Home namma chikmagalur ರಾಜ್ಯದಲ್ಲಿ ಒಂದು ಲಕ್ಷ ಯುವಕರಿಗೆ ವಿಪತ್ತು ನಿರ್ವಹಣಾ ತರಬೇತಿ
namma chikmagalurchikamagalurHomeLatest News

ರಾಜ್ಯದಲ್ಲಿ ಒಂದು ಲಕ್ಷ ಯುವಕರಿಗೆ ವಿಪತ್ತು ನಿರ್ವಹಣಾ ತರಬೇತಿ

Share
Share

ಚಿಕ್ಕಮಗಳೂರು: ಕರಾವಳಿ, ಬಯಲು ಸೀಮೆ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅತಿವೃಷ್ಠಿ, ಪ್ರವಾಹ, ಬರಗಾಲದಂತಹ ಪ್ರಾಕೃತಿಕ ವಿಕೋಪಗಳು ಸಾಮಾನ್ಯ. ರಾಜ್ಯದಲ್ಲಿ ಒಂದು ಲಕ್ಷ ಯುವಕರಿಗೆ ವಿಪತ್ತು ನಿರ್ವಹಣಾ ತರಬೇತಿ ನೀಡಲಾಗುವುದು ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪ್ರಧಾನ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಹೇಳಿದರು.

ನಗರದ ಸ್ಕೌಟ್ ಮತ್ತು ಗೈಡ್ಸ್‌ ಸಭಾಂಗಣದಲ್ಲಿ ಕುವೆಂಪು ವಿಶ್ವವಿದ್ಯಾಲಯ ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಆಯೋಜಿಸಿದ್ದ ಸಾಮಾನ್ಯ ಮಾಹಿತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಕೃತಿ ವಿಕೋಪ ಸಂಭವಿಸಿದಾಗ ಸ್ಥಳೀಯ ಯುವಕರು ಕೂಡಲೇ ಸ್ಪಂದಿಸಬೇಕು. ಪರಿಹಾರ ಕಾರ್ಯದಲ್ಲಿ ಆಡಳಿತದೊಂದಿಗೆ ಕೈ ಜೋಡಿಸಬೇಕು. ಕಾರ್ಯಕ್ಷಮತೆಯಲ್ಲಿ ಅವರನ್ನು ಸಜ್ಜಾಗಿಸಲು 18 ರಿಂದ 25 ವಯಸ್ಸಿನ ಪದವಿ ಪೂರ್ವ ಹಾಗೂ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ತರಬೇತಿ ಕೊಡಿಸುತ್ತಿದೆ.  ಪ್ರತಿ ವಿದ್ಯಾರ್ಥಿಗೆ ₹10 ಸಾವಿರ  ಅನುದಾನ ನೀಡುತ್ತಿದೆ ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ರಾಜ್ಯದ ಐದು ಜಿಲ್ಲೆಗಳಲ್ಲಿ 10 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗಿದೆ ಎಂದು ಹೇಳಿದರು.

ಸರ್ಕಾರ ಎಲ್ಲಾ ಪದವಿಪೂರ್ವ ಹಾಗೂ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಡ್ಡಾಯವಾಗಿ ಘಟಕ ಸ್ಥಾಪಿಸಲು ಆದೇಶಿಸಿದೆ. ಸದಾ ಸಿದ್ಧರಾಗಿರುವ ಒಂದು ಸೇವಾ ಪಡೆ ನಿರ್ಮಿಸಲು ಕಾಲೇಜುಗಳ ಆಡಳಿತ ಮಂಡಲಿ, ಪ್ರಾಂಶುಪಾಲರು ಹಾಗೂ ಉತ್ಸುಕ ಪ್ರಾಧ್ಯಾಪಕರು ಈ ರಾಷ್ಟ್ರೀಯ ಅಭಿಯಾನದಲ್ಲಿ ಕೈ ಜೋಡಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಮುಖ್ಯ ಆಯುಕ್ತ ಎಂ.ಎನ್.ಷಡಕ್ಷರಿ ಮಾತನಾಡಿ, ‘ಯುವಕರು ದುಶ್ಚಟ ಹಾಗೂ ಆಕರ್ಷಣೆಗೆ ಒಳಗಾಗದೆ ಸಮಾಜ ಕಟ್ಟುವ ಕೆಲಸ ಮಾಡಬೇಕು. ದೇಶದಲ್ಲಿ ಶೇ 60ರಷ್ಟು ಯುವಕರಿದ್ದು, ಅವರ ನಿರ್ಣಾಯಕ ವಯೋಮಾನದಲ್ಲಿ ಇರುವ ಜವಾಬ್ದಾರಿ ನಮ್ಮ ಮೇಲಿದೆ. ಕಾಲೇಜಿನ ಪ್ರಾಧ್ಯಾಪಕರು ಸಿಕ್ಕಿರುವ ಈ ಅವಕಾಶ ಉಪಯೋಗಿಸಿಕೊಳ್ಳಬೇಕು’ ಎಂದರು.

‘ಜಿಲ್ಲೆಯಲ್ಲಿ ಸುಮಾರು 90 ಪದವಿ ಕಾಲೇಜುಗಳಿದ್ದು, ಎಲ್ಲರೂ ಕಡ್ಡಾಯವಾಗಿ ರೋವರ್ಸ್‌ ಮತ್ತು ರೇಂಜರ್ಸ್‌ ಘಟಕಗಳನ್ನು ಕಡ್ಡಾಯವಾಗಿ ಪ್ರಾರಂಭಿಸಬೇಕು’ ಎಂದು ಪದವಿ ಪೂರ್ವ ಕಾಲೇಜಿನ ಉಪನಿರ್ದೇಶಕಿ ಮಂಜುಳಾ ತಿಳಿಸಿದರು. ಸಂಬಂಧಪಟ್ಟ ಶಾಲೆಯ ಪ್ರಾಂಶುಪಾಲರು ಆಸಕ್ತಿ ವಹಿಸಿ ಕಾಲೇಜುಗಳಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದರು.

ಕುವೆಂಪು ವಿಶ್ವವಿದ್ಯಾನಿಲಯದ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ನೋಡಲ್ ಅಧಿಕಾರಿ ರವೀಂದ್ರಗೌಡ ಮಾತನಾಡಿ, ‘ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಬಿ.ಇಡಿ ಕಾಲೇಜುಗಳು ಸೇರಿ ಎಲ್ಲಾ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಘಟಕಗಳು ಪ್ರಾರಂಭಿಸಬೇಕು’ ಎಂದು ತಿಳಿಸಿದರು.

ನೀಲಕಂಠಾಚಾರ್, ಸಂಧ್ಯಾರಾಣಿ, ಎಂ.ಎನ್.ಷಡಕ್ಷರಿ ಅವರು ತರಬೇತಿ ನೀಡಿದರು. ಜಿಲ್ಲಾ ಗೈಡ್ಸ್ ಆಯುಕ್ತೆ ಡಿ.ಎಸ್. ಮಮತಾ, ಸ್ಕೌಟ್ ಆಯುಕ್ತ ಫಣಿರಾಜ್, ಜಿಲ್ಲಾ ಸಹಾಯಕ ಆಯುಕ್ತ ಜಿ.ಎಂ. ಗಣೇಶ್ ಉಪಸ್ಥಿತರಿದ್ದರು.

Disaster management training for one lakh youth in the state

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...