Home Crime News ಹಸುಗೂಸನ್ನೆ ಕತ್ತುಹಿಸುಕಿ ಕೊಂದರು….?
Crime NewsHomeLatest Newsnamma chikmagalurTarikere

ಹಸುಗೂಸನ್ನೆ ಕತ್ತುಹಿಸುಕಿ ಕೊಂದರು….?

Share
Share

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಹೃದಯವಿದ್ರಾವಕ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.

ಮದುವೆಯಾಗದ ಮೊಮ್ಮಗಳು ಗರ್ಭಿಣಿಯಾದ ವಿಷಯ ಹೊರಗೆ ತಿಳಿದರೆ ಎಲ್ಲಿ ಗೌರವ ಹೋಗುತ್ತದೆಯೋ ಎಂಬ ಭಯಕ್ಕೆ, ಮಗು ಜನಿಸಿದ ಹುಟ್ಟಿದ ಕೇವಲ ಒಂದೇ ನಿಮಿಷಕ್ಕೆ ಗಂಡು ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ತರೀಕೆರೆ ತಾಲೂಕಿನಲ್ಲಿ ನಡೆದಿದೆ.

ಮದುವೆಗೆ ಮೊದಲೇ ಯುವತಿ ಗರ್ಭಿಣಿಯಾಗಿದ್ದು, ಕುಟುಂಬದ ಗೌರವದ ದೃಷ್ಟಿಯಿಂದ ಈ ವಿಷಯವನ್ನು ಗುಟ್ಟಾಗಿಡಲಾಗಿತ್ತು. ಕಳೆದ ೧೫ ದಿನಗಳ ಹಿಂದೆ ಮನೆಯಲ್ಲೇ ಯುವತಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ.

ಆಸ್ಪತ್ರೆಗೆ ಹೋದರೆ ವಿಷಯ ಜಗಜ್ಜಾಹಿರಾಗುತ್ತದೆ ಎಂಬ ಕಾರಣಕ್ಕೆ, ನರ್ಸ್ ಆಗಿದ್ದ ಯುವತಿ ತನ್ನ ತಂದೆ-ತಾಯಿ ಮತ್ತು ಅಜ್ಜಿಯ ಸಹಾಯದಿಂದ ಮನೆಯಲ್ಲೇ ಹೆರಿಗೆ ಮಾಡಿಸಿಕೊಂಡಿದ್ದಾಳೆ.

ಮಗು ಹುಟ್ಟಿದ ತಕ್ಷಣ ಮನೆಯವರೆಲ್ಲಾ ಸೇರಿ ಕ್ರೂರ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ಹಸುಗೂಸು ಕಣ್ಣು ಬಿಡುವ ಮೊದಲೇ, ಆಕೆಯ ಅಜ್ಜಿ ಮಗುವಿನ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ
ಎನ್ನಲಾಗಿದೆ.

ನಂತರ ಮಗುವನ್ನು ಬ್ಯಾಗ್‌ನಲ್ಲಿ ತುಂಬಿಸಿಕೊಂಡು ಹೋಗಿ, ಜನವಸತಿ ಇಲ್ಲದ ತಿಪ್ಪೆಯ ಗುಂಡಿಯೊಂದರಲ್ಲಿ ಹೂತು ಬಂದಿದ್ದಾರೆಂದು ಆರೋಪಿಸಲಾಗಿದೆ.

Did they strangle a cow and kill it?

Share

Leave a comment

Leave a Reply

Your email address will not be published. Required fields are marked *

Don't Miss

ಸಿ.ಡಿ.ಎ ಮಾಜಿ ಅಧ್ಯಕ್ಷ ಆನಂದ್ ಮೇಲೆ ಹಲ್ಲೆ …?

ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ.ರವಿ ಆಪ್ತ ಸುದರ್ಶನ್ ಬಲಗೈ ಬಂಟ ಹಾಲಿ ಮೂಗ್ತಿಹಳ್ಳಿ ಸಹಕಾರ ಸಂಘದ ಅಧ್ಯಕ್ಷ ಆನಂದ್ ನ ರಸಲೀಲೆ ನಡೆಸುತ್ತಿದ್ದಾರೆ ಎಂದು ಕೆಲವರು ಹೋಮ್ ಸ್ಟೇಗೆ ನುಗ್ಗಿ ಗಲಾಟೆ...

ರೈತರಿಗೆ ತೋಟಗಾರಿಕೆ ಬೆಳೆಗಳ ಬಗ್ಗೆ ಮಾಹಿತಿ ನೀಡುವುದೇ ಚೈತ್ರೋತ್ಸವದ ಉದ್ದೇಶ

ಚಿಕ್ಕಮಗಳೂರು: ಜಿಲ್ಲೆಯರೈತರು ಮತ್ತು ಬೆಳೆಗಾರರಿಗೆ ತೋಟಗಾರಿಕೆ ಬೆಳೆಗಳ ಬಗ್ಗೆ ಉಪಯುಕ್ತ ಮಾಹಿತಿ ನೀಡುವುದೇಚೈತ್ರೋತ್ಸವದಉದ್ದೇಶಎಂದುಜಿಲ್ಲಾಧಿಕಾರಿಎಂ.ಎನ್ ನಾಗರಾಜ್ ತಿಳಿಸಿದರು. ಅವರುಇಂದು ನಗರದ ನೇತಾಜಿ ಸುಭಾಷ್‌ಚಂದ್ರಬೋಸ್‌ಜಿಲ್ಲಾಆಟದ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪಶುಪಾಲನಾ ಮತ್ತು ಪಶು...

Related Articles

ಲಾಭಾಂಶ ಆಮಿಷ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ

ಚಿಕ್ಕಮಗಳೂರು: ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಯುವಕನೊಬ್ಬನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ...

ಸಿಡಿಎ ಅಧ್ಯಕ್ಷರಾಗಿ ಎಚ್‌.ಪಿ. ಮಂಜೇಗೌಡ ನೇಮಕ

ಚಿಕ್ಕಮಗಳೂರು: ಚಿಕ್ಕಮಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಸಿಡಿಎ) ಚಿಕ್ಕಮಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಪಿ. ಮಂಜೇಗೌಡ ಅವರನ್ನು...

ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ರಾಮಚಂದ್ರ ಬಿಗಿ ಪಟ್ಟು

ಚಿಕ್ಕಮಗಳೂರು: ಹಿರೇಮಗಳೂರು ರಾಮಚಂದ್ರ ಸಿ.ಡಿ.ಎ.ಅಧ್ಯಕ್ಷ ಸ್ಥಾನ ಪಡೆಯಲು ಬಿಗಿ ಪಟ್ಟು ಹಿಡಿದು ಒತ್ತಾಯ ಮಾಡುತ್ತಿದ್ದಾರೆ. ಕಳೆದ...

ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಸಾವು

ಚಿಕ್ಕಮಗಳೂರು :ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಸಾವಪ್ಪಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್...