗಮಿಸಿದ್ದಾರೆ , ಕಿರಿದಾದ ರಸ್ತೆಯಲ್ಲಿ ಜಾರಿಕೆ ಮಧ್ಯೆಯೂ ದೇವೀರಮ್ಮನ ಬೆಟ್ಟ ಹತ್ತುತ್ತಿದ್ದು ಈ ವೇಳೆ ಕೆಲವು ಭಕ್ತರಿಗೆ ನಾನಾ ರೀತಿಯ ತೊಂದರೆಗಳು ಉಂಟಾಗಿವೆ.

ಬೆಟ್ಟದಲ್ಲಿ ಪ್ರಜ್ಞೆ ತಪ್ಪಿ 25 ವರ್ಷದ ಯುವತಿ ಸಿಂಧು ಬಿದ್ದಿದ್ದರೆ
ಬೆಂಗಳೂರು ಮೂಲದ 30 ವರ್ಷದ ದಿವ್ಯಾ ಎಂಬ ಯುವತಿಗೆ ಕಾಲು ಮುರಿತವಾಗಿದೆ. ಲೋ ಬಿಪಿಯಿಂದ ಗುಡ್ಡದಲ್ಲೇ ಸುಸ್ತಾಗಿ ಮಂಗಳೂರಿನ 55 ವರ್ಷದ ಜಯಮ್ಮ ಅಲ್ಲಿಯೇ ಕುಳಿತಿದ್ದಾರೆ. ಅಲ್ಲದೇ ಜಾರಿ ಬಿದ್ದು ತರೀಕೆರೆ ಮೂಲದ ವೇಣು ಎಂಬ ಯುವಕನ ತಲೆಗೆ ಗಾಯವಾಗಿದೆ. ಈ ಎಲ್ಲರನ್ನೂ ಸುರಕ್ಷಿತವಾಗಿ ಸ್ಟ್ರೆಚ್ಚರನಲ್ಲಿ ಪೊಲೀಸರು ಹೊತ್ತು ತಂದಿದ್ದಾರೆ. ಪೊಲೀಸರಿಗೆ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ರಕ್ಷಣೆ ಕಾರ್ಯದಲ್ಲಿ ತೊಡಗಿದ್ದಾರೆ. ಇದೇ ದೇವೀರಮ್ಮನ ಬೆಟ್ಟ ಹತ್ತುವಾಗ ಮತ್ತೊಬ್ಬ ಯುವತಿ ಕಾಲು ಉಳುಕಿ, ಪ್ರಜ್ಞೆ ತಪ್ಪಿದ್ದಾಳೆ
ದೇವೀರಮ್ಮ ದರ್ಶನ ಪಡೆದು ಹಿಂದಿರುಗುವಾಗ ಈ ಘಟನೆ ನಡೆದಿದೆ ಯುವತಿಯನ್ನು ಬೇಲೂರು ತಾಲೂಕಿನ ಎಂಸಂದಿ ಗ್ರಾಮದ ಸಿಂಚನ ಎಂದು ಗುರುತಿಸಲಾಗಿದೆ.
ಆಂಬುಲೆನ್ಸ್ ಆಕೆಯನ್ನು ರವಾನೆ ಮಾಡಲಾಗಿದೆ. ಅದಲ್ಲದೇ ಅಸ್ವಸ್ಥ ಗೊಂಡವರನ್ನ ಗುಡ್ಡದಿಂದ ತಂದು ಜಿಲ್ಲಾ ಆಸ್ಪತ್ರೆಗೆ ರೆಸ್ಕ್ಯೂ ಟೀಂ ಸೇರಿಸಿ ಚಿಕಿತ್ಸೆ ಕೊಡಿಸುತ್ತಿದೆ. ನಿನ್ನೆ ಸಂಜೆ ಯಿಂದಲೂ ಮಳೆಗೆ ದೇವಿರಮ್ಮ ಗುಡ್ಡ ಜಾರುತ್ತಿರೋ ಘಟನೆಗಳು ನಡೆಯುತ್ತಿವೆ. ಈ ನಡುವೆ ಹಗ್ಗ ಹಿಡಿದೆ ಕಿ.ಮೀ.ಗಟ್ಟಲೇ ಗುಡ್ಡವನ್ನು ಭಕ್ತರು ಹತ್ತುತ್ತಿರೋ ದೃಶ್ಯ ಸಾಮಾನ್ಯವಾಗಿದೆ. ಚಿಕ್ಕಮಗಳೂರು ತಾಲೂಕಿನ ಪಶ್ಚಿಮ ಘಟ್ಟಗಳ ತಪ್ಪಲಿನ ದೇವೀರಮ್ಮನ ಗುಡ್ಡ ಇಂದು ಭಕ್ತರಿಂದ ತುಂಬಿ ತುಳುಕುತ್ತಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....